Homeಕರ್ನಾಟಕಅಬಕಾರಿ ಇಲಾಖೆಯಿಂದ ₹700 ಕೋಟಿ ವಸೂಲಿ ಹೇಳಿಕೆ; ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ತಿರುಗೇಟು

ಅಬಕಾರಿ ಇಲಾಖೆಯಿಂದ ₹700 ಕೋಟಿ ವಸೂಲಿ ಹೇಳಿಕೆ; ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ತಿರುಗೇಟು

- Advertisement -
- Advertisement -

‘ಚುನಾವಣೆಗಾಗಿ ಕರ್ನಾಟಕ ಸರ್ಕಾರ ಅಬಕಾರಿ ಇಲಾಖೆಯಿಂದ ₹700 ಕೋಟಿ ಸಂಗ್ರಹಿಸಿದೆ’ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಆರೋಪಗಳು ಚುನಾವಣಾ ಭಾಷಣಕ್ಕಷ್ಟೇ ಸೀಮಿತ. ಇವುಗಳಲ್ಲಿ ಯಾವ ಸತ್ಯವೂ ಇಲ್ಲ” ಎಂದರು.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕೊರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ಆಯೋಗ ವರದಿ ಸಲ್ಲಿಸಿದ್ದು, ₹330 ಸಿಗುವ ಪಿಪಿಇ ಕಿಟ್ ಅನ್ನು ₹2,140 ಕೊಟ್ಟು ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ಬಿಜೆಪಿ ಸರ್ಕಾರ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ 700 ಕೋಟಿ ವಸೂಲಿ ಮಾಡಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಮಾಡಲು ಆಗದಿದ್ದರೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಳು ಹೇಳಲು ಇತಿಮಿತಿ ಇರಬೇಕು” ಎಂದು ಕಿಡಿಕಾರಿದರು.

“ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ ಹತಾಶರಾಗಿ ನನ್ನ ಮತ್ತು ನಮ್ಮ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ” ಎಂದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ” ಎಂದು ಹೇಳಿದರು.

“ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಂಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಈಗಾಗಲೇ ಸುಳ್ಳು ಸುದ್ದಿ ಹರಡಿ ಸಮಾಜದ ಸೌಹಾರ್ದತೆ ಲೆಡಿಸಲು ಬಿಜೆಪಿ ಆರಂಭಿಸಿದೆ. ಅವರಿಗೆ ಕೋಮುಗಲಭೆ ಸೃಷ್ಟಿಸುವುದೇ ಕಾಯಕವಾಗಿದೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...