Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...