Homeಮುಖಪುಟಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ - ಕೊರೊನಾ ಮಾತ್ರ ತೀವ್ರ...

ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ – ಕೊರೊನಾ ಮಾತ್ರ ತೀವ್ರ ಏರಿಕೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಹೆಚ್ಚು ಗಮನ ಸೆಳೆದ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹೆಚ್ಚು ಫೇವರಿಟ್ ಆಗಿದ್ದಾರೆ ಮತ್ತು ಅವರ ತೃಣಮೂಲ ಕಾಂಗ್ರೆಸ್ ರಾಜ್ಯದ 294 ಸ್ಥಾನಗಳಲ್ಲಿ 152 ಸ್ಥಾನಗಳನ್ನು ಗೆಲ್ಲಬಹುದು, ಬಿಜೆಪಿ ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಎನ್‌ಡಿಟಿವಿ ನಡೆಸಿದ ಪೋಲ್ ಆಫ್ ಪೋಲ್ಸ್ (ಎಲ್ಲ ಸಮೀಕ್ಷೆಗಳ ಸಮೀಕ್ಷೆ) ತಿಳಿಸಿದೆ. ಈ ಸಮೀಕ್ಷೆ ಕಂಡುಕೊಂಡ ಅಂಶಗಳ ಪ್ರಕಾರ ತಮಿಳುನಾಡು ಹೊರತುಪಡಿಸಿ ಉಳಿದ ಕಡೆ ಆಡಳಿತ ಪಕ್ಷಗಳು ಮುಂದಿನ ಅವಧಿಗೂ ಮುಂದುವರೆಯಲಿವೆ.

ಆರು ನಿರ್ಗಮನ ಸಮೀಕ್ಷೆಗಳ ಒಟ್ಟು ಸರಾಸರಿಯು ಮಮತಾ ಬ್ಯಾನರ್ಜಿ ಬಹುಮತಕ್ಕೆ ತಲುಪಬಹುದೆಂದು ಸೂಚಿಸುತ್ತದೆ. ಆದರೆ ಚುನಾವಣೆಗೆ ಮುಂಚಿತವಾಗಿ ಹಲವಾರು ಪಕ್ಷಾಂತರಗಳ ನಂತರ ಬಿಜೆಪಿಯೊಂದಿಗಿನ ಅಂತರವನ್ನು ಅವರು ಎಷ್ಟು ವಿಸ್ತರಿಸಬಹುದು ಎಂಬುದರ ಮೇಲೆ ಅವರ ಸರ್ಕಾರದ ಭದ್ರತೆ ಅವಲಂಬಿತವಾಗಿದೆ. ಬಿಜೆಪಿ ಗಮನಾರ್ಹ ಏರಿಕೆ ಕಾಣಲಿದೆ.

ತೃಣಮೂಲ ಕಾಂಗ್ರೆಸ್ 2011 ರಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, 34 ವರ್ಷಗಳ ಎಡ ಆಡಳಿತವನ್ನು ಕೊನೆಗೊಳಿಸಿತು. 2016 ರಲ್ಲಿ ಅದು ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿ, ಬಿಜೆಪಿ ಲಾಭ ಗಳಿಸುವುದರೊಂದಿಗೆ ತೃಣಮೂಲದ ಪ್ರಮಾಣ ತೀವ್ರವಾಗಿ ಕುಸಿಯುತ್ತದೆ ಎಂದು ಸಮೀಕ್ಷೆಗಳು ಸೂಚಿಸುತ್ತವೆ. ಆದರೆ ಎಲ್ಲ ಸಮೀಕ್ಷೆಗಳ ಸಮೀಕ್ಷೆ (ಪೋಲ್ ಆಫ್ ಪೋಲ್ಸ್) ಟಿಎಂಸಿ ಸರಳ ಬಹುಮತ ಪಡೆಯಲಿದೆ ಎನ್ನುತ್ತದೆ.

ಇಂಡಿಯಾ ನ್ಯೂಸ್-ಜನ್ ಕಿ ಬಾತ್ ಬಿಜೆಪಿಗೆ ಗೆಲುವಿನ ಮುನ್ಸೂಚನೆ ನೀಡಿದರೆ, ರಿಪಬ್ಲಿಕ್ ಟಿಸಿಎನ್‌ಎಕ್ಸ್ ಸಮೀಕ್ಷೆ ಅತಂತ್ರ ವಿಧಾನಸಭೆಯನ್ನು ಸೂಚಿಸಿದೆ.

ಕೇರಳದಲ್ಲಿ ಈಗಿನ ಎಡಪಂಥೀಯ ಎಲ್‌ಡಿಎಫ್ ಕೂಟವು 140 ಸ್ಥಾನಗಳಲ್ಲಿ 85 ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಅದು ಸರಿಯೆಂದು ಸಾಬೀತಾದರೆ, ಕೇರಳದ ರಾಜಕೀಯದಲ್ಲಿ ಆಡಳಿತ ಪಕ್ಷ ಪುನರಾಯ್ಕೆಗೊಂಡ ಮೊದಲ ನಿದರ್ಶನ ಇದಾಗಲಿದೆ. ಕೇರಳದಲ್ಲಿ ಎರಡು ಸ್ಥಾನಗಳೊಂದಿಗೆ ಬಿಜೆಪಿ ತನ್ನ ಅಸ್ತಿತ್ವವನ್ನು ತೋರಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಸಮೀಕ್ಷೆ ತಿಳಿಸಿದೆ.

ತಮಿಳುನಾಡಿನಲ್ಲಿ, ಡಿಎಂಕೆ ನೇತೃತ್ವದ ಕೂಟ ಸಲೀಸಾಗಿ ಅಧಿಕಾರಕ್ಕೆ ಬರಲಿದೆ. ಡಿಎಂಕೆ ಕೂಟ 234 ಸ್ಥಾನಗಳಲ್ಲಿ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆಡಳಿತಾರೂಢ ಮತ್ತು ಬಿಜೆಪಿಯ ಮಿತ್ರ ಪಕ್ಷ ಎಐಡಿಎಂಕೆ ತನ್ನ ವರ್ಚಸ್ವಿ ನಾಯಕಿ ಜೆ.ಜಯಲಲಿತಾ ಅವರ ನಿಧನದ ನಂತರ ನಡೆದ ಮೊದಲ ರಾಜ್ಯ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗಳಿಸಲಿದೆ ಎಂದು ನಿರ್ಗಮನ ಸಮೀಕ್ಷೆಗಳು ತಿಳಿಸಿವೆ. ಎಂ.ಕೆ ಸ್ಟಾಲಿನ್ ಅವರ ಡಿಎಂಕೆ 2019 ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಗಳಿಸಿತ್ತು. ಪ್ರತಿಪಕ್ಷದಲ್ಲಿ ಎರಡು ಅವಧಿಯ ನಂತರ ಈ ಬಾರಿ ಅಧಿಕಾರಕ್ಕೆ ಮರಳುವ ಭರವಸೆ ಇದೆ.

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಶೆ ಕಾದಿದೆ ಎಂದು ಎಕ್ಸಿಟ್ ಪೋಲ್ಸ್ ಸೂಚಿಸುತ್ತವೆ, ಬಿಜೆಪಿ 126 ಸ್ಥಾನಗಳಲ್ಲಿ 72 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ತನ್ನ ಹಿಂದಿನ ಭದ್ರಕೋಟೆ ಮರಳಿ ಗೆಲ್ಲಲು ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾದರೂ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳಿವೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ ಮತದಾನ ಏಪ್ರಿಲ್ 29ಕ್ಕೆ ಕೊನೆಗೊಂಡಿದೆ. ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಚುನಾವಣೆಯೇನೊ ಮುಗಿದಿದೆ. ಆದರೆ ಈ ಚುನಾವಣೆಯ ಕಾರಣಕ್ಕೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆ ಬೀಸಿದ ಸಂದರ್ಭದಲ್ಲಿಯೇ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳನ್ನು ನಡೆಸಿ ಕೊರನಾ ಹರಡಲು ಕಾರಣರಾಗಿದ್ದರೆ ಎಂದು ಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ.


ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...