Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...