Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...