Homeಮುಖಪುಟಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ - ಕೊರೊನಾ ಮಾತ್ರ ತೀವ್ರ...

ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ – ಕೊರೊನಾ ಮಾತ್ರ ತೀವ್ರ ಏರಿಕೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಹೆಚ್ಚು ಗಮನ ಸೆಳೆದ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹೆಚ್ಚು ಫೇವರಿಟ್ ಆಗಿದ್ದಾರೆ ಮತ್ತು ಅವರ ತೃಣಮೂಲ ಕಾಂಗ್ರೆಸ್ ರಾಜ್ಯದ 294 ಸ್ಥಾನಗಳಲ್ಲಿ 152 ಸ್ಥಾನಗಳನ್ನು ಗೆಲ್ಲಬಹುದು, ಬಿಜೆಪಿ ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಎನ್‌ಡಿಟಿವಿ ನಡೆಸಿದ ಪೋಲ್ ಆಫ್ ಪೋಲ್ಸ್ (ಎಲ್ಲ ಸಮೀಕ್ಷೆಗಳ ಸಮೀಕ್ಷೆ) ತಿಳಿಸಿದೆ. ಈ ಸಮೀಕ್ಷೆ ಕಂಡುಕೊಂಡ ಅಂಶಗಳ ಪ್ರಕಾರ ತಮಿಳುನಾಡು ಹೊರತುಪಡಿಸಿ ಉಳಿದ ಕಡೆ ಆಡಳಿತ ಪಕ್ಷಗಳು ಮುಂದಿನ ಅವಧಿಗೂ ಮುಂದುವರೆಯಲಿವೆ.

ಆರು ನಿರ್ಗಮನ ಸಮೀಕ್ಷೆಗಳ ಒಟ್ಟು ಸರಾಸರಿಯು ಮಮತಾ ಬ್ಯಾನರ್ಜಿ ಬಹುಮತಕ್ಕೆ ತಲುಪಬಹುದೆಂದು ಸೂಚಿಸುತ್ತದೆ. ಆದರೆ ಚುನಾವಣೆಗೆ ಮುಂಚಿತವಾಗಿ ಹಲವಾರು ಪಕ್ಷಾಂತರಗಳ ನಂತರ ಬಿಜೆಪಿಯೊಂದಿಗಿನ ಅಂತರವನ್ನು ಅವರು ಎಷ್ಟು ವಿಸ್ತರಿಸಬಹುದು ಎಂಬುದರ ಮೇಲೆ ಅವರ ಸರ್ಕಾರದ ಭದ್ರತೆ ಅವಲಂಬಿತವಾಗಿದೆ. ಬಿಜೆಪಿ ಗಮನಾರ್ಹ ಏರಿಕೆ ಕಾಣಲಿದೆ.

ತೃಣಮೂಲ ಕಾಂಗ್ರೆಸ್ 2011 ರಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, 34 ವರ್ಷಗಳ ಎಡ ಆಡಳಿತವನ್ನು ಕೊನೆಗೊಳಿಸಿತು. 2016 ರಲ್ಲಿ ಅದು ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿ, ಬಿಜೆಪಿ ಲಾಭ ಗಳಿಸುವುದರೊಂದಿಗೆ ತೃಣಮೂಲದ ಪ್ರಮಾಣ ತೀವ್ರವಾಗಿ ಕುಸಿಯುತ್ತದೆ ಎಂದು ಸಮೀಕ್ಷೆಗಳು ಸೂಚಿಸುತ್ತವೆ. ಆದರೆ ಎಲ್ಲ ಸಮೀಕ್ಷೆಗಳ ಸಮೀಕ್ಷೆ (ಪೋಲ್ ಆಫ್ ಪೋಲ್ಸ್) ಟಿಎಂಸಿ ಸರಳ ಬಹುಮತ ಪಡೆಯಲಿದೆ ಎನ್ನುತ್ತದೆ.

ಇಂಡಿಯಾ ನ್ಯೂಸ್-ಜನ್ ಕಿ ಬಾತ್ ಬಿಜೆಪಿಗೆ ಗೆಲುವಿನ ಮುನ್ಸೂಚನೆ ನೀಡಿದರೆ, ರಿಪಬ್ಲಿಕ್ ಟಿಸಿಎನ್‌ಎಕ್ಸ್ ಸಮೀಕ್ಷೆ ಅತಂತ್ರ ವಿಧಾನಸಭೆಯನ್ನು ಸೂಚಿಸಿದೆ.

ಕೇರಳದಲ್ಲಿ ಈಗಿನ ಎಡಪಂಥೀಯ ಎಲ್‌ಡಿಎಫ್ ಕೂಟವು 140 ಸ್ಥಾನಗಳಲ್ಲಿ 85 ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಅದು ಸರಿಯೆಂದು ಸಾಬೀತಾದರೆ, ಕೇರಳದ ರಾಜಕೀಯದಲ್ಲಿ ಆಡಳಿತ ಪಕ್ಷ ಪುನರಾಯ್ಕೆಗೊಂಡ ಮೊದಲ ನಿದರ್ಶನ ಇದಾಗಲಿದೆ. ಕೇರಳದಲ್ಲಿ ಎರಡು ಸ್ಥಾನಗಳೊಂದಿಗೆ ಬಿಜೆಪಿ ತನ್ನ ಅಸ್ತಿತ್ವವನ್ನು ತೋರಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಸಮೀಕ್ಷೆ ತಿಳಿಸಿದೆ.

ತಮಿಳುನಾಡಿನಲ್ಲಿ, ಡಿಎಂಕೆ ನೇತೃತ್ವದ ಕೂಟ ಸಲೀಸಾಗಿ ಅಧಿಕಾರಕ್ಕೆ ಬರಲಿದೆ. ಡಿಎಂಕೆ ಕೂಟ 234 ಸ್ಥಾನಗಳಲ್ಲಿ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆಡಳಿತಾರೂಢ ಮತ್ತು ಬಿಜೆಪಿಯ ಮಿತ್ರ ಪಕ್ಷ ಎಐಡಿಎಂಕೆ ತನ್ನ ವರ್ಚಸ್ವಿ ನಾಯಕಿ ಜೆ.ಜಯಲಲಿತಾ ಅವರ ನಿಧನದ ನಂತರ ನಡೆದ ಮೊದಲ ರಾಜ್ಯ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗಳಿಸಲಿದೆ ಎಂದು ನಿರ್ಗಮನ ಸಮೀಕ್ಷೆಗಳು ತಿಳಿಸಿವೆ. ಎಂ.ಕೆ ಸ್ಟಾಲಿನ್ ಅವರ ಡಿಎಂಕೆ 2019 ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಗಳಿಸಿತ್ತು. ಪ್ರತಿಪಕ್ಷದಲ್ಲಿ ಎರಡು ಅವಧಿಯ ನಂತರ ಈ ಬಾರಿ ಅಧಿಕಾರಕ್ಕೆ ಮರಳುವ ಭರವಸೆ ಇದೆ.

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಶೆ ಕಾದಿದೆ ಎಂದು ಎಕ್ಸಿಟ್ ಪೋಲ್ಸ್ ಸೂಚಿಸುತ್ತವೆ, ಬಿಜೆಪಿ 126 ಸ್ಥಾನಗಳಲ್ಲಿ 72 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ತನ್ನ ಹಿಂದಿನ ಭದ್ರಕೋಟೆ ಮರಳಿ ಗೆಲ್ಲಲು ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾದರೂ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳಿವೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ ಮತದಾನ ಏಪ್ರಿಲ್ 29ಕ್ಕೆ ಕೊನೆಗೊಂಡಿದೆ. ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಚುನಾವಣೆಯೇನೊ ಮುಗಿದಿದೆ. ಆದರೆ ಈ ಚುನಾವಣೆಯ ಕಾರಣಕ್ಕೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆ ಬೀಸಿದ ಸಂದರ್ಭದಲ್ಲಿಯೇ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳನ್ನು ನಡೆಸಿ ಕೊರನಾ ಹರಡಲು ಕಾರಣರಾಗಿದ್ದರೆ ಎಂದು ಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ.


ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...