Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...