Homeಮುಖಪುಟಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ - ಕೊರೊನಾ ಮಾತ್ರ ತೀವ್ರ...

ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ – ಕೊರೊನಾ ಮಾತ್ರ ತೀವ್ರ ಏರಿಕೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಹೆಚ್ಚು ಗಮನ ಸೆಳೆದ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹೆಚ್ಚು ಫೇವರಿಟ್ ಆಗಿದ್ದಾರೆ ಮತ್ತು ಅವರ ತೃಣಮೂಲ ಕಾಂಗ್ರೆಸ್ ರಾಜ್ಯದ 294 ಸ್ಥಾನಗಳಲ್ಲಿ 152 ಸ್ಥಾನಗಳನ್ನು ಗೆಲ್ಲಬಹುದು, ಬಿಜೆಪಿ ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಎನ್‌ಡಿಟಿವಿ ನಡೆಸಿದ ಪೋಲ್ ಆಫ್ ಪೋಲ್ಸ್ (ಎಲ್ಲ ಸಮೀಕ್ಷೆಗಳ ಸಮೀಕ್ಷೆ) ತಿಳಿಸಿದೆ. ಈ ಸಮೀಕ್ಷೆ ಕಂಡುಕೊಂಡ ಅಂಶಗಳ ಪ್ರಕಾರ ತಮಿಳುನಾಡು ಹೊರತುಪಡಿಸಿ ಉಳಿದ ಕಡೆ ಆಡಳಿತ ಪಕ್ಷಗಳು ಮುಂದಿನ ಅವಧಿಗೂ ಮುಂದುವರೆಯಲಿವೆ.

ಆರು ನಿರ್ಗಮನ ಸಮೀಕ್ಷೆಗಳ ಒಟ್ಟು ಸರಾಸರಿಯು ಮಮತಾ ಬ್ಯಾನರ್ಜಿ ಬಹುಮತಕ್ಕೆ ತಲುಪಬಹುದೆಂದು ಸೂಚಿಸುತ್ತದೆ. ಆದರೆ ಚುನಾವಣೆಗೆ ಮುಂಚಿತವಾಗಿ ಹಲವಾರು ಪಕ್ಷಾಂತರಗಳ ನಂತರ ಬಿಜೆಪಿಯೊಂದಿಗಿನ ಅಂತರವನ್ನು ಅವರು ಎಷ್ಟು ವಿಸ್ತರಿಸಬಹುದು ಎಂಬುದರ ಮೇಲೆ ಅವರ ಸರ್ಕಾರದ ಭದ್ರತೆ ಅವಲಂಬಿತವಾಗಿದೆ. ಬಿಜೆಪಿ ಗಮನಾರ್ಹ ಏರಿಕೆ ಕಾಣಲಿದೆ.

ತೃಣಮೂಲ ಕಾಂಗ್ರೆಸ್ 2011 ರಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, 34 ವರ್ಷಗಳ ಎಡ ಆಡಳಿತವನ್ನು ಕೊನೆಗೊಳಿಸಿತು. 2016 ರಲ್ಲಿ ಅದು ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿ, ಬಿಜೆಪಿ ಲಾಭ ಗಳಿಸುವುದರೊಂದಿಗೆ ತೃಣಮೂಲದ ಪ್ರಮಾಣ ತೀವ್ರವಾಗಿ ಕುಸಿಯುತ್ತದೆ ಎಂದು ಸಮೀಕ್ಷೆಗಳು ಸೂಚಿಸುತ್ತವೆ. ಆದರೆ ಎಲ್ಲ ಸಮೀಕ್ಷೆಗಳ ಸಮೀಕ್ಷೆ (ಪೋಲ್ ಆಫ್ ಪೋಲ್ಸ್) ಟಿಎಂಸಿ ಸರಳ ಬಹುಮತ ಪಡೆಯಲಿದೆ ಎನ್ನುತ್ತದೆ.

ಇಂಡಿಯಾ ನ್ಯೂಸ್-ಜನ್ ಕಿ ಬಾತ್ ಬಿಜೆಪಿಗೆ ಗೆಲುವಿನ ಮುನ್ಸೂಚನೆ ನೀಡಿದರೆ, ರಿಪಬ್ಲಿಕ್ ಟಿಸಿಎನ್‌ಎಕ್ಸ್ ಸಮೀಕ್ಷೆ ಅತಂತ್ರ ವಿಧಾನಸಭೆಯನ್ನು ಸೂಚಿಸಿದೆ.

ಕೇರಳದಲ್ಲಿ ಈಗಿನ ಎಡಪಂಥೀಯ ಎಲ್‌ಡಿಎಫ್ ಕೂಟವು 140 ಸ್ಥಾನಗಳಲ್ಲಿ 85 ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಅದು ಸರಿಯೆಂದು ಸಾಬೀತಾದರೆ, ಕೇರಳದ ರಾಜಕೀಯದಲ್ಲಿ ಆಡಳಿತ ಪಕ್ಷ ಪುನರಾಯ್ಕೆಗೊಂಡ ಮೊದಲ ನಿದರ್ಶನ ಇದಾಗಲಿದೆ. ಕೇರಳದಲ್ಲಿ ಎರಡು ಸ್ಥಾನಗಳೊಂದಿಗೆ ಬಿಜೆಪಿ ತನ್ನ ಅಸ್ತಿತ್ವವನ್ನು ತೋರಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಸಮೀಕ್ಷೆ ತಿಳಿಸಿದೆ.

ತಮಿಳುನಾಡಿನಲ್ಲಿ, ಡಿಎಂಕೆ ನೇತೃತ್ವದ ಕೂಟ ಸಲೀಸಾಗಿ ಅಧಿಕಾರಕ್ಕೆ ಬರಲಿದೆ. ಡಿಎಂಕೆ ಕೂಟ 234 ಸ್ಥಾನಗಳಲ್ಲಿ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆಡಳಿತಾರೂಢ ಮತ್ತು ಬಿಜೆಪಿಯ ಮಿತ್ರ ಪಕ್ಷ ಎಐಡಿಎಂಕೆ ತನ್ನ ವರ್ಚಸ್ವಿ ನಾಯಕಿ ಜೆ.ಜಯಲಲಿತಾ ಅವರ ನಿಧನದ ನಂತರ ನಡೆದ ಮೊದಲ ರಾಜ್ಯ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗಳಿಸಲಿದೆ ಎಂದು ನಿರ್ಗಮನ ಸಮೀಕ್ಷೆಗಳು ತಿಳಿಸಿವೆ. ಎಂ.ಕೆ ಸ್ಟಾಲಿನ್ ಅವರ ಡಿಎಂಕೆ 2019 ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಗಳಿಸಿತ್ತು. ಪ್ರತಿಪಕ್ಷದಲ್ಲಿ ಎರಡು ಅವಧಿಯ ನಂತರ ಈ ಬಾರಿ ಅಧಿಕಾರಕ್ಕೆ ಮರಳುವ ಭರವಸೆ ಇದೆ.

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಶೆ ಕಾದಿದೆ ಎಂದು ಎಕ್ಸಿಟ್ ಪೋಲ್ಸ್ ಸೂಚಿಸುತ್ತವೆ, ಬಿಜೆಪಿ 126 ಸ್ಥಾನಗಳಲ್ಲಿ 72 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ತನ್ನ ಹಿಂದಿನ ಭದ್ರಕೋಟೆ ಮರಳಿ ಗೆಲ್ಲಲು ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾದರೂ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳಿವೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ ಮತದಾನ ಏಪ್ರಿಲ್ 29ಕ್ಕೆ ಕೊನೆಗೊಂಡಿದೆ. ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಚುನಾವಣೆಯೇನೊ ಮುಗಿದಿದೆ. ಆದರೆ ಈ ಚುನಾವಣೆಯ ಕಾರಣಕ್ಕೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆ ಬೀಸಿದ ಸಂದರ್ಭದಲ್ಲಿಯೇ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳನ್ನು ನಡೆಸಿ ಕೊರನಾ ಹರಡಲು ಕಾರಣರಾಗಿದ್ದರೆ ಎಂದು ಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ.


ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...