Homeಕರ್ನಾಟಕExclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಬೆಂಗಳೂರಿನ ಬಸವನಗುಡಿ ಮಸೀದಿಗೆ ಸೇರಿದ ಮಳಿಗೆಗಳಲ್ಲಿ ಹಿಂದೂ ಮುಸ್ಲಿಂ ವ್ಯಾಪಾರಿಗಳಿಬ್ಬರೂ ತಮ್ಮ ಬದುಕು ಕಂಡುಕೊಂಡಿದ್ದಾರೆ. ಮುಸ್ಲಿಮರು ಮಂದಿರಗಳ ಬಳಿ ವ್ಯಾಪಾರ ಮಾಡಬಾರದೆಂದು ಮತೀಯ ಸಂಘಟನೆಗಳು ಮಾಡುತ್ತಿರುವ ರಾಜಕಾರಣವನ್ನು ಹಿಂದೂ ವ್ಯಾಪಾರಿಗಳು ಖಂಡಿಸಿದ್ದಾರೆ. (ಮುಂದೆ ಓದಿರಿ...)

- Advertisement -
- Advertisement -

“ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ ಕಾರಣಕ್ಕೆ ಯಾರಿಗೂ ತೊಂದರೆ ಕೊಡಬಾರದು” ಎನ್ನುತ್ತಾರೆ ಮಂಡ್ಯ ಮೂಲದ ವ್ಯಾಪಾರಿ ಕೃಷ್ಣ.

ಕಳೆದ ಏಳೆಂಟು ವರ್ಷಗಳಿಂದ ಬಸವನಗುಡಿಯ ಮಸೀದಿ ಪಕ್ಕದಲ್ಲೇ ತಳ್ಳೋಗಾಡಿಯಲ್ಲಿ ನಿಂಬೆ ಹಣ್ಣು ಹಾಗೂ ಇತರೆ ತರಕಾರಿಗಳನ್ನು ಮಾರಾಟ ಮಾಡುತ್ತಿರುವ ಅವರು, ಇಂದಿನ ಬೆಳವಣಿಗೆಗಳನ್ನು ಕಟುವಾಗಿ ಟೀಕಿಸುತ್ತಾರೆ. ಹಿಂದೂ ದೇವಾಲಯಗಳ ಬಳಿ ಮುಸ್ಲಿಮರು ವ್ಯಾಪಾರ ಮಾಡಬಾರದೆಂದು ಅಡ್ಡಿಪಡಿಸುತ್ತಿರುವ ಸಂಘಟನೆಗಳ ವರ್ತನೆಗಳಿಗೆ ಬೇಸರ ವ್ಯಕ್ತಪಡಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಡ್ಯ ಮೂಲದ ಕೃಷ್ಣ ಅವರು ಬಸವನಗುಡಿ ಮಸೀದಿ ಬಳಿ ವ್ಯಾಪಾರ ಮಾಡುತ್ತಿದ್ದು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದರು.

ಬೆಂಗಳೂರಿನ ಬಸವನಗುಡಿಯ ಖಾಝಿ ಸ್ಟ್ರೀಟ್‌ ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿರುತ್ತದೆ. ಈಗ ರಂಜಾನ್ ಮಾಸವೂ ಇರುವುದರಿಂದ ವ್ಯಾಪಾರ ವಹಿವಾಟು ಕೂಡ ಜೋರಾಗಿ ನಡೆಯುತ್ತಿದೆ. ಇಲ್ಲಿನ ಮಸೀದಿಯ ನೆಲಮಹಡಿಯಲ್ಲಿರುವ ಮಳಿಗೆಗಳಲ್ಲಿ ಹಿಂದೂ, ಮುಸ್ಲಿಮ್ ಬಾಂಧವರಿಬ್ಬರೂ ಕಾಯಕ ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಇಲ್ಲಿನ ಮಳಿಗೆಯೊಂದರಲ್ಲಿ ಕಳೆದ 42 ವರ್ಷಗಳಿಂದ ಹಿಂದೂ ಕುಟುಂಬವೊಂದು ಜೀವನೋಪಾಯ ಕಂಡುಕೊಂಡಿದೆ. ಟೈಲರಿಂಗ್ ಮಾಡುತ್ತಿದ್ದ ರೂಪಾ ರಾಘವೇಂದ್ರ ಎಂಬವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ 42 ವರ್ಷಗಳಿಂದ ನಮ್ಮ ಮಾವನವರು ಇಲ್ಲಿ ವಹಿವಾಟು ನಡೆಸುತ್ತಿದ್ದರು. ಈಗ ನಾನು ಹಾಗೂ ನನ್ನ ಗಂಡ ಇದೇ ವೃತ್ತಿಯನ್ನು ಇಲ್ಲಿಯೇ ಮುಂದುವರಿಸಿದ್ದೇವೆ. ಈ ಮಳಿಗೆಯು ಮಸೀದಿಗೆ ಸೇರಿದೆ. ಆದರೆ ಮುಸ್ಲಿಮರ್‍ಯಾರೂ ನಮಗೆ ತೊಂದರೆ ಕೊಟ್ಟಿಲ್ಲ. ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಆದರೆ ಹಿಂದೂ ದೇವಾಲಯಗಳ ಬಳಿ ಮುಸ್ಲಿಮರು ಮಾರಾಟ ಮಾಡಬೇಡಿ ಎಂದು ಹೇಳುತ್ತಿರುವುದು ತುಂಬಾ ಹಿಂಸೆ ತಂದಿದೆ. ಬೇಕಂತಲೇ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ರೂಪಾ ರಾಘವೇಂದ್ರ ಅವರು ಬಸವನಗುಡಿ ಮಸೀದಿಗೆ ಸೇರಿದ ಮಳಿಗೆಯಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದಾರೆ.

ಮಾತು ಮುಂದುವರಿಸಿದ ಅವರು, “ನಮಗೆ ಮುಸ್ಲಿಮರೇ ಹೆಚ್ಚು ಗ್ರಾಹಕರಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚು ಮುಸ್ಲಿಮರಿದ್ದಾರೆ. ಸುಮ್ಮನೆ ಈ ರೀತಿಯ ಗಲಾಟೆಗಳನ್ನು ಬಿಟ್ಟು ಅವರವರ ಕೆಲಸ ಮಾಡಿಕೊಂಡರೆ ಒಳ್ಳೆಯದು. ಈಗ ಕೋವಿಡ್ ಇಲ್ಲದ ಕಾರಣ ಇದನ್ನು ಎತ್ತಿಕೊಂಡಿದ್ದಾರೆ. ಕೋವಿಡ್‌ ಸಮಯದಲ್ಲಿ ಎಷ್ಟೊಂದು ಸಮಸ್ಯೆಯಾಯಿತು. ಜನರು ಬದುಕಲು ಬಿಡಿ. ಮಕ್ಕಳನ್ನು ಓದಲು ಬಿಡಿ. ಈ ಗಲಾಟೆಗಳಿಂದ ಒಳ್ಳೆಯದಾಗಲ್ಲ. ಹಿಂದೂ ಮುಸ್ಲಿಂ ಗಲಭೆಗಳಾಗುತ್ತವೆ ಅಷ್ಟೇ” ‌ಎಂದು ಎಚ್ಚರಿಸಿದರು. ಅವರ ವಿಡಿಯೋ ನೋಡಿ.

ಮಸೀದಿಯ ಎದುರಲ್ಲೇ ನಂದಿನಿ ಹಾಲು ಉತ್ಪನ್ನ ಮಳಿಗೆ ಇದೆ. ಮಳಿಗೆಯಲ್ಲಿದ್ದ ಸುನಂದಾ ಅವರನ್ನು ಮಾತನಾಡಿಸಿದಾಗ, “ನನ್ನ ಯಜಮಾನರು ಸುಮಾರು 25 ವರ್ಷಗಳಿಂದ ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದಾರೆ. ಹಿಂದೂ ಮುಸ್ಲಿಮರೆಲ್ಲ ಅಣ್ಣತಮ್ಮಂದಿರಂತೆ ಇದ್ದೇವೆ. ಮಸ್ಲಿಮರೇ ನಮ್ಮಲ್ಲಿ ಹೆಚ್ಚು ವ್ಯಾಪಾರ ಮಾಡುತ್ತಾರೆ. ನಮ್ಮ ಕೆಲಸವನ್ನು ನಾವು ನೋಡಿಕೊಳ್ಳಬೇಕು. ಬೇರೆಯವರಿಗೆ ತೊಂದರೆ ಕೊಡಬಾರದು. ಎಲ್ಲರೂ ನಮ್ಮಂಥೇ ಅಲ್ಲವೇ?” ಎಂದು ಪ್ರಶ್ನಿಸಿದರು.

ಬಸವನಗುಡಿ ಮಸೀದಿಗೆ ಎದುರಲ್ಲೇ ಇರುವ ನಂದಿನಿ ಉತ್ಪನ್ನಗಳ ಮಳಿಗೆಯ ವ್ಯಾಪಾರಿ ಸುನಂದಾ ಅವರು ‘ಹಿಂದೂ ಮುಸ್ಲಿಂ’ ಸಹೋದರತೆಯ ಕುರಿತು ತಿಳಿಸಿದರು.

ಹಣ್ಣು, ತರಕಾರಿ ಮಾರುವ ತಮಿಳುನಾಡಿನ ಸೆಲಂನ ಧನಲಕ್ಷ್ಮಿ ಅವರು ಮಸೀದಿ ಬದಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಬದುಕು ಕಂಡುಕೊಂಡಿದ್ದಾರೆ. ಮುಸ್ಲಿಂ ವ್ಯಾಪಾರಿಗಳಿಗೆ ಹಣ್ಣನ್ನು ಮಾರುತ್ತಲೇ ಮಾತಿಗಿಳಿದ ಅವರು, “ಒಂದು ದಿನ ಬರದಿದ್ದರೆ ಏನಾಯಿತೆಂದು ಇಲ್ಲಿನ ಮುಸ್ಲಿಮರು ವಿಚಾರಿಸುತ್ತಾರೆ” ಎಂದು ತಮ್ಮ ಬಾಂಧವ್ಯವನ್ನು ಹಂಚಿಕೊಂಡರು.

ಬಸವನಗುಡಿ ಮಸೀದಿ ಬಳಿ ತಮಿಳುನಾಡಿನ ಧನಲಕ್ಷ್ಮಿಯವರು ಕಳೆದ ಹತ್ತು ವರ್ಷಗಳಿಂದ ತರಕಾರಿ, ಹಣ್ಣುಗಳನ್ನು ಮಾರುತ್ತಾ ಜೀವನ ಕಂಡುಕೊಂಡಿದ್ದಾರೆ.

ಹಣ್ಣು ತರಕಾರಿ ಖರೀದಿಸುತ್ತಿದ್ದ ಸ್ಥಳೀಯ ನಿವಾಸಿ ಎಸ್‌.ಎ.ಖಾದರ್‌ ಮಾತಿಗಿಳಿದು, “ಇಲ್ಲಿ ಸಾಕಷ್ಟು ಮುಸ್ಲಿಂ ಅಂಗಡಿಗಳಿವೆ. ಆದರೆ ನಾನು ಇವರಲ್ಲಿಯೇ ಹತ್ತು ವರ್ಷಗಳಿಂದ ಖರೀದಿಸುತ್ತಿದ್ದೇನೆ” ಎಂದು ತಿಳಿಸಿದರು.

ಮುಸ್ಲಿಂ ಗ್ರಾಹಕ ಎಸ್.ಎ.ಖಾದರ್‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದರು.

ಸ್ಥಳೀಯ ನಿವಾಸಿ ಹಾಗೂ ವ್ಯಾಪಾರಿ ಅಹಮದ್ ಶರೀಫ್‌ ಪ್ರತಿಕ್ರಿಯಿಸಿ, “ನಮ್ಮ ಮಸೀದಿಯ ಬಳಿ ಯಾವ ಜಾತಿ, ಜನಾಂಗದವರು ಬಂದು ವ್ಯಾಪಾರ ಮಾಡಿದರೂ ಅಭ್ಯಂತರವಿಲ್ಲ. ಇದುವರೆಗೂ ನೀವು ಯಾವ ಜಾತಿಯವರು, ಯಾವ ಧರ್ಮದವರು ಎಂದು ನಾವು ಕೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಮ್ಮನ್ನೆಲ್ಲ ದೇವರು ಸೃಷ್ಟಿ ಮಾಡಿದ್ದಾನೆ. ಗಾಳಿ, ನೀರು, ಭೂಮಿಯೆಲ್ಲ ದೇವರ ಸೃಷ್ಟಿ. ಸುನಾಮಿ ಬಂದರೆ, ಭೂಕಂಪವಾದರೆ, ಕೋವಿಡ್ ಬಂದರೆ ಹಿಂದೂ, ಮುಸ್ಲಿಂ ಎಂದು ನೋಡುತ್ತದೆಯೇ? ಎಲ್ಲರನ್ನೂ ಹೊತ್ತುಕೊಂಡು ಹೋಗುತ್ತದೆ. ದೇವರು ತಾರತಮ್ಯ ಮಾಡುತ್ತಿಲ್ಲ. ಸಾಯಿಸಿದರೆ ಒಟ್ಟಿಗೆ ಸಾಯಿಸುತ್ತಾನೆ, ಬದುಕಿಸಿದರೆ ಒಟ್ಟಿಗೆ ಬದುಕಿಸುತ್ತಾನೆ? ಇದನ್ನು ಸ್ವಲ್ಪ ಯೋಚನೆ ಮಾಡಿದರೆ ಸರಿಯಾಗುತ್ತದೆ. ಯೋಚನೆ ಮಾಡದವರು ಮಾತ್ರ ಹೀಗೆ ವರ್ತಿಸುತ್ತಾರೆ. ಶಿಕ್ಷಣ ಕಡಿಮೆ ಇದ್ದವರು ಧರ್ಮಗಳ ಜಗಳ ಮಾಡುತ್ತಿದ್ದಾರೆ. ಸರ್ಕಾರ ಎಲ್ಲರನ್ನೂ ಸಮಾನವಾಗಿ ನೋಡಬೇಕು. ಸ್ವಲ್ಪ ವಿಳಂಬ ಮಾಡುತ್ತಿದೆ. ನೋಡೋಣ, ದೇವರು ಬುದ್ಧಿಕೊಡಬಹುದು” ಎಂದು ನಿಟ್ಟುಸಿರು ಬಿಟ್ಟರು.

ಬಸವನಗುಡಿ ಮಸೀದಿ ಬಳಿಯ ಬೇಕರಿಯೊಂದರಲ್ಲಿ ಮಾತಿಗೆ ಸಿಕ್ಕ ಅಹಮದ್ ಶರೀಫ್‌

ಮಸೀದಿಗೆ ಸೇರಿದ ಮಳಿಗೆಯೊಂದರಲ್ಲಿ ಕಿಡ್ನಿ ಸ್ಟೋನ್‌ ಮೆಡಿಕಲ್‌ ಶಾಪ್ ನಡೆಸುತ್ತಿರುವ ಮಹಮ್ಮದ್ ರಫೀ ಮಾತನಾಡಿ, “ನಮ್ಮ ತಂದೆಯವರು ಕಳೆದ ಐವತ್ತು ವರ್ಷಗಳಿಂದ ಅಂಗಡಿಯನ್ನು ನಡೆಸುತ್ತಿದ್ದರು. ತಂದೆಯವರು ಮನೆಯಲ್ಲಿರುವುದರಿಂದ ಆಗಾಗ್ಗೆ ಬಂದು ಹೋಗುತ್ತೇನೆ. ಪಕ್ಕದಲ್ಲಿರುವವರು ಹಿಂದೂಗಳು. ಕಳೆದ ನಲವತ್ತು ವರ್ಷಗಳಿಂದ ನಮ್ಮ ಜೊತೆ ಇದ್ದಾರೆ. ಈ ಬದಿಯಲ್ಲಿರುವ ಮೊಬೈಲ್‌ ಅಂಗಡಿ ಮುಸ್ಲಿಮ್ ವ್ಯಕ್ತಿಗೆ ಸೇರಿದ್ದರೂ ಇಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ಹೆಸರು ಪ್ರಕಾಶ್” ಎಂದು ಹೇಳುತ್ತಾ ಹಿಂದೂ ಮುಸ್ಲಿಂ ಏಕತೆಯನ್ನು ಉಳಿಸಬೇಕೆಂದು ಕೋರಿದರು.

ಬಸವನಗುಡಿ ಮಸೀದಿಗೆ ಸೇರಿದ ಮಳಿಗೆಯೊಂದರಲ್ಲಿ ಕಿಡ್ನಿ ಸ್ಟೋನ್‌ ಮೆಡಿಕಲ್‌ ಶಾಪ್ ನಡೆಸುತ್ತಿರುವ ಮಹಮ್ಮದ್ ರಫೀ ಮಾತನಾಡಿದರು.

ಪಕ್ಕದಲ್ಲೇ ಇದ್ದ ಮೊಬೈಲ್‌ ಶಾಪ್‌ನಲ್ಲಿ ಮಾತಿಗೆ ಸಿಕ್ಕ ಪ್ರಕಾಶ್ ಮೂಲತಃ ರಾಜಸ್ಥಾನದವರು. ಕಳೆದ ಒಂದು ವರ್ಷದಿಂದ ತನ್ನ ಮುಸ್ಲಿಂ ಗೆಳೆಯನೊಂದಿಗೆ ಈ ಅಂಗಡಿಯಲ್ಲಿ ಪಾಲುದಾರನಾಗಿದ್ದಾರೆ. ಅವರು ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. “ಇಲ್ಲಿ ನನಗೇನೂ ತೊಂದರೆಯಾಗಿಲ್ಲ. ಹಿಂದೂ ಮುಸ್ಲಿಂ ಎಲ್ಲರೂ ಚೆನ್ನಾಗಿದ್ದೇವೆ” ಎಂದು ಅವರು ತಮ್ಮ ಸಂತಸ ಹಂಚಿಕೊಂಡರು ಪ್ರಕಾಶ್.

ರಾಜಸ್ಥಾನ ಮೂಲದ ಪ್ರಕಾಶ್ ಅವರು ಬಸವನಗುಡಿಯ ಮಸೀದಿಗೆ ಸೇರಿದ ಮಳಿಗೆಯೊಂದರಲ್ಲಿ ಮುಸ್ಲಿಂ ಗೆಳೆಯನೊಂದಿಗೆ ಪಾಲುದಾರನಾಗಿ ವ್ಯಾಪಾರ ಮಾಡುದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಈಗ ಹಿಂದೂ ಮುಸ್ಲಿಂ ಸೌಹಾರ್ದ ತೆ ಬಗ್ಗೆ ಮಾತಾಡೋ ನಿಮ್ಮ ಪತ್ರಿಕೆ ಹಾಗೂ 61ಜನ ಸ್ವಯಂಘೋಷಿತ ಬುದ್ದಿಜೀವಿಗಳು ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಹಿಂದೂ ಮಹಿಳಾ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದಾಗ ಎಲ್ಲಿ ಇದ್ರೀ ಮುಸುರೆ ತಿನ್ಕೊಂಡು

  2. ಮುಸ್ಲಿಮರು ಮಂಗಳೂರಲ್ಲಿ ಎಂದೂ ಹಿಂದೂ ಮಹಿಳಾ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಿಲ್ಲ.

  3. ರಾಜು ಅವರೇ ನೀವು ಮುಸ್ಲಿಂ ವ್ಯಾಪಾರಿಗೆ ಬಹಿಷ್ಕಾರ ಹಾಕಿದ್ದು ಸರಿ,ಹಾಗೆಯೇ ಮುಸ್ಲಿಮರು ಕೂಡ ಬೆಂಗಳೂರಿನ ಮಸೀದಿ ಹತ್ತಿರದ ಹಿಂದೂ ವ್ಯಾಪಾರಿಗಳಿಗೆ ಬಹಿಷ್ಕಾರ ಹಕಬೇಕಾಗಿತ್ತು ಅಂತೀರಾ.ಹಾಗೆಯೇ ನಿಮ್ಮ ನಿಲುವು ಸರಿಯಾಗಿದ್ದರೆ ಹಿಂದೂ ವ್ಯಾಪಾರಿಗಳನ್ನ ಮಸೀದಿ ಹತ್ತಿರ ಮಾರಾಟ ಮಾಡಬೇಡಿ ಮುತ್ತು ರಂಝಾನ್ ಹಬ್ಬಕ್ಕೆ ಬಟ್ಟೆ ಬರೆ ಹಬ್ಬದ ಸಾಮಾನು ಮುಸ್ಲಿಮರಿಗೆ ಮಾರುವುದಿಲ್ಲ ಎಂದು ಹಿಂದೂ ಅಂಗಡಿಗಳ ಮುಂದೆ ಬೋರ್ಡ್ ಹಾಕಿಸಿ ನೋಡೋಣ.ನೀವು ನಿಜವಾದ ನ್ಯಾಯವಂತರದರೆ.

  4. ಈ ಲೇಖನ ಅರ್ಥಗರ್ಭಿತವಾಗಿದ್ದು. ವಿಚಾರ ಮಾಡಿಕೊಂಡು ಓದಿ…. ನಮ್ಮ ಭಾರತ ಜ್ಯಾತ್ಯಾತೀತ ರಾಷ್ಟ್ರ…. ಕನ್ನಡ ನಾಡು ಸುಂದರವಾದ ತೋಟವಿದ್ದಂತೆ. ಅಲ್ಲಿ ನಾನಾ ತರಹದ ಹೂವಿನ ಪರಿಮಳ ಪಸರಿಸುತ್ತದೆ…

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...