Homeಮುಖಪುಟಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು....

ಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು….

‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮರ್ಥ್ಯವನ್ನಲ್ಲ' ಎಂದು ಸಮೀಕ್ಷೆ ನಡೆಸಿದ ಏಜೆನ್ಸಿಗಳು ಹೇಳುತ್ತಿರುವುದೇ ಹಾಸ್ಯಾಸ್ಪದ

- Advertisement -
- Advertisement -

| ದಿ ಕ್ವಿಂಟ್ ನಲ್ಲಿ ಆದಿತ್ಯ ಮೆನನ್ |

ಇಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರಬಹುದು ಅಷ್ಟೇ. ಬಂದೇ ಬರುತ್ತದೆ ಎಂದು ಹೇಳುವ ಬಹುಪಾಲು ಎಕ್ಸಿಟ್ ಪೋಲ್ಸ್ ಫೇಲಾಗುವ ಸಾಧ್ಯತೆಗಳು ದಟ್ಟವಾಗಿವೆ. ಉತ್ತರಪ್ರದೇಶದ ಸಮೀಕ್ಷೆ ಕುರಿತಂತೆ ಇಲ್ಲಿ ನೀಡಿರುವ ಎಡ ವಟ್ಟು, ಭಾನಗಡಿಗಳ ವಿವರ ಓದಿದರೆ, ಈ ಬಾರಿ ಎಕ್ಸಿಟ್ ಪೋಲ್ಸ್ ಯಾಕೆ ವಿಫಲವಾಗಬಹುದು ಎಂಬುದಕ್ಕೆ ಉತ್ತರ ಸಿಗುತ್ತವೆ…..

ಅತ್ಯಂತ ಪ್ರಮುಖ ಎನಿಸಿದ ಉತ್ತರಪ್ರದೇಶದ ಕುರಿತಂತೆ ಎಕ್ಸಿಟ್ ಪೋಲ್‍ಗಳು ನೀಡಿರುವ ಸಂಖ್ಯೆಗಳು ಅನುಮಾನಾಸ್ಪದವಾಗಿವೆ. ಮತ್ತೆ ಮೋದಿ ಪ್ರಧಾನಿ ಎಂದು ಈ ಎಲ್ಲ ಪೋಲ್‍ಗಳು ಹೇಳಿದರೂ ಉತ್ತರಪ್ರದೇಶದ ಕುರಿತು ನೀಡಿರುವ ಸಂಖ್ಯೆಗಳಲ್ಲಿ ಸಾಕಷ್ಟು ‘ವೈವಿಧ್ಯತೆ’ ಇದೆ! ಒಂದೇ ರಾಜ್ಯ, ಹಲವು ಅಂದಾಜು!

ಎಕ್ಸಿಟ್ ಪೋಲ್‍ಗಳು ಮೂರು ಬಗೆಯ ಫಲಿತಾಂಶ ಅಂದಾಜು ಮಾಡಿವೆ:
1. ಎನ್‍ಡಿಎ, ಘಟಬಂಧನ್ ಸಮ-ಸಮ
2. ಎನ್‍ಡಿಎ ಸ್ವೀಪ್
3. ಘಟಬಂಧನ್ ಸ್ವೀಪ್

1. ಎನ್‍ಡಿಎ, ಘಟಬಂಧನ್ ಸಮ ಸಮ
ಮೂರು ಸಮೀಕ್ಷೆಗಳು ಈ ತರಹ ವರದಿ ಮಾಡಿವೆ. ಇಂಡಿಯಾ ಟಿವಿ-ಸಿಎನ್‍ಎಕ್ಸ್ ಸಮೀಕ್ಷೆ ಪ್ರಕಾರ, ಸಮ-ಸಮ ಅಲ್ಲದಿದ್ದರೂ, ಅದು ಎನ್‍ಡಿಎಗೆ 50, ಘಟಬಂಧನ್‍ಗೆ 28 ಕೊಟ್ಟಿದೆ. ಸಿ-ವೋಟರ್ ಘಟಬಂಧನ್‍ಗೆ 40, ಎನ್‍ಡಿಎಗೆ 38 ನೀಡಿದೆ. ಎಬಿಪಿ-ನೆಲ್ಸನ್ ಘಟಬಂಧನ್‍ಗೆ 45, ಎನ್‍ಡಿಎಗೆ 33 ಸೀಟು ನೀಡಿದೆ. ಈ ಮೂರೂ ಸಮೀಕ್ಷೆಗಳು ಕಾಂಗ್ರೆಸ್‍ಗೆ 2 ಸ್ಥಾನ ಕೊಟ್ಟಿವೆ.

2014ರಲ್ಲಿ ಘಟಬಂಧನ್ (ಆಗ ಅವು ಪ್ರತ್ಯೇಕವಾಗಿಯೇ ಸ್ಪರ್ಧಿಸಿದ್ದವು) ಎನ್‍ಡಿಎಗಿಂತ 42 ಕ್ಷೇತ್ರಗಳಲ್ಲಿ ಶೇಕಡಾವಾರು ಮತ ಪ್ರಮಾಣದಲ್ಲಿ ಮುಂದೆ ಇತ್ತು, 36 ಸೀಟುಗಳಲ್ಲಿ ಹಿಂದೆ ಇತ್ತು.
ಈಗ ಯಾವುದೇ ಪಾಸಿಟಿವ್ ಅಥವಾ ನೆಗೆಟಿವ್ ವೋಟ್ ಸ್ವಿಂಗ್ ಇಲ್ಲದೇ ಇದ್ದರೆ, ಈ ಘಟಬಂಧನ್ ನಡುವೆ ಪರಿಪೂರ್ಣ ‘ಮತ ವರ್ಗಾವಣೆ’ (ವೋಟ್ ಟ್ರಾನ್ಸ್‍ಫರ್) ನಡೆದರೆ, ಎನ್‍ಡಿಎಗೆ ಸಿಗುವುದು 36 ಸೀಟು (ಕಳೆದ ಸಲ 73) ಮಾತ್ರ!

ಇದನ್ನು ಓದಿ: 75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

ಆದರೆ, ಬಹುಪಾಲು ಸಮೀಕ್ಷೆಗಳು ಈ ವಿಷಯದಿಂದ ಒಂದು ಸಣ್ಣ ವಿಚಲನೆ ( ವಿಷಯಾಂತರ ಅನ್ನಬಹುದು, deviation) ಮಾಡಿವೆ. ಸಿ-ವೋಟರ್ ಸರ್ವೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆ ಸರಿಯಾಗಿದೆ ಎಂದು ತೋರಿಸುತ್ತಲೇ, ಬಿಜೆಪಿ ವಿರುದ್ಧ ಯಾವುದೇ ನೆಗೆಟಿವ್ ಸ್ವಿಂಗ್ ಇಲ್ಲ ಎಂದು ಸೂಚಿಸುತ್ತದೆ!

ಸಿಎನ್‍ಎಕ್ಸ್ ಸಮೀಕ್ಷೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆಯಲ್ಲಿ ಕೊಂಚ ಹಿನ್ನಡೆ ಆಗುವುದನ್ನು ಸೂಚಿಸುತ್ತಲೇ, ಒಂದು ಸಣ್ಣ ಪಾಸಿಟಿವ್ ಸ್ವಿಂಗ್ ಇದೆ ಎನ್ನುತ್ತದೆ. ನೆಲ್ಸನ್ ಸಮೀಕ್ಷೆ ಇದಕ್ಕೆ ವಿರುದ್ಧವಾಗಿದ್ದು, ಅದು ಘಟಬಂಧನ್ ನಡುವೆ ಪರಿಪೂರ್ಣ ಮತ ವರ್ಗಾವಣೆಯನ್ನು ಹೇಳುತ್ತಲೇ, ಎನ್‍ಡಿಎಯಿಂದ ಒಂದು ಅತಿ ಸಣ್ಣ ಸ್ವಿಂಗ್ ಆಗಲಿದೆ ಎನ್ನುತ್ತದೆ. ವಿಚಿತ್ರ ಎಂದರೆ, ಈ ನೆಲ್ಸನ್ ಸರ್ವೆ ಮೇ 19ರ ಸಂಜೆ ಎನ್‍ಡಿಎಗೆ 22 ಸೀಟು ಕೊಟ್ಟಿತ್ತು, ಆದರೆ ನಂತರ ಅದನ್ನು ಸಡನ್ನಾಗಿ 33ಕ್ಕೆ ಅಡ್ಜಸ್ಟ್ ಮಾಡಿಕೊಂಡಿತು!

2. ಎನ್‍ಡಿಎ ಸ್ವೀಪ್
ಈ ವಿಭಾಗದಲ್ಲಿ 3 ಬಗೆಯಿವೆ. ಒಂದು, ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆ ಎನ್‍ಡಿಎಗೆ 62-68 ಸೀಟುಗಳನ್ನು, ಘಟಬಂಧನ್‍ಗೆ 10-16 ಸೀಟುಗಳನ್ನು ದಯಪಾಲಿಸಿದೆ. ಟುಡೆ’ಸ್ ಚಾಣಕ್ಯ ಎನ್‍ಡಿಎಗೆ 65 ಮತ್ತು ಘಟಬಂಧನ್‍ಗೆ 13 ಸೀಟುಗಳನ್ನು ನೀಡಿದೆ. ನ್ಯೂಸ್-18-ಇಪ್ಸೊಸಿಸ್ ಎನ್‍ಡಿಎಗೆ 60 ಸೀಟು ಮತ್ತು ಘಟಬಂಧನ್‍ಗೆ 18 ಸೀಟು ಎಂದು ಹೇಳಿದೆ.
ಇಲ್ಲಿ ಪ್ರಸ್ತಾಪಿಸಲ್ಪಟ್ಟ ಮೂರೂ ಸಮೀಕ್ಷೆಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಜಾತಿ, ಲಿಂಗ, ವಯಸ್ಸು- ಈ ಎಲ್ಲ ಪರಿಗಣನೆ ಇಲ್ಲದೇ ಮೋದಿ ಅಲೆ ಎಲ್ಲ ಕಡೆಯಿದೆ ಎಂದಾಯ್ತು!

3 ಘಟಬಂಧನ್ ಸ್ವೀಪ್
ಮೇಲಿನ ಸಮೀಕ್ಷೆಗಳಿಗಿಂತ ಭಿನ್ನ ಎನಿಸುವ ಎರಡು ಸರ್ವೆಗಳು ಮಹಾ ಘಟಬಂಧನ್‍ಗೆ ಸ್ವೀಪ್ ಎಂದು ತೋರಿಸುತ್ತಿವೆ. ನ್ಯೂಸ್ ಚಾನೆಲ್ ನ್ಯಾಷನಲ್ ವಾಯಿಸ್ ಪ್ರಕಾರ, ಘಟಬಂಧನ್‍ಗೆ 48, ಎನ್‍ಡಿಎಗೆ 28 ಸೀಟು ದಕ್ಕಲಿವೆ.
ಕೃತಕ ಬುದ್ಧಿಮತ್ತೆ ( artificial intelligence) ನೆರವು ಪಡೆದು ಸಮೀಕ್ಷೆ ಮಾಡುವ Anthro.ai ಸಂಸ್ಥೆಯ ಸಮೀಕ್ಷೆ ಪ್ರಕಾರ, ಘಟಬಂಧನ್‍ಗೆ 54 ಸೀಟು ಸಿಗಲಿವೆ. ಎನ್‍ಡಿಎ 50 ಸೀಟು ಕಳೆದುಕೊಂಡು 22 ಸೀಟನ್ನಷ್ಟೇ ಗಳಿಸಲಿದೆ…

ಸೀಟ್ ಟು ಸೀಟ್ ಮತ್ತು ರಾತ್ರೋರಾತ್ರಿ ಡಿಲೀಟ್!
ಮೂರು ಸಂಸ್ಥೆಗಳು ಉತ್ತರಪ್ರದೇಶದಲ್ಲಿ ಸೀಟ್-ಟು-ಸೀಟ್ ಸಮೀಕ್ಷೆ ಮಾಡಿವೆ ಎಂದು ಹೇಳಿಕೊಂಡಿವೆ- ಆಕ್ಸಿಸ್, ಂಟಿಣhಡಿo.ಚಿi, ನ್ಯಾಷನಲ್ ವೈಸ್. ಆದರೆ, ರಾತ್ರೋರಾತ್ರಿ ಆಕ್ಸಿಸ್‍ನವರು ತಮ್ಮ ವೆಬ್‍ಸೈಟಿನಿಂದ ತಮ್ಮ ಪ್ರೆಡಿಕ್ಷನ್ ಅನ್ನು ಡಿಲೀಟ್ ಮಾಡಿದ್ದು ಸಂಶಯಾಸ್ಪದವಾಗಿದೆ! ಆದರೆ, ಈ ಪ್ರೆಡಿಕ್ಷನ್‍ಗಳಲ್ಲಿ ಕೆಲವೊಂದು ಬದಲಾವಣೆ ಮಾಡಿ, ಆಕ್ಸಿಸ್ ಸಹಭಾಗಿ ಚಾನೆಲ್ ಇಂಡಿಯಾ ಟುಡೇಯ ವೆಬ್‍ಸೈಟಿನಲ್ಲಿ ಹಾಕಲಾಗಿದೆ.

ಆಕ್ಸಿಸ್‍ನ ಸೀಟ್-ಟು-ಸೀಟ್ ವಿಶ್ಲೇಷಣೆಯಲ್ಲಿ ಅಖಿಲೇಶ್ ಪತ್ನಿ ಡಿಂಪಲ್ ಸೊಲು ಎಂದು ಹೇಳಲಾಗಿತ್ತು. 2014ರಲ್ಲಿ ಮೋದಿ ಅಲೆಯಲ್ಲಿ, ಬಿಎಸ್‍ಪಿ ಬೆಂಬಲವೂ ಇಲ್ಲದೇ ಗೆದ್ದಿದ್ದ ಡಿಂಪಲ್‍ಗೆ ಮೋದಿ ಅಲೆ ಇಲ್ಲದ, ಬಿಎಸ್‍ಪಿ ಬೆಂಬಲ ಬೇರೆ ಇರುವ ಹೊತ್ತಿನಲ್ಲಿ ಸೋಲು ಹೇಗೆ ಸಾಧ್ಯ ಎಂಬ ಸರಳ ಪ್ರಶ್ನೆಗೆ ಆಕ್ಸಿಸ್ ಬಳಿ ಉತ್ತರವಿರಲಿಲ್ಲ. ಇಂತಹ ಹಲವು ಎಡವಟ್ಟುಗಳ ಕಾರಣದಿಂದ ಅದು ತನ್ನ ವೆಬ್‍ಸೈಟಿನಿಂದಲೇ ತನ್ನದೇ ಪ್ರೆಡಿಕ್ಷನ್ ಅನ್ನು ತೆಗೆದು ಹಾಕಬೇಕಾಗಿತು! ಮುಲಾಯಂ ಸಿಂಗ್ ಕ್ಷೇತ್ರದ ವಿಚಾರದಲ್ಲೂ ಆಕ್ಸಿಸ್ ಎಡವಟ್ಟು ರಿಸಲ್ಟ್ ಕೊಟ್ಟಿತ್ತು.
ಇತರ ರಾಜ್ಯಗಳಲ್ಲೂ ಈ ಸಂಸ್ಥೆ ಮಾಡಿದ ಸೀಟ್-ಟು-ಸೀಟ್ ಎಕ್ಸಿಟ್ ಪೋಲ್‍ಗಳು ಸಂಶಯಾತ್ಮಕವಾಗಿಯೇ ಇವೆ.

ವಿಚಿತ್ರ ಅಂದರೆ, ಸೀಟ್-ಟು-ಸೀಟ್ ಪೋಲ್‍ನಲ್ಲಿ, ‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮಥ್ರ್ಯವನ್ನಲ್ಲ, ಇದರಲ್ಲಿ ಏರುಪೇರಾದರೆ ನಾವು ಜವಾಬ್ದಾರ ಅಲ್ಲ’ ಎಂದು ಆಕ್ಸಿಸ್ ಮೊದಲೇ ಘೋಷಿಸಿತ್ತು!
ಅಭ್ಯರ್ಥಿಯ ವಿಷಯವನ್ನೇ ಡ್ರಾಪ್ ಮಾಡಿದರೆ ಅದ್ಹೇಗೆ ಸೀಟ್-ಟು-ಸೀಟ್ ಸಮೀಕ್ಷೆ ಆಗುತ್ತದೆ? ಹೀಗಾಗಿ, ಒಟ್ಟಿನಲ್ಲಿ ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯೇ ನಂಬಿಕೆಗೆ ಅರ್ಹವಲ್ಲ ಅನಿಸತೊಡಗಬಹುದು.

ಸೀಟ್-ಟು-ಸೀಟ್ ಲೆಕ್ಕದ ಸರ್ವೆಯಲ್ಲಿ ನ್ಯಾಷನಲ್ ವೈಸ್ ಸಮೀಕ್ಷೆಯೇ ವಿಶ್ವಾಸಾರ್ಹ. ಅದು ಘಟಬಂಧನ್‍ಗೆ ಉತ್ತರಪ್ರದೇಶದಲ್ಲಿ 48 ಸೀಟು ಎಂದು ಹೇಳಿದೆ.
(ಆಧಾರ: ದಿ ಕ್ವಿಂಟ್)

ಇದನ್ನು ಓದಿ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಾದಿದೆ ಭೂಕಂಪ! – ಇದು ಡಾಟಾ ಅನಲಿಟಿಕಲ್ ಸಮೀಕ್ಷೆ ಬಿಚ್ಚಿಟ್ಟ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...