Homeಮುಖಪುಟಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ...

ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ

- Advertisement -
- Advertisement -

”ಬುಲ್ಡೋಜರ್ ನ್ಯಾಯ” ಎಂದು ಕರೆಯಲ್ಪಡುವ ನ್ಯಾಯವನ್ನು ಸುಪ್ರೀಂಕೋರ್ಟ್ ಕಾನೂನುಬಾಹಿರ ಎಂದು ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಬುಧವಾರ ಎತ್ತಿ ತೋರಿಸಿದ್ದು, “ಕಾರ್ಯಾಂಗವು ಏಕಕಾಲದಲ್ಲಿ ನ್ಯಾಯಾಧೀಶರು, ತೀರ್ಪುಗಾರರು ಮತ್ತು ಶಿಕ್ಷೆಯನ್ನು ಜಾರಿಗೊಳಿಸುವವರಾಗಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ

ಇಟಲಿಯಲ್ಲಿ ನಡೆದ ನ್ಯಾಯಾಧೀಶರ ಸಭೆಯಲ್ಲಿ ಸಾಮಾಜಿಕ-ಆರ್ಥಿಕ ನ್ಯಾಯವನ್ನು ನೀಡುವಲ್ಲಿ ಸಂವಿಧಾನದ ಪಾತ್ರದ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು, ಆಶ್ರಯ ಪಡೆಯುವ ಹಕ್ಕು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಶಿಕ್ಷೆ ನೀಡುವ ಕ್ರಮವಾಗಿ ಅವರ ಆಸ್ತಿಯನ್ನು ಕೆಡವುವ ಯಾವುದೇ ಅವಕಾಶ ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಪದ್ಧತಿ ಸಾಮಾನ್ಯವಾಗಿದೆ. ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹಲವಾರು ಜನರ, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಮನೆ ಮತ್ತು ಆಸ್ತಿಗಳನ್ನು ಕೆಡವುವ ಹಲವಾರು ಘಟನೆ ಇತ್ತೀಚೆಗೆ ನಡೆದಿದೆ.

ಪ್ರಕರಣಗಳಲ್ಲಿ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಹೇಳಿದ್ದು, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಮೊದಲು ಪ್ರಕ್ರಿಯೆಗಳನ್ನು ಅನುಸರಿಸಬೇಕು ಎಂದು ತಿಳಿಸಿತ್ತು.

ಬುಧವಾರ ಈ ತೀರ್ಪನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು, “… ಕಾನೂನು ಪ್ರಕ್ರಿಯೆಗಳನ್ನು ಬೈಪಾಸ್ ಮಾಡುವ ಇಂತಹ ಅನಿಯಂತ್ರಿತ ಧ್ವಂಸಗಳು ಕಾನೂನಿನ ನಿಯಮ ಮತ್ತು ಆರ್ಟಿಕಲ್ 21 ರ ಅಡಿಯಲ್ಲಿ ಆಶ್ರಯ ಪಡೆಯುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಹೇಳಿದ್ದಾರೆ.

ಸಾಮಾನ್ಯ ನಾಗರಿಕರೊಬ್ಬರಿಗೆ ಮನೆ ಕಟ್ಟುವುದು ಎನ್ನುವುದು ವರ್ಷಗಳ ಕಾಲದ ಕಠಿಣ ಪರಿಶ್ರಮ, ಕನಸುಗಳ ಮತ್ತು ಆಕಾಂಕ್ಷೆಗಳ ಪರಾಕಾಷ್ಠೆಯಾಗಿದೆ ಎಂದು ಗವಾಯಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಮನೆ ಎಂದರೆ ಕೇವಲ ಆಸ್ತಿಯಲ್ಲ, ಅದು ಸ್ಥಿರತೆ, ಭದ್ರತೆ ಮತ್ತು ಭವಿಷ್ಯಕ್ಕಾಗಿ ಕುಟುಂಬ ಅಥವಾ ವ್ಯಕ್ತಿಗಳ ಸಾಮೂಹಿಕ ಭರವಸೆಯನ್ನು ಸಾಕಾರಗೊಳಿಸುತ್ತದೆ” ಎಂದು ಮುಖ್ಯ ನ್ಯಾಯಾಮೂರ್ತಿ ಹೇಳಿದ್ದಾರೆ.  ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

ವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...