Homeಕರ್ನಾಟಕಬೆಂಗಳೂರಿನಲ್ಲಿ ಮಿತಿಮೀರಿದ ಟ್ರಾಫಿಕ್ ಜಾಮ್, ಮಳೆಯಿಂದ ರಸ್ತೆಗಳು ಜಲಾವೃತ; ಎಂಎನ್‌ಸಿ ಕಂಪನಿಗಳನ್ನು ಆಂಧ್ರಕ್ಕೆ ಆಹ್ವಾನಿಸಿದ ನಾರಾ...

ಬೆಂಗಳೂರಿನಲ್ಲಿ ಮಿತಿಮೀರಿದ ಟ್ರಾಫಿಕ್ ಜಾಮ್, ಮಳೆಯಿಂದ ರಸ್ತೆಗಳು ಜಲಾವೃತ; ಎಂಎನ್‌ಸಿ ಕಂಪನಿಗಳನ್ನು ಆಂಧ್ರಕ್ಕೆ ಆಹ್ವಾನಿಸಿದ ನಾರಾ ಲೋಕೇಶ್

- Advertisement -
- Advertisement -

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಇತರ ಮೂಲಸೌಕರ್ಯ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಇನ್ಫೋಸಿಸ್ ಮಾಜಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಮೋಹನ್‌ದಾಸ್ ಪೈ ಅವರು ಎಕ್ಸ್‌ನಲ್ಲಿ ಟೀಕಿಸಿದ್ದಾರೆ. ಈ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್, ಬೆಂಗಳೂರಿನ ಎಲ್ಲ ಬಹುರಾಷ್ಟ್ರೀಯ ಕಂಪನಿಗಳಿಗೆ (ಎಂನ್‌ಸಿ) ತಮ್ಮ ರಾಜ್ಯಕ್ಕೆ ಸ್ಥಳಾಂತರಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.

ಕರ್ನಾಟಕದ ನಾಗರಿಕ ಸಮಸ್ಯೆಗಳ ತೀವ್ರ ಟೀಕಾಕಾರರೂ ಆಗಿರುವ ಪೈ ಅವರ ಟ್ವೀಟ್‌ಗೆ ನಾರಾ ಲೋಕೇಶ್ ಅವರ ಪ್ರತಿಕ್ರಿಯೆ ಬಂದಿದ್ದು, ಬೆಂಗಳೂರಿನಲ್ಲಿ ಹಲವಾರು ಎಂಎನ್‌ಸಿಗಳು ತೀವ್ರ ಮೂಲಸೌಕರ್ಯ ಸಮಸ್ಯೆಗಳಿಂದಾಗಿ ರಾಜ್ಯ ರಾಜಧಾನಿಯಿಂದ ಹೊರಗೆ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುವುದನ್ನು ಪರಿಗಣಿಸಲು ಕಾರಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ತಮ್ಮ ಭರವಸೆಗಳನ್ನು ಈಡೇರಿಸುತ್ತಿಲ್ಲ, ಇದು ಬೆಂಗಳೂರಿನ ನಿವಾಸಿಗಳಲ್ಲಿ ನಂಬಿಕೆ ಕುಸಿಯಲು ಕಾರಣವಾಗಿದೆ ಎಂದು ಪೈ ಹೇಳಿದರು.

“ಕಳೆದ 20 ವರ್ಷಗಳಲ್ಲಿ ಈ ರೀತಿಯ ಕೋಪ ಮತ್ತು ನೋವನ್ನು ನೋಡಿಲ್ಲ. ನಗರದ ದುರಾಡಳಿತದ ಬಗ್ಗೆ ತುಂಬಾ ದುಃಖವಾಗಿದೆ. ಸುಳ್ಳು ಭರವಸೆಗಳು, ಕ್ರಮಗಳ ಕೊರತೆ. ಇಂತಹ ಕಾರ್ಯನಿರ್ವಹಣೆಯಿಲ್ಲದ, ನಿಷ್ಠುರ, ಅಸಡ್ಡೆ ಸರ್ಕಾರವನ್ನು ಹೊಂದಲು ನಮಗೆಲ್ಲರಿಗೂ ದುಃಖದ ದಿನವಾಗಿದೆ. ತನ್ನದೇ ಆದ ನಾಗರಿಕರನ್ನು ತುಂಬಾ ಕೆಟ್ಟದಾಗಿ ನಡೆಸಿಕೊಳ್ಳುತ್ತದೆ” ಎಂದು ಪೈ ಅಸಮಾಧಾನ ಹೊರಹಾಕಿದ್ದಾರೆ.

ಟ್ವೀಟ್‌ಗೆ ಪ್ರತಿಕ್ರಿಯಿಸಿದ ನಾರಾ ಲೋಕೇಶ್, ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹೊಸ, ವ್ಯಾಪಾರ-ಸ್ನೇಹಿ ನೀತಿಗಳನ್ನು ಪರಿಚಯಿಸಿರುವ ಆಂಧ್ರಪ್ರದೇಶಕ್ಕೆ ಎಲ್ಲ ಎಂಎನ್‌ಸಿಗಳಿಗೆ ಆಹ್ವಾನವನ್ನು ನೀಡಲು ಬಯಸುತ್ತೇನೆ ಎಂದು ಗುರುವಾರ ಹೇಳಿದರು.

“ನಾವು ನಮ್ಮ ರಾಜ್ಯದ ಕಲ್ಯಾಣ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾಲುದಾರರಾಗಿ ಕೈಗಾರಿಕೆಗಳನ್ನು ನೋಡುತ್ತೇವೆ. ನಾವು ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಅಸಾಧಾರಣ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ನೀಡಲು ಸಿದ್ಧರಿದ್ದೇವೆ, ವ್ಯಾಪಾರ ಮಾಡುವ ಸುಲಭ ಮತ್ತು ವೇಗ ಎರಡನ್ನೂ ಖಾತ್ರಿಪಡಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾರಿ ಮಳೆಯಿಂದಾಗಿ ಬೆಂಗಳೂರಿನ ಟೆಕ್ ಪಾರ್ಕ್‌ಗಳಲ್ಲಿ ಪ್ರವಾಹಕ್ಕೆ ಕಾರಣವಾಯಿತು, ಕಂಪನಿಗಳು ಮನೆಯಿಂದ ಕೆಲಸ ಮಾಡುವುದಕ್ಕೆ ಸರ್ಕಾರ ಸಲಹೆ ನೀಡಿದೆ. ನಗರದಲ್ಲಿನ ಧಾರಾಕಾರ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಚೇರಿ, ಮನೆಗಳಿಗೆ ನೀರು ನುಗ್ಗಿದೆ.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳನ್ನು ನಿಭಾಯಿಸುವ ಪ್ರಯತ್ನದಲ್ಲಿ, ನಗರದ ಟೆಕ್ ಹಬ್‌ಗಳನ್ನು ಕಾಡುತ್ತಿರುವ ಪ್ರವಾಹ ಮತ್ತು ಟ್ರಾಫಿಕ್ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರಗಳನ್ನು ಒದಗಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಕರ್ನಾಟಕ ಸರ್ಕಾರ ಬುಧವಾರ ಪ್ರಕಟಿಸಿದೆ.

ಸಮಿತಿಯ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಉಪಾಧ್ಯಕ್ಷರಾಗಿ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಇರುತ್ತಾರೆ.

ಬುಧವಾರ ರಾತ್ರಿ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರೀ ಪ್ರವಾಹದಿಂದ ಉಂಟಾದ ಭಾರೀ ಟ್ರಾಫಿಕ್ ಜಾಮ್‌ನಿಂದ ಸಾವಿರಾರು ಪ್ರಯಾಣಿಕರು ತಮ್ಮ ವಾಹನಗಳನ್ನು ಅಲ್ಲೇ ಬಿಟ್ಟು ನಡೆದುಕೊಂಡು ಹೋಗಬೇಕಾಯಿತು.

ಮೂರು ಗಂಟೆಗೂ ಹೆಚ್ಚು ಕಾಲ ಕಾಸ ನಂತರ, ಪ್ರಯಾಣಿಕರು ಮನೆಗೆ ತೆರಳಲು ನಿರ್ಧರಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವು ಅವ್ಯವಸ್ಥೆಯನ್ನು ಸೆರೆಹಿಡಿದಿದೆ. ಜನರು ತಮ್ಮ ವಾಹನಗಳಿಂದ ಇಳಿದು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ; ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...