Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...