Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...