Homeಮುಖಪುಟಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ: ಅಮಿತಾ ಶಾ ಸಭೆ ನಂತರ ಬಿಜೆಪಿ ಉವಾಚ..

ಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ: ಅಮಿತಾ ಶಾ ಸಭೆ ನಂತರ ಬಿಜೆಪಿ ಉವಾಚ..

ಮತದಾನೋತ್ತರ ಸಮೀಕ್ಷೆಗಳು ಸಂಜೆ 4 ಅಥವಾ 5 ರವರೆಗೆ ಡೇಟಾವನ್ನು ಮಾತ್ರ ಸಂಗ್ರಹಿಸಿವೆ... "ನಮ್ಮ ಮತದಾರರು ತಡವಾಗಿ ಬಂದು ಸಂಜೆಯವರೆಗೆ ಮತ ಚಲಾಯಿಸಿದರು" : ಮೀನಾಕ್ಷಿ ಲೇಖಿ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂಬ ಎಲ್ಲಾ ಎಕ್ಸಿಟ್ ಪೋಲ್‌ಗಳ ಅಭಿಪ್ರಾಯವನ್ನು ಬಿಜೆಪಿ ತಳ್ಳಿಹಾಕಿದೆ. ಅಮಿತ್ ಶಾ ನೇತೃತ್ವದಲ್ಲಿ ಪಕ್ಷದ ಸಂಸದರು ಮತ್ತು ದೆಹಲಿ ಘಟಕದ ಹಿರಿಯ ನಾಯಕರ ಸಭೆಯ ನಂತರ ಸಂಸದೆ ಮೀನಾಕ್ಷಿ ಲೇಖಿ ಎಕ್ಸಿಟ್ ಪೋಲ್ಸ್ ಎಗ್ಸಾಕ್ಟ್ ಪೋಲ್‌ ಅಲ್ಲ ಎಂದು ಹೇಳಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ಸಮರ್ಪಕವಾಗಿಲ್ಲ. ಏಕೆಂದರೆ ಅವು ಸಂಜೆ 4 ಅಥವಾ 5 ರವರೆಗೆ ಡೇಟಾವನ್ನು ಮಾತ್ರ ಸಂಗ್ರಹಿಸಲಾಗುತ್ತದೆ … “ನಮ್ಮ ಮತದಾರರು ತಡವಾಗಿ ಬಂದು ಸಂಜೆಯವರೆಗೆ ಮತ ಚಲಾಯಿಸಿದರು” ಎಂದ ಅವರು ಈ ಕುರಿತು ಸಭೆಯಲ್ಲಿ ಚಚಿಸಲಾಗಿದ್ದು, ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಡವಾಗಿ ಮತದಾನ ಮಾಡುವುದು ಬಿಜೆಪಿ ನಿರ್ಧರಿಸಿದ ತಂತ್ರವಲ್ಲ. ದೆಹಲಿ ಮತ್ತು ದೇಶವನ್ನು ಸುರಕ್ಷಿತವಾಗಿಸಲು ಅಮಿತ್ ಷಾ ಬುಧವಾರ ಬೆಳಿಗ್ಗೆ 10.30ರ ಮೊದಲು ತಮ್ಮ ಕುಟುಂಬಗಳೊಂದಿಗೆ ಮತ ಚಲಾಯಿಸುವಂತೆ ಜನರನ್ನು ಕೇಳಿದ್ದರು. “ನಿಮ್ಮ ನಿರ್ಧಾರ ನನಗೆ ತಿಳಿದಿದೆ. ಫೆಬ್ರವರಿ 11 ರ ಫಲಿತಾಂಶಗಳು ಎಲ್ಲರಿಗೂ ಆಘಾತವನ್ನುಂಟು ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಐದು ಎಕ್ಸಿಟ್‌ ಪೋಲ್‌ ಸಮೀಕ್ಷೆಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು 56 ಸ್ಥಾನಗಳೊಂದಿಗೆ ಗೆಲ್ಲುತ್ತದೆ ಎಂದು ಸೂಚಿಸಿವೆ. 2015 ರಲ್ಲಿ ಕೇವಲ ಮೂರು ಸ್ಥಾನ ಗೆದ್ದಿದ್ದ ಬಿಜೆಪಿಗೆ 14 ಸ್ಥಾನಗಳು ದೊರೆಯುವ ನಿರೀಕ್ಷೆಯಿದೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶದ ಆಧಾರದ ಮೇಲೆ, ಬಿಜೆಪಿ ತನ್ನ 70 ಕೇಂದ್ರ ಸಚಿವರು, 270 ಸಂಸದರು ಮತ್ತು ವಿವಿಧ ರಾಜ್ಯಗಳ ಮುಖಂಡರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಭಾರೀ ಪ್ರಚಾರ ನಡೆಸಿತ್ತು. ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಚಿಸಿತ್ತು. ಅವರಲ್ಲಿ ಹಲವರು ದೆಹಲಿಯ ಚುನಾವಣೆಯ ನಿರ್ಣಾಯಕ ಪ್ರದೇಶಗಳಾದ ಕೊಳೆಗೇರಿ ಪ್ರದೇಶಗಳಲ್ಲಿ ಮತದಾರರೊಂದಿಗೆ ವಾಸ್ತವ್ಯ ಸಹ ಹೂಡಿದ್ದರು.

ಬಿಜೆಪಿಯ ಸಭೆಗೆ ಸಮಾನಾಂತರವಾಗಿ ಆಮ್ ಆದ್ಮಿ ಪಕ್ಷವು ಒಂದು ಸಭೆಯನ್ನು ಸಹ ನಡೆಸಿತು. ಅದರಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ಸುರಕ್ಷತೆಯ ಬಗ್ಗೆ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭಾಗವಹಿಸಿದ್ದರು.

ಚುನಾವಣೆಯ ನಂತರ ಬಿಜೆಪಿ ವಿಜಯದ ಮುನ್ಸೂಚನೆ ನೀಡಿರುವ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಹೇಳಿದ್ದಾರೆ. 48 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ, ಒಮ್ಮೆ ಅದು ಸಂಭವಿಸಿದಲ್ಲಿ ಯಾರೂ “ಇವಿಎಂಗಳನ್ನು ದೂಷಿಸಬಾರದು” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...