Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...