Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...