Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...