Homeಮುಖಪುಟಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು....

ಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು….

‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮರ್ಥ್ಯವನ್ನಲ್ಲ' ಎಂದು ಸಮೀಕ್ಷೆ ನಡೆಸಿದ ಏಜೆನ್ಸಿಗಳು ಹೇಳುತ್ತಿರುವುದೇ ಹಾಸ್ಯಾಸ್ಪದ

- Advertisement -
- Advertisement -

| ದಿ ಕ್ವಿಂಟ್ ನಲ್ಲಿ ಆದಿತ್ಯ ಮೆನನ್ |

ಇಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರಬಹುದು ಅಷ್ಟೇ. ಬಂದೇ ಬರುತ್ತದೆ ಎಂದು ಹೇಳುವ ಬಹುಪಾಲು ಎಕ್ಸಿಟ್ ಪೋಲ್ಸ್ ಫೇಲಾಗುವ ಸಾಧ್ಯತೆಗಳು ದಟ್ಟವಾಗಿವೆ. ಉತ್ತರಪ್ರದೇಶದ ಸಮೀಕ್ಷೆ ಕುರಿತಂತೆ ಇಲ್ಲಿ ನೀಡಿರುವ ಎಡ ವಟ್ಟು, ಭಾನಗಡಿಗಳ ವಿವರ ಓದಿದರೆ, ಈ ಬಾರಿ ಎಕ್ಸಿಟ್ ಪೋಲ್ಸ್ ಯಾಕೆ ವಿಫಲವಾಗಬಹುದು ಎಂಬುದಕ್ಕೆ ಉತ್ತರ ಸಿಗುತ್ತವೆ…..

ಅತ್ಯಂತ ಪ್ರಮುಖ ಎನಿಸಿದ ಉತ್ತರಪ್ರದೇಶದ ಕುರಿತಂತೆ ಎಕ್ಸಿಟ್ ಪೋಲ್‍ಗಳು ನೀಡಿರುವ ಸಂಖ್ಯೆಗಳು ಅನುಮಾನಾಸ್ಪದವಾಗಿವೆ. ಮತ್ತೆ ಮೋದಿ ಪ್ರಧಾನಿ ಎಂದು ಈ ಎಲ್ಲ ಪೋಲ್‍ಗಳು ಹೇಳಿದರೂ ಉತ್ತರಪ್ರದೇಶದ ಕುರಿತು ನೀಡಿರುವ ಸಂಖ್ಯೆಗಳಲ್ಲಿ ಸಾಕಷ್ಟು ‘ವೈವಿಧ್ಯತೆ’ ಇದೆ! ಒಂದೇ ರಾಜ್ಯ, ಹಲವು ಅಂದಾಜು!

ಎಕ್ಸಿಟ್ ಪೋಲ್‍ಗಳು ಮೂರು ಬಗೆಯ ಫಲಿತಾಂಶ ಅಂದಾಜು ಮಾಡಿವೆ:
1. ಎನ್‍ಡಿಎ, ಘಟಬಂಧನ್ ಸಮ-ಸಮ
2. ಎನ್‍ಡಿಎ ಸ್ವೀಪ್
3. ಘಟಬಂಧನ್ ಸ್ವೀಪ್

1. ಎನ್‍ಡಿಎ, ಘಟಬಂಧನ್ ಸಮ ಸಮ
ಮೂರು ಸಮೀಕ್ಷೆಗಳು ಈ ತರಹ ವರದಿ ಮಾಡಿವೆ. ಇಂಡಿಯಾ ಟಿವಿ-ಸಿಎನ್‍ಎಕ್ಸ್ ಸಮೀಕ್ಷೆ ಪ್ರಕಾರ, ಸಮ-ಸಮ ಅಲ್ಲದಿದ್ದರೂ, ಅದು ಎನ್‍ಡಿಎಗೆ 50, ಘಟಬಂಧನ್‍ಗೆ 28 ಕೊಟ್ಟಿದೆ. ಸಿ-ವೋಟರ್ ಘಟಬಂಧನ್‍ಗೆ 40, ಎನ್‍ಡಿಎಗೆ 38 ನೀಡಿದೆ. ಎಬಿಪಿ-ನೆಲ್ಸನ್ ಘಟಬಂಧನ್‍ಗೆ 45, ಎನ್‍ಡಿಎಗೆ 33 ಸೀಟು ನೀಡಿದೆ. ಈ ಮೂರೂ ಸಮೀಕ್ಷೆಗಳು ಕಾಂಗ್ರೆಸ್‍ಗೆ 2 ಸ್ಥಾನ ಕೊಟ್ಟಿವೆ.

2014ರಲ್ಲಿ ಘಟಬಂಧನ್ (ಆಗ ಅವು ಪ್ರತ್ಯೇಕವಾಗಿಯೇ ಸ್ಪರ್ಧಿಸಿದ್ದವು) ಎನ್‍ಡಿಎಗಿಂತ 42 ಕ್ಷೇತ್ರಗಳಲ್ಲಿ ಶೇಕಡಾವಾರು ಮತ ಪ್ರಮಾಣದಲ್ಲಿ ಮುಂದೆ ಇತ್ತು, 36 ಸೀಟುಗಳಲ್ಲಿ ಹಿಂದೆ ಇತ್ತು.
ಈಗ ಯಾವುದೇ ಪಾಸಿಟಿವ್ ಅಥವಾ ನೆಗೆಟಿವ್ ವೋಟ್ ಸ್ವಿಂಗ್ ಇಲ್ಲದೇ ಇದ್ದರೆ, ಈ ಘಟಬಂಧನ್ ನಡುವೆ ಪರಿಪೂರ್ಣ ‘ಮತ ವರ್ಗಾವಣೆ’ (ವೋಟ್ ಟ್ರಾನ್ಸ್‍ಫರ್) ನಡೆದರೆ, ಎನ್‍ಡಿಎಗೆ ಸಿಗುವುದು 36 ಸೀಟು (ಕಳೆದ ಸಲ 73) ಮಾತ್ರ!

ಇದನ್ನು ಓದಿ: 75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

ಆದರೆ, ಬಹುಪಾಲು ಸಮೀಕ್ಷೆಗಳು ಈ ವಿಷಯದಿಂದ ಒಂದು ಸಣ್ಣ ವಿಚಲನೆ ( ವಿಷಯಾಂತರ ಅನ್ನಬಹುದು, deviation) ಮಾಡಿವೆ. ಸಿ-ವೋಟರ್ ಸರ್ವೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆ ಸರಿಯಾಗಿದೆ ಎಂದು ತೋರಿಸುತ್ತಲೇ, ಬಿಜೆಪಿ ವಿರುದ್ಧ ಯಾವುದೇ ನೆಗೆಟಿವ್ ಸ್ವಿಂಗ್ ಇಲ್ಲ ಎಂದು ಸೂಚಿಸುತ್ತದೆ!

ಸಿಎನ್‍ಎಕ್ಸ್ ಸಮೀಕ್ಷೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆಯಲ್ಲಿ ಕೊಂಚ ಹಿನ್ನಡೆ ಆಗುವುದನ್ನು ಸೂಚಿಸುತ್ತಲೇ, ಒಂದು ಸಣ್ಣ ಪಾಸಿಟಿವ್ ಸ್ವಿಂಗ್ ಇದೆ ಎನ್ನುತ್ತದೆ. ನೆಲ್ಸನ್ ಸಮೀಕ್ಷೆ ಇದಕ್ಕೆ ವಿರುದ್ಧವಾಗಿದ್ದು, ಅದು ಘಟಬಂಧನ್ ನಡುವೆ ಪರಿಪೂರ್ಣ ಮತ ವರ್ಗಾವಣೆಯನ್ನು ಹೇಳುತ್ತಲೇ, ಎನ್‍ಡಿಎಯಿಂದ ಒಂದು ಅತಿ ಸಣ್ಣ ಸ್ವಿಂಗ್ ಆಗಲಿದೆ ಎನ್ನುತ್ತದೆ. ವಿಚಿತ್ರ ಎಂದರೆ, ಈ ನೆಲ್ಸನ್ ಸರ್ವೆ ಮೇ 19ರ ಸಂಜೆ ಎನ್‍ಡಿಎಗೆ 22 ಸೀಟು ಕೊಟ್ಟಿತ್ತು, ಆದರೆ ನಂತರ ಅದನ್ನು ಸಡನ್ನಾಗಿ 33ಕ್ಕೆ ಅಡ್ಜಸ್ಟ್ ಮಾಡಿಕೊಂಡಿತು!

2. ಎನ್‍ಡಿಎ ಸ್ವೀಪ್
ಈ ವಿಭಾಗದಲ್ಲಿ 3 ಬಗೆಯಿವೆ. ಒಂದು, ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆ ಎನ್‍ಡಿಎಗೆ 62-68 ಸೀಟುಗಳನ್ನು, ಘಟಬಂಧನ್‍ಗೆ 10-16 ಸೀಟುಗಳನ್ನು ದಯಪಾಲಿಸಿದೆ. ಟುಡೆ’ಸ್ ಚಾಣಕ್ಯ ಎನ್‍ಡಿಎಗೆ 65 ಮತ್ತು ಘಟಬಂಧನ್‍ಗೆ 13 ಸೀಟುಗಳನ್ನು ನೀಡಿದೆ. ನ್ಯೂಸ್-18-ಇಪ್ಸೊಸಿಸ್ ಎನ್‍ಡಿಎಗೆ 60 ಸೀಟು ಮತ್ತು ಘಟಬಂಧನ್‍ಗೆ 18 ಸೀಟು ಎಂದು ಹೇಳಿದೆ.
ಇಲ್ಲಿ ಪ್ರಸ್ತಾಪಿಸಲ್ಪಟ್ಟ ಮೂರೂ ಸಮೀಕ್ಷೆಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಜಾತಿ, ಲಿಂಗ, ವಯಸ್ಸು- ಈ ಎಲ್ಲ ಪರಿಗಣನೆ ಇಲ್ಲದೇ ಮೋದಿ ಅಲೆ ಎಲ್ಲ ಕಡೆಯಿದೆ ಎಂದಾಯ್ತು!

3 ಘಟಬಂಧನ್ ಸ್ವೀಪ್
ಮೇಲಿನ ಸಮೀಕ್ಷೆಗಳಿಗಿಂತ ಭಿನ್ನ ಎನಿಸುವ ಎರಡು ಸರ್ವೆಗಳು ಮಹಾ ಘಟಬಂಧನ್‍ಗೆ ಸ್ವೀಪ್ ಎಂದು ತೋರಿಸುತ್ತಿವೆ. ನ್ಯೂಸ್ ಚಾನೆಲ್ ನ್ಯಾಷನಲ್ ವಾಯಿಸ್ ಪ್ರಕಾರ, ಘಟಬಂಧನ್‍ಗೆ 48, ಎನ್‍ಡಿಎಗೆ 28 ಸೀಟು ದಕ್ಕಲಿವೆ.
ಕೃತಕ ಬುದ್ಧಿಮತ್ತೆ ( artificial intelligence) ನೆರವು ಪಡೆದು ಸಮೀಕ್ಷೆ ಮಾಡುವ Anthro.ai ಸಂಸ್ಥೆಯ ಸಮೀಕ್ಷೆ ಪ್ರಕಾರ, ಘಟಬಂಧನ್‍ಗೆ 54 ಸೀಟು ಸಿಗಲಿವೆ. ಎನ್‍ಡಿಎ 50 ಸೀಟು ಕಳೆದುಕೊಂಡು 22 ಸೀಟನ್ನಷ್ಟೇ ಗಳಿಸಲಿದೆ…

ಸೀಟ್ ಟು ಸೀಟ್ ಮತ್ತು ರಾತ್ರೋರಾತ್ರಿ ಡಿಲೀಟ್!
ಮೂರು ಸಂಸ್ಥೆಗಳು ಉತ್ತರಪ್ರದೇಶದಲ್ಲಿ ಸೀಟ್-ಟು-ಸೀಟ್ ಸಮೀಕ್ಷೆ ಮಾಡಿವೆ ಎಂದು ಹೇಳಿಕೊಂಡಿವೆ- ಆಕ್ಸಿಸ್, ಂಟಿಣhಡಿo.ಚಿi, ನ್ಯಾಷನಲ್ ವೈಸ್. ಆದರೆ, ರಾತ್ರೋರಾತ್ರಿ ಆಕ್ಸಿಸ್‍ನವರು ತಮ್ಮ ವೆಬ್‍ಸೈಟಿನಿಂದ ತಮ್ಮ ಪ್ರೆಡಿಕ್ಷನ್ ಅನ್ನು ಡಿಲೀಟ್ ಮಾಡಿದ್ದು ಸಂಶಯಾಸ್ಪದವಾಗಿದೆ! ಆದರೆ, ಈ ಪ್ರೆಡಿಕ್ಷನ್‍ಗಳಲ್ಲಿ ಕೆಲವೊಂದು ಬದಲಾವಣೆ ಮಾಡಿ, ಆಕ್ಸಿಸ್ ಸಹಭಾಗಿ ಚಾನೆಲ್ ಇಂಡಿಯಾ ಟುಡೇಯ ವೆಬ್‍ಸೈಟಿನಲ್ಲಿ ಹಾಕಲಾಗಿದೆ.

ಆಕ್ಸಿಸ್‍ನ ಸೀಟ್-ಟು-ಸೀಟ್ ವಿಶ್ಲೇಷಣೆಯಲ್ಲಿ ಅಖಿಲೇಶ್ ಪತ್ನಿ ಡಿಂಪಲ್ ಸೊಲು ಎಂದು ಹೇಳಲಾಗಿತ್ತು. 2014ರಲ್ಲಿ ಮೋದಿ ಅಲೆಯಲ್ಲಿ, ಬಿಎಸ್‍ಪಿ ಬೆಂಬಲವೂ ಇಲ್ಲದೇ ಗೆದ್ದಿದ್ದ ಡಿಂಪಲ್‍ಗೆ ಮೋದಿ ಅಲೆ ಇಲ್ಲದ, ಬಿಎಸ್‍ಪಿ ಬೆಂಬಲ ಬೇರೆ ಇರುವ ಹೊತ್ತಿನಲ್ಲಿ ಸೋಲು ಹೇಗೆ ಸಾಧ್ಯ ಎಂಬ ಸರಳ ಪ್ರಶ್ನೆಗೆ ಆಕ್ಸಿಸ್ ಬಳಿ ಉತ್ತರವಿರಲಿಲ್ಲ. ಇಂತಹ ಹಲವು ಎಡವಟ್ಟುಗಳ ಕಾರಣದಿಂದ ಅದು ತನ್ನ ವೆಬ್‍ಸೈಟಿನಿಂದಲೇ ತನ್ನದೇ ಪ್ರೆಡಿಕ್ಷನ್ ಅನ್ನು ತೆಗೆದು ಹಾಕಬೇಕಾಗಿತು! ಮುಲಾಯಂ ಸಿಂಗ್ ಕ್ಷೇತ್ರದ ವಿಚಾರದಲ್ಲೂ ಆಕ್ಸಿಸ್ ಎಡವಟ್ಟು ರಿಸಲ್ಟ್ ಕೊಟ್ಟಿತ್ತು.
ಇತರ ರಾಜ್ಯಗಳಲ್ಲೂ ಈ ಸಂಸ್ಥೆ ಮಾಡಿದ ಸೀಟ್-ಟು-ಸೀಟ್ ಎಕ್ಸಿಟ್ ಪೋಲ್‍ಗಳು ಸಂಶಯಾತ್ಮಕವಾಗಿಯೇ ಇವೆ.

ವಿಚಿತ್ರ ಅಂದರೆ, ಸೀಟ್-ಟು-ಸೀಟ್ ಪೋಲ್‍ನಲ್ಲಿ, ‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮಥ್ರ್ಯವನ್ನಲ್ಲ, ಇದರಲ್ಲಿ ಏರುಪೇರಾದರೆ ನಾವು ಜವಾಬ್ದಾರ ಅಲ್ಲ’ ಎಂದು ಆಕ್ಸಿಸ್ ಮೊದಲೇ ಘೋಷಿಸಿತ್ತು!
ಅಭ್ಯರ್ಥಿಯ ವಿಷಯವನ್ನೇ ಡ್ರಾಪ್ ಮಾಡಿದರೆ ಅದ್ಹೇಗೆ ಸೀಟ್-ಟು-ಸೀಟ್ ಸಮೀಕ್ಷೆ ಆಗುತ್ತದೆ? ಹೀಗಾಗಿ, ಒಟ್ಟಿನಲ್ಲಿ ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯೇ ನಂಬಿಕೆಗೆ ಅರ್ಹವಲ್ಲ ಅನಿಸತೊಡಗಬಹುದು.

ಸೀಟ್-ಟು-ಸೀಟ್ ಲೆಕ್ಕದ ಸರ್ವೆಯಲ್ಲಿ ನ್ಯಾಷನಲ್ ವೈಸ್ ಸಮೀಕ್ಷೆಯೇ ವಿಶ್ವಾಸಾರ್ಹ. ಅದು ಘಟಬಂಧನ್‍ಗೆ ಉತ್ತರಪ್ರದೇಶದಲ್ಲಿ 48 ಸೀಟು ಎಂದು ಹೇಳಿದೆ.
(ಆಧಾರ: ದಿ ಕ್ವಿಂಟ್)

ಇದನ್ನು ಓದಿ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಾದಿದೆ ಭೂಕಂಪ! – ಇದು ಡಾಟಾ ಅನಲಿಟಿಕಲ್ ಸಮೀಕ್ಷೆ ಬಿಚ್ಚಿಟ್ಟ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...