Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...