Homeಮುಖಪುಟಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ: ಅಮಿತಾ ಶಾ ಸಭೆ ನಂತರ ಬಿಜೆಪಿ ಉವಾಚ..

ಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ: ಅಮಿತಾ ಶಾ ಸಭೆ ನಂತರ ಬಿಜೆಪಿ ಉವಾಚ..

ಮತದಾನೋತ್ತರ ಸಮೀಕ್ಷೆಗಳು ಸಂಜೆ 4 ಅಥವಾ 5 ರವರೆಗೆ ಡೇಟಾವನ್ನು ಮಾತ್ರ ಸಂಗ್ರಹಿಸಿವೆ... "ನಮ್ಮ ಮತದಾರರು ತಡವಾಗಿ ಬಂದು ಸಂಜೆಯವರೆಗೆ ಮತ ಚಲಾಯಿಸಿದರು" : ಮೀನಾಕ್ಷಿ ಲೇಖಿ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂಬ ಎಲ್ಲಾ ಎಕ್ಸಿಟ್ ಪೋಲ್‌ಗಳ ಅಭಿಪ್ರಾಯವನ್ನು ಬಿಜೆಪಿ ತಳ್ಳಿಹಾಕಿದೆ. ಅಮಿತ್ ಶಾ ನೇತೃತ್ವದಲ್ಲಿ ಪಕ್ಷದ ಸಂಸದರು ಮತ್ತು ದೆಹಲಿ ಘಟಕದ ಹಿರಿಯ ನಾಯಕರ ಸಭೆಯ ನಂತರ ಸಂಸದೆ ಮೀನಾಕ್ಷಿ ಲೇಖಿ ಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ ಎಂದು ಹೇಳಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ಸಮರ್ಪಕವಾಗಿಲ್ಲ. ಏಕೆಂದರೆ ಅವು ಸಂಜೆ 4 ಅಥವಾ 5 ರವರೆಗೆ ಡೇಟಾವನ್ನು ಮಾತ್ರ ಸಂಗ್ರಹಿಸಲಾಗುತ್ತದೆ … “ನಮ್ಮ ಮತದಾರರು ತಡವಾಗಿ ಬಂದು ಸಂಜೆಯವರೆಗೆ ಮತ ಚಲಾಯಿಸಿದರು” ಎಂದ ಅವರು ಈ ಕುರಿತು ಸಭೆಯಲ್ಲಿ ಚಚಿಸಲಾಗಿದ್ದು, ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಡವಾಗಿ ಮತದಾನ ಮಾಡುವುದು ಬಿಜೆಪಿ ನಿರ್ಧರಿಸಿದ ತಂತ್ರವಲ್ಲ. ದೆಹಲಿ ಮತ್ತು ದೇಶವನ್ನು ಸುರಕ್ಷಿತವಾಗಿಸಲು ಅಮಿತ್ ಷಾ ಬುಧವಾರ ಬೆಳಿಗ್ಗೆ 10.30ರ ಮೊದಲು ತಮ್ಮ ಕುಟುಂಬಗಳೊಂದಿಗೆ ಮತ ಚಲಾಯಿಸುವಂತೆ ಜನರನ್ನು ಕೇಳಿದ್ದರು. “ನಿಮ್ಮ ನಿರ್ಧಾರ ನನಗೆ ತಿಳಿದಿದೆ. ಫೆಬ್ರವರಿ 11 ರ ಫಲಿತಾಂಶಗಳು ಎಲ್ಲರಿಗೂ ಆಘಾತವನ್ನುಂಟು ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಐದು ಎಕ್ಸಿಟ್‌ ಪೋಲ್‌ ಸಮೀಕ್ಷೆಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು 56 ಸ್ಥಾನಗಳೊಂದಿಗೆ ಗೆಲ್ಲುತ್ತದೆ ಎಂದು ಸೂಚಿಸಿವೆ. 2015 ರಲ್ಲಿ ಕೇವಲ ಮೂರು ಸ್ಥಾನ ಗೆದ್ದಿದ್ದ ಬಿಜೆಪಿಗೆ 14 ಸ್ಥಾನಗಳು ದೊರೆಯುವ ನಿರೀಕ್ಷೆಯಿದೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶದ ಆಧಾರದ ಮೇಲೆ, ಬಿಜೆಪಿ ತನ್ನ 70 ಕೇಂದ್ರ ಸಚಿವರು, 270 ಸಂಸದರು ಮತ್ತು ವಿವಿಧ ರಾಜ್ಯಗಳ ಮುಖಂಡರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಭಾರೀ ಪ್ರಚಾರ ನಡೆಸಿತ್ತು. ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಚಿಸಿತ್ತು. ಅವರಲ್ಲಿ ಹಲವರು ದೆಹಲಿಯ ಚುನಾವಣೆಯ ನಿರ್ಣಾಯಕ ಪ್ರದೇಶಗಳಾದ ಕೊಳೆಗೇರಿ ಪ್ರದೇಶಗಳಲ್ಲಿ ಮತದಾರರೊಂದಿಗೆ ವಾಸ್ತವ್ಯ ಸಹ ಹೂಡಿದ್ದರು.

ಬಿಜೆಪಿಯ ಸಭೆಗೆ ಸಮಾನಾಂತರವಾಗಿ ಆಮ್ ಆದ್ಮಿ ಪಕ್ಷವು ಒಂದು ಸಭೆಯನ್ನು ಸಹ ನಡೆಸಿತು. ಅದರಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ಸುರಕ್ಷತೆಯ ಬಗ್ಗೆ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭಾಗವಹಿಸಿದ್ದರು.

ಚುನಾವಣೆಯ ನಂತರ ಬಿಜೆಪಿ ವಿಜಯದ ಮುನ್ಸೂಚನೆ ನೀಡಿರುವ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಹೇಳಿದ್ದಾರೆ. 48 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ, ಒಮ್ಮೆ ಅದು ಸಂಭವಿಸಿದಲ್ಲಿ ಯಾರೂ “ಇವಿಎಂಗಳನ್ನು ದೂಷಿಸಬಾರದು” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...