Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...