Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...