Homeಕರ್ನಾಟಕಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ಈ ಮೇಳವು ಕೊರೊನಾ ನಂತರ ಕರಕುಶಲಕರ್ಮಿಗಳ ಆರ್ಥಿಕತೆ ಸುಧಾರಣೆಯ ಉದ್ದೇಶ ಹೊಂದಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಕೆ ಮಾಡಿಕೊಳ್ಳಲಾಗಿದೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಉತ್ತಮ ಮಾರುಕಟ್ಟೆಯ ಅಗತ್ಯವಿದೆ.

ಹೀಗಾಗಿ ಈ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 30ರಿಂದ ಬೆಂಗಳೂರು ಉತ್ಸವ- ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭಿಸಲಾಗಿದೆ. 10 ದಿನಗಳ ಕಾಲ ನಡೆಯುವ ಈ ಮೇಳ ನವೆಂಬರ್‌ 8 ಕ್ಕೆ ಮುಕ್ತಾಯವಾಗಲಿದೆ. ಬೆಂಗಳೂರು ಉತ್ಸವ – ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಭವ್ಯ ಹಾಗೂ ಶರಣ್ಯ ಶೆಟ್ಟಿ ಚಾಲನೆ ನೀಡಿದ್ದಾರೆ.

ಈ ಮೇಳವು ಕೊರೊನಾ ನಂತರ ಕರಕುಶಲಕರ್ಮಿಗಳ ಆರ್ಥಿಕತೆ ಸುಧಾರಣೆಯ ಉದ್ದೇಶ ಹೊಂದಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಕೆ ಮಾಡಿಕೊಳ್ಳಲಾಗಿದೆ. ಈ ಮೇಳ ಅಕ್ಟೋಬರ್‌ 30 ರಿಂದ ನವೆಂಬರ್‌ 8 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ತೆರೆದಿರುತ್ತದೆ ಎಂದು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ .ಬಿ.ಎಲ್‌ ಶಂಕರ್‌ ಹೇಳಿದ್ದಾರೆ.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

“ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಹಳ ತೊಂದರೆ ಆಗಿದೆ. ಅದರಲ್ಲೂ ತಮ್ಮ ಕರಕುಶಲ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಕರಕುಶಲಕರ್ಮಿಗಳಿಗೆ ತೀವ್ರ ತೊಂದರೆ ಉಂಟಾಗಿದೆ. ಇಂತವರಿಗೆ ಉತ್ತಮ ಮಾರುಕಟ್ಟೆಯ ವೇದಿಕೆ ಒದಗಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಾರಂಭವಾಗಿರುವ ಈ ವಿಶೇಷ ಮಾರಾಟ ಮೇಳ ಯಶಸ್ವಿಯಾಗಲಿದೆ” ಎಂದು ನಟಿ ಭವ್ಯ ಹೇಳಿದ್ದಾರೆ.

 

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು,  ಆಕರ್ಷಣೆಯ ಆಭರಣಗಳು, ಕಲಾಕೃತಿಗಳು, ಪೀಠೋಪಕರಣಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.


ಇದನ್ನೂ ಓದಿ: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...