Homeಮುಖಪುಟಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ - ಕೊರೊನಾ ಮಾತ್ರ ತೀವ್ರ...

ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ – ಕೊರೊನಾ ಮಾತ್ರ ತೀವ್ರ ಏರಿಕೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಹೆಚ್ಚು ಗಮನ ಸೆಳೆದ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹೆಚ್ಚು ಫೇವರಿಟ್ ಆಗಿದ್ದಾರೆ ಮತ್ತು ಅವರ ತೃಣಮೂಲ ಕಾಂಗ್ರೆಸ್ ರಾಜ್ಯದ 294 ಸ್ಥಾನಗಳಲ್ಲಿ 152 ಸ್ಥಾನಗಳನ್ನು ಗೆಲ್ಲಬಹುದು, ಬಿಜೆಪಿ ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಎನ್‌ಡಿಟಿವಿ ನಡೆಸಿದ ಪೋಲ್ ಆಫ್ ಪೋಲ್ಸ್ (ಎಲ್ಲ ಸಮೀಕ್ಷೆಗಳ ಸಮೀಕ್ಷೆ) ತಿಳಿಸಿದೆ. ಈ ಸಮೀಕ್ಷೆ ಕಂಡುಕೊಂಡ ಅಂಶಗಳ ಪ್ರಕಾರ ತಮಿಳುನಾಡು ಹೊರತುಪಡಿಸಿ ಉಳಿದ ಕಡೆ ಆಡಳಿತ ಪಕ್ಷಗಳು ಮುಂದಿನ ಅವಧಿಗೂ ಮುಂದುವರೆಯಲಿವೆ.

ಆರು ನಿರ್ಗಮನ ಸಮೀಕ್ಷೆಗಳ ಒಟ್ಟು ಸರಾಸರಿಯು ಮಮತಾ ಬ್ಯಾನರ್ಜಿ ಬಹುಮತಕ್ಕೆ ತಲುಪಬಹುದೆಂದು ಸೂಚಿಸುತ್ತದೆ. ಆದರೆ ಚುನಾವಣೆಗೆ ಮುಂಚಿತವಾಗಿ ಹಲವಾರು ಪಕ್ಷಾಂತರಗಳ ನಂತರ ಬಿಜೆಪಿಯೊಂದಿಗಿನ ಅಂತರವನ್ನು ಅವರು ಎಷ್ಟು ವಿಸ್ತರಿಸಬಹುದು ಎಂಬುದರ ಮೇಲೆ ಅವರ ಸರ್ಕಾರದ ಭದ್ರತೆ ಅವಲಂಬಿತವಾಗಿದೆ. ಬಿಜೆಪಿ ಗಮನಾರ್ಹ ಏರಿಕೆ ಕಾಣಲಿದೆ.

ತೃಣಮೂಲ ಕಾಂಗ್ರೆಸ್ 2011 ರಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, 34 ವರ್ಷಗಳ ಎಡ ಆಡಳಿತವನ್ನು ಕೊನೆಗೊಳಿಸಿತು. 2016 ರಲ್ಲಿ ಅದು ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿ, ಬಿಜೆಪಿ ಲಾಭ ಗಳಿಸುವುದರೊಂದಿಗೆ ತೃಣಮೂಲದ ಪ್ರಮಾಣ ತೀವ್ರವಾಗಿ ಕುಸಿಯುತ್ತದೆ ಎಂದು ಸಮೀಕ್ಷೆಗಳು ಸೂಚಿಸುತ್ತವೆ. ಆದರೆ ಎಲ್ಲ ಸಮೀಕ್ಷೆಗಳ ಸಮೀಕ್ಷೆ (ಪೋಲ್ ಆಫ್ ಪೋಲ್ಸ್) ಟಿಎಂಸಿ ಸರಳ ಬಹುಮತ ಪಡೆಯಲಿದೆ ಎನ್ನುತ್ತದೆ.

ಇಂಡಿಯಾ ನ್ಯೂಸ್-ಜನ್ ಕಿ ಬಾತ್ ಬಿಜೆಪಿಗೆ ಗೆಲುವಿನ ಮುನ್ಸೂಚನೆ ನೀಡಿದರೆ, ರಿಪಬ್ಲಿಕ್ ಟಿಸಿಎನ್‌ಎಕ್ಸ್ ಸಮೀಕ್ಷೆ ಅತಂತ್ರ ವಿಧಾನಸಭೆಯನ್ನು ಸೂಚಿಸಿದೆ.

ಕೇರಳದಲ್ಲಿ ಈಗಿನ ಎಡಪಂಥೀಯ ಎಲ್‌ಡಿಎಫ್ ಕೂಟವು 140 ಸ್ಥಾನಗಳಲ್ಲಿ 85 ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಅದು ಸರಿಯೆಂದು ಸಾಬೀತಾದರೆ, ಕೇರಳದ ರಾಜಕೀಯದಲ್ಲಿ ಆಡಳಿತ ಪಕ್ಷ ಪುನರಾಯ್ಕೆಗೊಂಡ ಮೊದಲ ನಿದರ್ಶನ ಇದಾಗಲಿದೆ. ಕೇರಳದಲ್ಲಿ ಎರಡು ಸ್ಥಾನಗಳೊಂದಿಗೆ ಬಿಜೆಪಿ ತನ್ನ ಅಸ್ತಿತ್ವವನ್ನು ತೋರಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಸಮೀಕ್ಷೆ ತಿಳಿಸಿದೆ.

ತಮಿಳುನಾಡಿನಲ್ಲಿ, ಡಿಎಂಕೆ ನೇತೃತ್ವದ ಕೂಟ ಸಲೀಸಾಗಿ ಅಧಿಕಾರಕ್ಕೆ ಬರಲಿದೆ. ಡಿಎಂಕೆ ಕೂಟ 234 ಸ್ಥಾನಗಳಲ್ಲಿ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆಡಳಿತಾರೂಢ ಮತ್ತು ಬಿಜೆಪಿಯ ಮಿತ್ರ ಪಕ್ಷ ಎಐಡಿಎಂಕೆ ತನ್ನ ವರ್ಚಸ್ವಿ ನಾಯಕಿ ಜೆ.ಜಯಲಲಿತಾ ಅವರ ನಿಧನದ ನಂತರ ನಡೆದ ಮೊದಲ ರಾಜ್ಯ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗಳಿಸಲಿದೆ ಎಂದು ನಿರ್ಗಮನ ಸಮೀಕ್ಷೆಗಳು ತಿಳಿಸಿವೆ. ಎಂ.ಕೆ ಸ್ಟಾಲಿನ್ ಅವರ ಡಿಎಂಕೆ 2019 ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಗಳಿಸಿತ್ತು. ಪ್ರತಿಪಕ್ಷದಲ್ಲಿ ಎರಡು ಅವಧಿಯ ನಂತರ ಈ ಬಾರಿ ಅಧಿಕಾರಕ್ಕೆ ಮರಳುವ ಭರವಸೆ ಇದೆ.

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಶೆ ಕಾದಿದೆ ಎಂದು ಎಕ್ಸಿಟ್ ಪೋಲ್ಸ್ ಸೂಚಿಸುತ್ತವೆ, ಬಿಜೆಪಿ 126 ಸ್ಥಾನಗಳಲ್ಲಿ 72 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ತನ್ನ ಹಿಂದಿನ ಭದ್ರಕೋಟೆ ಮರಳಿ ಗೆಲ್ಲಲು ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾದರೂ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳಿವೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ ಮತದಾನ ಏಪ್ರಿಲ್ 29ಕ್ಕೆ ಕೊನೆಗೊಂಡಿದೆ. ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಚುನಾವಣೆಯೇನೊ ಮುಗಿದಿದೆ. ಆದರೆ ಈ ಚುನಾವಣೆಯ ಕಾರಣಕ್ಕೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆ ಬೀಸಿದ ಸಂದರ್ಭದಲ್ಲಿಯೇ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳನ್ನು ನಡೆಸಿ ಕೊರನಾ ಹರಡಲು ಕಾರಣರಾಗಿದ್ದರೆ ಎಂದು ಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ.


ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...