Homeಮುಖಪುಟಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

ಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ನಿರಾಕರಣೆ ಮತ್ತು ಸಿಬಿಐ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಸೆಪ್ಟೆಂಬರ್ 13 ರ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 5 ರಂದು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಕೇಂದ್ರೀಯ ಸಂಸ್ಥೆ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಮಾಡಿರುವ ತನ್ನ ಬಂಧನದ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆಗಸ್ಟ್ 5 ರ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ತನ್ನ ಮನವಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಹೈಕೋರ್ಟ್ ಅವರಿಗೆ ಸ್ವಾತಂತ್ರ್ಯವನ್ನು ನೀಡಿತ್ತು.

ಇದನ್ನೂಓದಿ: ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ : 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಆರೋಪದ ನಂತರ ದೆಹಲಿ ಸರ್ಕಾರವು ಕಾಯ್ದೆಯನ್ನು ವಾಪಾಸು ಪಡೆದಿತ್ತು. ಆರೋಪದ ನಂತರ ಜಾರಿ ನಿರ್ದೇಶನಾಲಯ (ಇಡಿ) ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣವನ್ನು ಸಹ ದಾಖಲಿಸಿತ್ತು.

ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜುಲೈ 12 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ವಿಡಿಯೊ ನೋಡಿ: ‘ಅಭಿವೃದ್ಧಿ ಎಂಬ ವಿನಾಶ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬಿ ಶ್ರೀಪಾದ ಭಟ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...