Homeಮುಖಪುಟಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

ಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ನಿರಾಕರಣೆ ಮತ್ತು ಸಿಬಿಐ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಸೆಪ್ಟೆಂಬರ್ 13 ರ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 5 ರಂದು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಕೇಂದ್ರೀಯ ಸಂಸ್ಥೆ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಮಾಡಿರುವ ತನ್ನ ಬಂಧನದ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆಗಸ್ಟ್ 5 ರ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ತನ್ನ ಮನವಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಹೈಕೋರ್ಟ್ ಅವರಿಗೆ ಸ್ವಾತಂತ್ರ್ಯವನ್ನು ನೀಡಿತ್ತು.

ಇದನ್ನೂಓದಿ: ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ : 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಆರೋಪದ ನಂತರ ದೆಹಲಿ ಸರ್ಕಾರವು ಕಾಯ್ದೆಯನ್ನು ವಾಪಾಸು ಪಡೆದಿತ್ತು. ಆರೋಪದ ನಂತರ ಜಾರಿ ನಿರ್ದೇಶನಾಲಯ (ಇಡಿ) ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣವನ್ನು ಸಹ ದಾಖಲಿಸಿತ್ತು.

ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜುಲೈ 12 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ವಿಡಿಯೊ ನೋಡಿ: ‘ಅಭಿವೃದ್ಧಿ ಎಂಬ ವಿನಾಶ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬಿ ಶ್ರೀಪಾದ ಭಟ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...