Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...