Homeಕರ್ನಾಟಕಬೆಂಗಳೂರಿನಲ್ಲಿ ಮಿತಿಮೀರಿದ ಟ್ರಾಫಿಕ್ ಜಾಮ್, ಮಳೆಯಿಂದ ರಸ್ತೆಗಳು ಜಲಾವೃತ; ಎಂಎನ್‌ಸಿ ಕಂಪನಿಗಳನ್ನು ಆಂಧ್ರಕ್ಕೆ ಆಹ್ವಾನಿಸಿದ ನಾರಾ...

ಬೆಂಗಳೂರಿನಲ್ಲಿ ಮಿತಿಮೀರಿದ ಟ್ರಾಫಿಕ್ ಜಾಮ್, ಮಳೆಯಿಂದ ರಸ್ತೆಗಳು ಜಲಾವೃತ; ಎಂಎನ್‌ಸಿ ಕಂಪನಿಗಳನ್ನು ಆಂಧ್ರಕ್ಕೆ ಆಹ್ವಾನಿಸಿದ ನಾರಾ ಲೋಕೇಶ್

- Advertisement -
- Advertisement -

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಇತರ ಮೂಲಸೌಕರ್ಯ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಇನ್ಫೋಸಿಸ್ ಮಾಜಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಮೋಹನ್‌ದಾಸ್ ಪೈ ಅವರು ಎಕ್ಸ್‌ನಲ್ಲಿ ಟೀಕಿಸಿದ್ದಾರೆ. ಈ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್, ಬೆಂಗಳೂರಿನ ಎಲ್ಲ ಬಹುರಾಷ್ಟ್ರೀಯ ಕಂಪನಿಗಳಿಗೆ (ಎಂನ್‌ಸಿ) ತಮ್ಮ ರಾಜ್ಯಕ್ಕೆ ಸ್ಥಳಾಂತರಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.

ಕರ್ನಾಟಕದ ನಾಗರಿಕ ಸಮಸ್ಯೆಗಳ ತೀವ್ರ ಟೀಕಾಕಾರರೂ ಆಗಿರುವ ಪೈ ಅವರ ಟ್ವೀಟ್‌ಗೆ ನಾರಾ ಲೋಕೇಶ್ ಅವರ ಪ್ರತಿಕ್ರಿಯೆ ಬಂದಿದ್ದು, ಬೆಂಗಳೂರಿನಲ್ಲಿ ಹಲವಾರು ಎಂಎನ್‌ಸಿಗಳು ತೀವ್ರ ಮೂಲಸೌಕರ್ಯ ಸಮಸ್ಯೆಗಳಿಂದಾಗಿ ರಾಜ್ಯ ರಾಜಧಾನಿಯಿಂದ ಹೊರಗೆ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುವುದನ್ನು ಪರಿಗಣಿಸಲು ಕಾರಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ತಮ್ಮ ಭರವಸೆಗಳನ್ನು ಈಡೇರಿಸುತ್ತಿಲ್ಲ, ಇದು ಬೆಂಗಳೂರಿನ ನಿವಾಸಿಗಳಲ್ಲಿ ನಂಬಿಕೆ ಕುಸಿಯಲು ಕಾರಣವಾಗಿದೆ ಎಂದು ಪೈ ಹೇಳಿದರು.

“ಕಳೆದ 20 ವರ್ಷಗಳಲ್ಲಿ ಈ ರೀತಿಯ ಕೋಪ ಮತ್ತು ನೋವನ್ನು ನೋಡಿಲ್ಲ. ನಗರದ ದುರಾಡಳಿತದ ಬಗ್ಗೆ ತುಂಬಾ ದುಃಖವಾಗಿದೆ. ಸುಳ್ಳು ಭರವಸೆಗಳು, ಕ್ರಮಗಳ ಕೊರತೆ. ಇಂತಹ ಕಾರ್ಯನಿರ್ವಹಣೆಯಿಲ್ಲದ, ನಿಷ್ಠುರ, ಅಸಡ್ಡೆ ಸರ್ಕಾರವನ್ನು ಹೊಂದಲು ನಮಗೆಲ್ಲರಿಗೂ ದುಃಖದ ದಿನವಾಗಿದೆ. ತನ್ನದೇ ಆದ ನಾಗರಿಕರನ್ನು ತುಂಬಾ ಕೆಟ್ಟದಾಗಿ ನಡೆಸಿಕೊಳ್ಳುತ್ತದೆ” ಎಂದು ಪೈ ಅಸಮಾಧಾನ ಹೊರಹಾಕಿದ್ದಾರೆ.

ಟ್ವೀಟ್‌ಗೆ ಪ್ರತಿಕ್ರಿಯಿಸಿದ ನಾರಾ ಲೋಕೇಶ್, ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹೊಸ, ವ್ಯಾಪಾರ-ಸ್ನೇಹಿ ನೀತಿಗಳನ್ನು ಪರಿಚಯಿಸಿರುವ ಆಂಧ್ರಪ್ರದೇಶಕ್ಕೆ ಎಲ್ಲ ಎಂಎನ್‌ಸಿಗಳಿಗೆ ಆಹ್ವಾನವನ್ನು ನೀಡಲು ಬಯಸುತ್ತೇನೆ ಎಂದು ಗುರುವಾರ ಹೇಳಿದರು.

“ನಾವು ನಮ್ಮ ರಾಜ್ಯದ ಕಲ್ಯಾಣ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾಲುದಾರರಾಗಿ ಕೈಗಾರಿಕೆಗಳನ್ನು ನೋಡುತ್ತೇವೆ. ನಾವು ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಅಸಾಧಾರಣ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ನೀಡಲು ಸಿದ್ಧರಿದ್ದೇವೆ, ವ್ಯಾಪಾರ ಮಾಡುವ ಸುಲಭ ಮತ್ತು ವೇಗ ಎರಡನ್ನೂ ಖಾತ್ರಿಪಡಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾರಿ ಮಳೆಯಿಂದಾಗಿ ಬೆಂಗಳೂರಿನ ಟೆಕ್ ಪಾರ್ಕ್‌ಗಳಲ್ಲಿ ಪ್ರವಾಹಕ್ಕೆ ಕಾರಣವಾಯಿತು, ಕಂಪನಿಗಳು ಮನೆಯಿಂದ ಕೆಲಸ ಮಾಡುವುದಕ್ಕೆ ಸರ್ಕಾರ ಸಲಹೆ ನೀಡಿದೆ. ನಗರದಲ್ಲಿನ ಧಾರಾಕಾರ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಚೇರಿ, ಮನೆಗಳಿಗೆ ನೀರು ನುಗ್ಗಿದೆ.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳನ್ನು ನಿಭಾಯಿಸುವ ಪ್ರಯತ್ನದಲ್ಲಿ, ನಗರದ ಟೆಕ್ ಹಬ್‌ಗಳನ್ನು ಕಾಡುತ್ತಿರುವ ಪ್ರವಾಹ ಮತ್ತು ಟ್ರಾಫಿಕ್ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರಗಳನ್ನು ಒದಗಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಕರ್ನಾಟಕ ಸರ್ಕಾರ ಬುಧವಾರ ಪ್ರಕಟಿಸಿದೆ.

ಸಮಿತಿಯ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಉಪಾಧ್ಯಕ್ಷರಾಗಿ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಇರುತ್ತಾರೆ.

ಬುಧವಾರ ರಾತ್ರಿ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರೀ ಪ್ರವಾಹದಿಂದ ಉಂಟಾದ ಭಾರೀ ಟ್ರಾಫಿಕ್ ಜಾಮ್‌ನಿಂದ ಸಾವಿರಾರು ಪ್ರಯಾಣಿಕರು ತಮ್ಮ ವಾಹನಗಳನ್ನು ಅಲ್ಲೇ ಬಿಟ್ಟು ನಡೆದುಕೊಂಡು ಹೋಗಬೇಕಾಯಿತು.

ಮೂರು ಗಂಟೆಗೂ ಹೆಚ್ಚು ಕಾಲ ಕಾಸ ನಂತರ, ಪ್ರಯಾಣಿಕರು ಮನೆಗೆ ತೆರಳಲು ನಿರ್ಧರಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವು ಅವ್ಯವಸ್ಥೆಯನ್ನು ಸೆರೆಹಿಡಿದಿದೆ. ಜನರು ತಮ್ಮ ವಾಹನಗಳಿಂದ ಇಳಿದು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ; ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...