Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....