Homeಕರ್ನಾಟಕದ್ವಿತೀಯ ಪಿಯು - ‘ಜುಲೈನಿನಲ್ಲಿ ಪರೀಕ್ಷೆ, ಆಗಸ್ಟ್‌ನಲ್ಲಿ ಫಲಿತಾಂಶ ಸಾಧ್ಯತೆ’: ಸಚಿವ ಸುರೇಶ್‌ ಕುಮಾರ್‌

ದ್ವಿತೀಯ ಪಿಯು – ‘ಜುಲೈನಿನಲ್ಲಿ ಪರೀಕ್ಷೆ, ಆಗಸ್ಟ್‌ನಲ್ಲಿ ಫಲಿತಾಂಶ ಸಾಧ್ಯತೆ’: ಸಚಿವ ಸುರೇಶ್‌ ಕುಮಾರ್‌

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಲಾಗಿದೆ, ಜುಲೈ ತಿಂಗಳಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾದರೆ ಆಗಸ್ಟ್‌ನಲ್ಲಿ ಪರೀಕ್ಷಾ ಫಲಿತಾಂಶ ಘೋಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಸೋಮವಾರ ಪ್ರತಿಪಾದಿಸಿದ್ದಾರೆ.

ಅವರು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸರ್ವ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ಈ ಸಭೆಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಪರೀಕ್ಷೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದ್ದು, ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಜುಲೈಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ಎರಡನೆ ಅಲೆ ಎಲ್ಲೆಡೆ ತೀವ್ರವಾಗಿದ್ದು, ಇದು ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೊರೊನಾ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರ ಯೋಜಿಸಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌‌ನಲ್ಲಿ ಬಂದರೆ, ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್‌ನಲ್ಲಿ ಆಯೋಜಿಸಬಹುದು ಎಂದು ಸಚಿವ ಸುರೇಶ್ ಕುಮಾರ್ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...