Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...