Homeಮುಖಪುಟಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು....

ಈ ಸಲ ಎಕ್ಸಿಟ್ ಪೋಲ್ಸ್ ಯಾಕೆ ಫೇಲಾಗಲಿವೆ? ಉತ್ತರಪ್ರದೇಶದ ಈ ಉದಾಹರಣೆಯೊಂದೇ ಸಾಕು….

‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮರ್ಥ್ಯವನ್ನಲ್ಲ' ಎಂದು ಸಮೀಕ್ಷೆ ನಡೆಸಿದ ಏಜೆನ್ಸಿಗಳು ಹೇಳುತ್ತಿರುವುದೇ ಹಾಸ್ಯಾಸ್ಪದ

- Advertisement -
- Advertisement -

| ದಿ ಕ್ವಿಂಟ್ ನಲ್ಲಿ ಆದಿತ್ಯ ಮೆನನ್ |

ಇಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರಬಹುದು ಅಷ್ಟೇ. ಬಂದೇ ಬರುತ್ತದೆ ಎಂದು ಹೇಳುವ ಬಹುಪಾಲು ಎಕ್ಸಿಟ್ ಪೋಲ್ಸ್ ಫೇಲಾಗುವ ಸಾಧ್ಯತೆಗಳು ದಟ್ಟವಾಗಿವೆ. ಉತ್ತರಪ್ರದೇಶದ ಸಮೀಕ್ಷೆ ಕುರಿತಂತೆ ಇಲ್ಲಿ ನೀಡಿರುವ ಎಡ ವಟ್ಟು, ಭಾನಗಡಿಗಳ ವಿವರ ಓದಿದರೆ, ಈ ಬಾರಿ ಎಕ್ಸಿಟ್ ಪೋಲ್ಸ್ ಯಾಕೆ ವಿಫಲವಾಗಬಹುದು ಎಂಬುದಕ್ಕೆ ಉತ್ತರ ಸಿಗುತ್ತವೆ…..

ಅತ್ಯಂತ ಪ್ರಮುಖ ಎನಿಸಿದ ಉತ್ತರಪ್ರದೇಶದ ಕುರಿತಂತೆ ಎಕ್ಸಿಟ್ ಪೋಲ್‍ಗಳು ನೀಡಿರುವ ಸಂಖ್ಯೆಗಳು ಅನುಮಾನಾಸ್ಪದವಾಗಿವೆ. ಮತ್ತೆ ಮೋದಿ ಪ್ರಧಾನಿ ಎಂದು ಈ ಎಲ್ಲ ಪೋಲ್‍ಗಳು ಹೇಳಿದರೂ ಉತ್ತರಪ್ರದೇಶದ ಕುರಿತು ನೀಡಿರುವ ಸಂಖ್ಯೆಗಳಲ್ಲಿ ಸಾಕಷ್ಟು ‘ವೈವಿಧ್ಯತೆ’ ಇದೆ! ಒಂದೇ ರಾಜ್ಯ, ಹಲವು ಅಂದಾಜು!

ಎಕ್ಸಿಟ್ ಪೋಲ್‍ಗಳು ಮೂರು ಬಗೆಯ ಫಲಿತಾಂಶ ಅಂದಾಜು ಮಾಡಿವೆ:
1. ಎನ್‍ಡಿಎ, ಘಟಬಂಧನ್ ಸಮ-ಸಮ
2. ಎನ್‍ಡಿಎ ಸ್ವೀಪ್
3. ಘಟಬಂಧನ್ ಸ್ವೀಪ್

1. ಎನ್‍ಡಿಎ, ಘಟಬಂಧನ್ ಸಮ ಸಮ
ಮೂರು ಸಮೀಕ್ಷೆಗಳು ಈ ತರಹ ವರದಿ ಮಾಡಿವೆ. ಇಂಡಿಯಾ ಟಿವಿ-ಸಿಎನ್‍ಎಕ್ಸ್ ಸಮೀಕ್ಷೆ ಪ್ರಕಾರ, ಸಮ-ಸಮ ಅಲ್ಲದಿದ್ದರೂ, ಅದು ಎನ್‍ಡಿಎಗೆ 50, ಘಟಬಂಧನ್‍ಗೆ 28 ಕೊಟ್ಟಿದೆ. ಸಿ-ವೋಟರ್ ಘಟಬಂಧನ್‍ಗೆ 40, ಎನ್‍ಡಿಎಗೆ 38 ನೀಡಿದೆ. ಎಬಿಪಿ-ನೆಲ್ಸನ್ ಘಟಬಂಧನ್‍ಗೆ 45, ಎನ್‍ಡಿಎಗೆ 33 ಸೀಟು ನೀಡಿದೆ. ಈ ಮೂರೂ ಸಮೀಕ್ಷೆಗಳು ಕಾಂಗ್ರೆಸ್‍ಗೆ 2 ಸ್ಥಾನ ಕೊಟ್ಟಿವೆ.

2014ರಲ್ಲಿ ಘಟಬಂಧನ್ (ಆಗ ಅವು ಪ್ರತ್ಯೇಕವಾಗಿಯೇ ಸ್ಪರ್ಧಿಸಿದ್ದವು) ಎನ್‍ಡಿಎಗಿಂತ 42 ಕ್ಷೇತ್ರಗಳಲ್ಲಿ ಶೇಕಡಾವಾರು ಮತ ಪ್ರಮಾಣದಲ್ಲಿ ಮುಂದೆ ಇತ್ತು, 36 ಸೀಟುಗಳಲ್ಲಿ ಹಿಂದೆ ಇತ್ತು.
ಈಗ ಯಾವುದೇ ಪಾಸಿಟಿವ್ ಅಥವಾ ನೆಗೆಟಿವ್ ವೋಟ್ ಸ್ವಿಂಗ್ ಇಲ್ಲದೇ ಇದ್ದರೆ, ಈ ಘಟಬಂಧನ್ ನಡುವೆ ಪರಿಪೂರ್ಣ ‘ಮತ ವರ್ಗಾವಣೆ’ (ವೋಟ್ ಟ್ರಾನ್ಸ್‍ಫರ್) ನಡೆದರೆ, ಎನ್‍ಡಿಎಗೆ ಸಿಗುವುದು 36 ಸೀಟು (ಕಳೆದ ಸಲ 73) ಮಾತ್ರ!

ಇದನ್ನು ಓದಿ: 75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

ಆದರೆ, ಬಹುಪಾಲು ಸಮೀಕ್ಷೆಗಳು ಈ ವಿಷಯದಿಂದ ಒಂದು ಸಣ್ಣ ವಿಚಲನೆ ( ವಿಷಯಾಂತರ ಅನ್ನಬಹುದು, deviation) ಮಾಡಿವೆ. ಸಿ-ವೋಟರ್ ಸರ್ವೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆ ಸರಿಯಾಗಿದೆ ಎಂದು ತೋರಿಸುತ್ತಲೇ, ಬಿಜೆಪಿ ವಿರುದ್ಧ ಯಾವುದೇ ನೆಗೆಟಿವ್ ಸ್ವಿಂಗ್ ಇಲ್ಲ ಎಂದು ಸೂಚಿಸುತ್ತದೆ!

ಸಿಎನ್‍ಎಕ್ಸ್ ಸಮೀಕ್ಷೆ, ಘಟಬಂಧನ್ ಪಕ್ಷಗಳ ನಡುವೆ ಮತ ವರ್ಗಾವಣೆಯಲ್ಲಿ ಕೊಂಚ ಹಿನ್ನಡೆ ಆಗುವುದನ್ನು ಸೂಚಿಸುತ್ತಲೇ, ಒಂದು ಸಣ್ಣ ಪಾಸಿಟಿವ್ ಸ್ವಿಂಗ್ ಇದೆ ಎನ್ನುತ್ತದೆ. ನೆಲ್ಸನ್ ಸಮೀಕ್ಷೆ ಇದಕ್ಕೆ ವಿರುದ್ಧವಾಗಿದ್ದು, ಅದು ಘಟಬಂಧನ್ ನಡುವೆ ಪರಿಪೂರ್ಣ ಮತ ವರ್ಗಾವಣೆಯನ್ನು ಹೇಳುತ್ತಲೇ, ಎನ್‍ಡಿಎಯಿಂದ ಒಂದು ಅತಿ ಸಣ್ಣ ಸ್ವಿಂಗ್ ಆಗಲಿದೆ ಎನ್ನುತ್ತದೆ. ವಿಚಿತ್ರ ಎಂದರೆ, ಈ ನೆಲ್ಸನ್ ಸರ್ವೆ ಮೇ 19ರ ಸಂಜೆ ಎನ್‍ಡಿಎಗೆ 22 ಸೀಟು ಕೊಟ್ಟಿತ್ತು, ಆದರೆ ನಂತರ ಅದನ್ನು ಸಡನ್ನಾಗಿ 33ಕ್ಕೆ ಅಡ್ಜಸ್ಟ್ ಮಾಡಿಕೊಂಡಿತು!

2. ಎನ್‍ಡಿಎ ಸ್ವೀಪ್
ಈ ವಿಭಾಗದಲ್ಲಿ 3 ಬಗೆಯಿವೆ. ಒಂದು, ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆ ಎನ್‍ಡಿಎಗೆ 62-68 ಸೀಟುಗಳನ್ನು, ಘಟಬಂಧನ್‍ಗೆ 10-16 ಸೀಟುಗಳನ್ನು ದಯಪಾಲಿಸಿದೆ. ಟುಡೆ’ಸ್ ಚಾಣಕ್ಯ ಎನ್‍ಡಿಎಗೆ 65 ಮತ್ತು ಘಟಬಂಧನ್‍ಗೆ 13 ಸೀಟುಗಳನ್ನು ನೀಡಿದೆ. ನ್ಯೂಸ್-18-ಇಪ್ಸೊಸಿಸ್ ಎನ್‍ಡಿಎಗೆ 60 ಸೀಟು ಮತ್ತು ಘಟಬಂಧನ್‍ಗೆ 18 ಸೀಟು ಎಂದು ಹೇಳಿದೆ.
ಇಲ್ಲಿ ಪ್ರಸ್ತಾಪಿಸಲ್ಪಟ್ಟ ಮೂರೂ ಸಮೀಕ್ಷೆಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಜಾತಿ, ಲಿಂಗ, ವಯಸ್ಸು- ಈ ಎಲ್ಲ ಪರಿಗಣನೆ ಇಲ್ಲದೇ ಮೋದಿ ಅಲೆ ಎಲ್ಲ ಕಡೆಯಿದೆ ಎಂದಾಯ್ತು!

3 ಘಟಬಂಧನ್ ಸ್ವೀಪ್
ಮೇಲಿನ ಸಮೀಕ್ಷೆಗಳಿಗಿಂತ ಭಿನ್ನ ಎನಿಸುವ ಎರಡು ಸರ್ವೆಗಳು ಮಹಾ ಘಟಬಂಧನ್‍ಗೆ ಸ್ವೀಪ್ ಎಂದು ತೋರಿಸುತ್ತಿವೆ. ನ್ಯೂಸ್ ಚಾನೆಲ್ ನ್ಯಾಷನಲ್ ವಾಯಿಸ್ ಪ್ರಕಾರ, ಘಟಬಂಧನ್‍ಗೆ 48, ಎನ್‍ಡಿಎಗೆ 28 ಸೀಟು ದಕ್ಕಲಿವೆ.
ಕೃತಕ ಬುದ್ಧಿಮತ್ತೆ ( artificial intelligence) ನೆರವು ಪಡೆದು ಸಮೀಕ್ಷೆ ಮಾಡುವ Anthro.ai ಸಂಸ್ಥೆಯ ಸಮೀಕ್ಷೆ ಪ್ರಕಾರ, ಘಟಬಂಧನ್‍ಗೆ 54 ಸೀಟು ಸಿಗಲಿವೆ. ಎನ್‍ಡಿಎ 50 ಸೀಟು ಕಳೆದುಕೊಂಡು 22 ಸೀಟನ್ನಷ್ಟೇ ಗಳಿಸಲಿದೆ…

ಸೀಟ್ ಟು ಸೀಟ್ ಮತ್ತು ರಾತ್ರೋರಾತ್ರಿ ಡಿಲೀಟ್!
ಮೂರು ಸಂಸ್ಥೆಗಳು ಉತ್ತರಪ್ರದೇಶದಲ್ಲಿ ಸೀಟ್-ಟು-ಸೀಟ್ ಸಮೀಕ್ಷೆ ಮಾಡಿವೆ ಎಂದು ಹೇಳಿಕೊಂಡಿವೆ- ಆಕ್ಸಿಸ್, ಂಟಿಣhಡಿo.ಚಿi, ನ್ಯಾಷನಲ್ ವೈಸ್. ಆದರೆ, ರಾತ್ರೋರಾತ್ರಿ ಆಕ್ಸಿಸ್‍ನವರು ತಮ್ಮ ವೆಬ್‍ಸೈಟಿನಿಂದ ತಮ್ಮ ಪ್ರೆಡಿಕ್ಷನ್ ಅನ್ನು ಡಿಲೀಟ್ ಮಾಡಿದ್ದು ಸಂಶಯಾಸ್ಪದವಾಗಿದೆ! ಆದರೆ, ಈ ಪ್ರೆಡಿಕ್ಷನ್‍ಗಳಲ್ಲಿ ಕೆಲವೊಂದು ಬದಲಾವಣೆ ಮಾಡಿ, ಆಕ್ಸಿಸ್ ಸಹಭಾಗಿ ಚಾನೆಲ್ ಇಂಡಿಯಾ ಟುಡೇಯ ವೆಬ್‍ಸೈಟಿನಲ್ಲಿ ಹಾಕಲಾಗಿದೆ.

ಆಕ್ಸಿಸ್‍ನ ಸೀಟ್-ಟು-ಸೀಟ್ ವಿಶ್ಲೇಷಣೆಯಲ್ಲಿ ಅಖಿಲೇಶ್ ಪತ್ನಿ ಡಿಂಪಲ್ ಸೊಲು ಎಂದು ಹೇಳಲಾಗಿತ್ತು. 2014ರಲ್ಲಿ ಮೋದಿ ಅಲೆಯಲ್ಲಿ, ಬಿಎಸ್‍ಪಿ ಬೆಂಬಲವೂ ಇಲ್ಲದೇ ಗೆದ್ದಿದ್ದ ಡಿಂಪಲ್‍ಗೆ ಮೋದಿ ಅಲೆ ಇಲ್ಲದ, ಬಿಎಸ್‍ಪಿ ಬೆಂಬಲ ಬೇರೆ ಇರುವ ಹೊತ್ತಿನಲ್ಲಿ ಸೋಲು ಹೇಗೆ ಸಾಧ್ಯ ಎಂಬ ಸರಳ ಪ್ರಶ್ನೆಗೆ ಆಕ್ಸಿಸ್ ಬಳಿ ಉತ್ತರವಿರಲಿಲ್ಲ. ಇಂತಹ ಹಲವು ಎಡವಟ್ಟುಗಳ ಕಾರಣದಿಂದ ಅದು ತನ್ನ ವೆಬ್‍ಸೈಟಿನಿಂದಲೇ ತನ್ನದೇ ಪ್ರೆಡಿಕ್ಷನ್ ಅನ್ನು ತೆಗೆದು ಹಾಕಬೇಕಾಗಿತು! ಮುಲಾಯಂ ಸಿಂಗ್ ಕ್ಷೇತ್ರದ ವಿಚಾರದಲ್ಲೂ ಆಕ್ಸಿಸ್ ಎಡವಟ್ಟು ರಿಸಲ್ಟ್ ಕೊಟ್ಟಿತ್ತು.
ಇತರ ರಾಜ್ಯಗಳಲ್ಲೂ ಈ ಸಂಸ್ಥೆ ಮಾಡಿದ ಸೀಟ್-ಟು-ಸೀಟ್ ಎಕ್ಸಿಟ್ ಪೋಲ್‍ಗಳು ಸಂಶಯಾತ್ಮಕವಾಗಿಯೇ ಇವೆ.

ವಿಚಿತ್ರ ಅಂದರೆ, ಸೀಟ್-ಟು-ಸೀಟ್ ಪೋಲ್‍ನಲ್ಲಿ, ‘ಆಯಾ ಪಾರ್ಟಿಗಳ ಜನಪ್ರಿಯತೆಯನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಡಿದ್ದೇವೆ ಹೊರತು ಅಭ್ಯರ್ಥಿಯ ಸಾಮಥ್ರ್ಯವನ್ನಲ್ಲ, ಇದರಲ್ಲಿ ಏರುಪೇರಾದರೆ ನಾವು ಜವಾಬ್ದಾರ ಅಲ್ಲ’ ಎಂದು ಆಕ್ಸಿಸ್ ಮೊದಲೇ ಘೋಷಿಸಿತ್ತು!
ಅಭ್ಯರ್ಥಿಯ ವಿಷಯವನ್ನೇ ಡ್ರಾಪ್ ಮಾಡಿದರೆ ಅದ್ಹೇಗೆ ಸೀಟ್-ಟು-ಸೀಟ್ ಸಮೀಕ್ಷೆ ಆಗುತ್ತದೆ? ಹೀಗಾಗಿ, ಒಟ್ಟಿನಲ್ಲಿ ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯೇ ನಂಬಿಕೆಗೆ ಅರ್ಹವಲ್ಲ ಅನಿಸತೊಡಗಬಹುದು.

ಸೀಟ್-ಟು-ಸೀಟ್ ಲೆಕ್ಕದ ಸರ್ವೆಯಲ್ಲಿ ನ್ಯಾಷನಲ್ ವೈಸ್ ಸಮೀಕ್ಷೆಯೇ ವಿಶ್ವಾಸಾರ್ಹ. ಅದು ಘಟಬಂಧನ್‍ಗೆ ಉತ್ತರಪ್ರದೇಶದಲ್ಲಿ 48 ಸೀಟು ಎಂದು ಹೇಳಿದೆ.
(ಆಧಾರ: ದಿ ಕ್ವಿಂಟ್)

ಇದನ್ನು ಓದಿ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಾದಿದೆ ಭೂಕಂಪ! – ಇದು ಡಾಟಾ ಅನಲಿಟಿಕಲ್ ಸಮೀಕ್ಷೆ ಬಿಚ್ಚಿಟ್ಟ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...