Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...