Homeಕರ್ನಾಟಕಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು... ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ.....

ಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು… ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ…..

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು.

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಎಕ್ಸಿಟ್ ಪೋಲ್ಸ್ ಮತ್ತೆ ಮೋದಿಯೇ ಪ್ರಧಾನಿ ಎಂಬರ್ಥದಲ್ಲಿ ಬಂದಿವೆ. ಆದರೆ, ಇವು ಹಲವು ‘ಸರ್‍ಪ್ರೈಸ್’ ಅಂಶಗಳನ್ನೂ ನಮ್ಮ ಮುಂದಿಟ್ಟಿವೆ. 2014ರಲ್ಲಿ ಮೋದಿ ಹವಾ ಇದ್ದಾಗ ಈ ಎಲ್ಲ ಪೋಲ್ಸ್ ಹೆಚ್ಚೂ-ಕಡಿಮೆ ಸತ್ಯವನ್ನೇ ನುಡಿದಿದ್ದವು. ಆದರೆ 2004, 2009 ರಲ್ಲಿ ಇವು ನೀಡಿದ ಫಲಿತಾಂಶ ಉಲ್ಟಾಪಪ್ಟಾ ಆಗಿತ್ತು. ಈ ಸಲವೂ ಹಾಗೇಕೆ ಆಗಬಾರದು ಎಂಬ ಪ್ರಶ್ನೆ ಇಟ್ಟುಕೊಂಡೇ, ಈ ಸಲದ ಪೋಲ್ಸ್‍ಗಳ ಕುರಿತು ಒಂದು ಬರಹ ಇಲ್ಲಿದೆ…

ಬಿಜೆಪಿ ಪರವಾದ ಒಂದು ಸಣ್ಣ ಸುದ್ದಿ ಬಂದರೂ ಪಟಾಕಿ ಹೊಡೆಯುವ ‘ಮೋದಿ ಭಕ್ತರೇ’ ಎಕ್ಸಿಟ್ ಪೋಲ್ ಬಂದ ಮೇಲೂ ಅಂತಹ ಉತ್ಸಾಹ ತೋರಿಲ್ಲ! ಯಡಿಯೂರಪ್ಪ ಬಿಟ್ಟರೆ ಉಳಿದವರಿಗೆ ಈ ಎಕ್ಸಿಟ್ ಪೋಲ್ ಉತ್ಸಾಹವನ್ನೇನೂ ಕೊಟ್ಟಂತಿಲ್ಲವಲ್ಲ? ಆದರೆ, ಬಿಜೆಪಿಯೇ ಅಧಿಕಾರದಲ್ಲಿ ಇರಲಿ ಎಂದು ಬಯಸುವ ಶೇರು ಮಾರುಕಟ್ಟೆಯಲ್ಲಿ ಈ ಸಂಭ್ರಮ ಕಂಡಿದೆ.

ವಿಷಯ ಏನೆಂದರೆ, ಈ ಎಕ್ಸಿಟ್ ಪೋಲ್‍ಗಳ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೆ, ‘ಬುದ್ಧಿವಂತರು’ ನಡೆಸುವ ಸ್ಟಾಕ್ ಮಾರ್ಕೆಟ್ ಹುಚ್ಚೆದ್ದು ಕುಣಿದಿದೆ. ಅದಕ್ಕೂ ಗೊತ್ತು ಈ ಎಕ್ಸಿಟ್ ಪೋಲ್ ನಮಗಾಗಿಯೇ ಮಾಡಿದ್ದು ಎಂದು… ಮೂರು-ನಾಲ್ಕು ದಿನಗಳ ವಹಿವಾಟು ಎಂದರೆ ಅದು 20 ಲಕ್ಷ ಕೋಟಿಗಳ ದಂಧೆ!ಇದನ್ನೆಲ್ಲ ಬಿಡೋಣ… ಈಗ ನೇರವಾಗಿ ಎಕ್ಸಿಟ್ ಪೋಲ್ ಹೇಳಿದ್ದು ಸತ್ಯಕ್ಕಿಂತ ಹೇಗೆ ದೂರ ಎಂದು ನೋಡೋಣ….

ರಾಜ್ಯ ಬಿಜೆಪಿ 18-24: ಎಲ್ಲಿಂದ ಹೆಚ್ಚುವರಿ ಗಳಿಕೆ?

ಕರ್ನಾಟಕದಲ್ಲಿ 28ರಲ್ಲಿ ಬಿಜೆಪಿ 18-24ರವರೆಗೂ ಸೀಟು ಗೆಲ್ಲುವುದಂತೆ! ಇದು ಬಿಜೆಪಿಯ ಕಾರ್ಯಕರ್ತರಿಗೇ ‘ಭಯ’ ಹುಟ್ಟಿಸುವ ನ್ಯೂಸ್! ಎಲ್ಲಿಂದ ಅವರು ಗೆಲ್ಲುತ್ತಾರೆ? ಕಳೆದ ಸಲ 17 ಗೆದ್ದಿದ್ದರು. ಈಗ ಅದಕ್ಕಿಂತ ಹೆಚ್ಚುವರಿಯಾಗಿ ಗೆಲ್ಲಬಹುದಾದ 3-5 ಕ್ಷೇತ್ರ ಇವೆಯಾ? ಇದುವರೆಗಿನ ಅಂದಾಜಿನಂತೆ ಕೆಲವು ಬಿಜೆಪಿ ಎಂಪಿಗಳು ಸೋಲಬಹುದು. ಈ ಸೋತ ಕ್ಷೇತ್ರಗಳನ್ನು ಕವರ್ ಮಾಡಿಕೊಂಡು 20-23 ತಲುಪಲು ಬಿಜೆಪಿ ಹೊಸ ಕ್ಷೇತ್ರಗಳನ್ನು ಗೆಲ್ಲಬೇಕಲ್ಲ? ಇನ್ನೊಂದು ವಿಷಯ, ಸಮೀಕ್ಷೆ ಮಾಡಿದ ಸಂಸ್ಥೆ ಮತ್ತು ಅದರ ಸಹಭಾಗಿಯಾಗಿ ಅದನ್ನು ಪ್ರಕಟಿಸಿದ ಚಾನೆಲ್‍ಗಳ ಪ್ರಕಾರ, 2014ರ ಲೆಕ್ಕದಲ್ಲಿ ಇಲ್ಲಿ 17 ಬಿಜೆಪಿ ಸಂಸದರು ಇದ್ದಾರೆ! ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಸೋತ ಮೇಲೆ ಬಿಜೆಪಿ ಸಂಸದರ ಸಂಖ್ಯೆ 16… ಈ ಪ್ರಾಥಮಿಕ ಅಂಕಿಸಂಖ್ಯೆಯ ತಿಳುವಳಿಕೆ ಇಲ್ಲದವರು ಅದೆಂತಹಾ ಸಮೀಕ್ಷೆ ಮಾಡಿದರು… ಅದನ್ನು ಫ್ಯಾಕ್ತುವಲ್ ಎರರ್ ಅಂದುಕೊಳ್ಳಲೂ ಆಗಲ್ಲ. ಏಕೆಂದರೆ, ಇಲ್ಲಿ ಮೈತ್ರಿಯ ಪರಿಣಾಮವಾಗಿಯೇ ಬಳ್ಳಾರಿಯಲ್ಲಿ ದೊಡ್ಡ ಲೀಡ್ ಬಂದಿದ್ದು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಮತ್ತು ನಿತ್ಯ ಸಿಎಂ ಆಕಾಂಕ್ಷಿ ಯಡಿಯೂರಪ್ಪನವರ ಸ್ವಂತ ಕ್ಷೇತ್ರದಲ್ಲಿ ಅವರ ಮಗ ಜೆಡಿಎಸ್ ವಿರುದ್ಧ ಕೇವಲ 50 ಸಾವಿರ ಓಟುಗಳಿಂದ ಗೆದ್ದರಲ್ಲವೇ? ಅದು ಮೈತ್ರಿಯ ಎಫೆಕ್ಟ್ ಅಲ್ಲವೇ?

ಎಕ್ಸಿಟ್ ಪೋಲ್ಸ್ ಪ್ರಕಾರ, ಸದ್ಯ ಇಲ್ಲಿ ಮೈತ್ರಿಯ ಪ್ರಭಾವ ಇಲ್ಲ, ಓಕೆ ಎನ್ನೋಣ… ಬಿಜೆಪಿಗೆ ಹೆಚ್ಚುವರಿ ಸೀಟು ಗೆಲ್ಲಲು ಕಾರಣವಾದ ಅಂಶವೂ ನಮಗೆ ಕಾಣುತ್ತಿಲ್ಲವಲ್ಲ?

ಆಶ್ಚರ್ಯಗಳು, ಪ್ರಶ್ನೆಗಳು, ಸಂಶಯಗಳು
ಹೀಗಾಗಿ, ಈಗ ಪ್ರಕಟವಾಗಿರುವ ಎಕ್ಸಿಟ್ ಪೋಲ್ಸ್‍ಗಳ ಮೆಥಡಾಲಜಿಯ ಬಗ್ಗೆಯೇ ಒಂದು ಸಂಶಯ ಶುರುವಾಗಿದೆ… ಹಾಗಂತ, ಇದೇನೂ ಮೊದಲಲ್ಲ, ಹಲವಾರು ರಾಜ್ಯ ವಿಧಾನಸಭೆಗಳ ಚುನಾವಣೆಗಳ ಸಂದರ್ಭದಲ್ಲೂ ಈ ಸಮೀಕ್ಷೆಗಳು ನೆಗೆದು ಬಿದ್ದಿವೆ. ಹಾಗಿದ್ದರೂ, ಇವು ಮತ್ತೆ ಮತ್ತೆ ‘ತಾವು ಅಕ್ಯುರೇಟ್’ ಎಂದು ನಮ್ಮ ಮುಂದೆ ಬರುತ್ತಿವೆ. ಅಷ್ಟಕ್ಕೂ, ಯಾರಿದು ಸಿ-ವೋಟರ್? ಯಾವುದಿದು ನೆಲ್ಸನ್? ಟುಡೆಸ್ ಚಾಣಕ್ಯದ ಹಿನ್ನೆಲೆಯೇನು? ಈ ಕುರಿತಾಗಿ ಯಾವುದೂ ಪಾರದರ್ಶಕವಾಗೇ ಇಲ್ಲ. ಈ ಎಲ್ಲ ಬಿಸಿನೆಸ್ ಕಂಪನಿಗಳು (ದಂಧೆಕೋರರು) ನಮ್ಮ ಮುಂದೆ ಹಾಜರಾಗುವುದು ಚಾನೆಲ್‍ಗಳ ಮೂಲಕ! ಈ ಚಾನೆಲ್‍ಗಳೇ ಈಗ ಎಕ್ಸಿಟ್ ಪೋಲ್ಸ್ ದಂಧೆಯ ಸಾರ್ವಜನಿಕ ಮುಖಗಳು….

ದಲ್ಲಾಳಿಗಳು ಅನ್ನಬಾರದೇಕೆ? ನಿನ್ನೆ ಎಕ್ಸಿಟ್ ಪೋಲ್ ಪ್ರಕಟವಾದ ನಂತರ ಸ್ಟಾಕ್ ಮಾರ್ಕೆಟಿನಲ್ಲಿ ಸಂಭ್ರಮ! ಅದಾನಿ ಕಂಪನಿಗಳ ಶೇರು ವಹಿವಾಟಿನಲ್ಲಿ ಶೇ.13ರಷ್ಟು ಹೆಚ್ಚಳ!

ಎನ್‍ಡಿಎಗೆ ಅತಿ ಹೆಚ್ಚು ಸೀಟು 345 ಇದ್ದರೆ, ಉಳಿದ ಬಹುತೇಕ ಸಂಸ್ಥೆಗಳು 300ಕ್ಕೂ ಹೆಚ್ಚು ನೀಡಿವೆ. ಎನ್‍ಡಿಎಗೆ 240-260 ರ ಸಂಖ್ಯೆಯನ್ನು ಎರಡೇ ಎರಡು ಕಂಪನಿ ನೀಡಿವೆ… ಸರಾಸರಿ 300 ದಾಟದೇ ಇರುತ್ತಾ?
ಇವುಗಳಲ್ಲಿ ನಿರ್ದಿಷ್ಟ ಪಕ್ಷದ ಪರವಾಗಿ ಸಮೀಕ್ಷೆಯನ್ನು ರೂಪಿಸಿಕೊಡುವುದಕ್ಕಾಗಿ ಸಿಕ್ಕಿ ಹಾಕಿಕೊಂಡಿದ್ದ ಸಿ-ವೋಟರ್ ಇದೆ.

ಪುಣ್ಯಕ್ಕೆ ‘ಪ್ರಜಾವಾಣಿ’ಯಾದರೂ, ಸಮೀಕ್ಷೆಗಳು ನಿಜವಾದ ನಿದರ್ಶನಗಳು ಕಡಿಮೆ’ ಎಂದು ಮುಖಪುಟದ ಟೈಟಲ್ಲಿನಲ್ಲಿ ಹಾಕಿದೆ…

Statistics ಎಂಬ ಆಟ!
Probability ಅನ್ನೋ ಜೂಜು!

ಈಗ ಮತ್ತೆ ನಿನ್ನೆಯ ಎಕ್ಸಿಟ್ ಪೋಲ್‍ಗೆ ಬರೋಣ. ಅವು ಹತ್ತಿರಕ್ಕೆ ಸಮೀಪ ಇರಬಹುದು, ಸರಿ ಒಪ್ಪೋಣ. ಆದರೆ ಅದನ್ನೆಲ್ಲ ವೈಜ್ಞಾನಿಕ, ಗಣಿತಶಾಸ್ತ್ರೀಯ ಮಾನದಂಡ, ಅಲ್ಗೋರಿಥಮ್‍ಗಳ ನೆರವಿನಿಂದ ಮಾಡಲಾಗಿದೆ ಎಂದು ಬೊಬ್ಬೆ ಹೊಡೆಯಲಾಗುತ್ತಿದೆ. ಈ ಎಕ್ಸಿಟ್ ಪೋಲ್‍ಗಳಿಗೆ ಮಹಾ ಯಶಸ್ಸು ಅಂತಾ ಸಿಕ್ಕಿದ್ದರೆ, ಅದು 2014ರ ಚುನಾವಣೆಯಲ್ಲಿ… ನಿಖರ ಸಂಖ್ಯೆ ಹೇಳಲಾಗದಿದ್ದರೂ, ಈ ಸಲ ಮೋದಿ ಸರ್ಕಾರವೇ ಅಂತಾ ಜನರೇ ಹೇಳುತ್ತಿದ್ದರು. (ಹಾಗೆ ಅವರನ್ನು ಮಾಧ್ಯಮಗಳು, ಸುಶಿಕ್ಷಿತರು ನಂಬಿಸಿದ್ದರು!)… ಜನರು ಹೇಳಿದ್ದನ್ನೇ ಈ ಪೋಲ್‍ಗಳು ಹೇಳಿದ್ದವು.

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು. 2009ರಲ್ಲಿ ಮನಮೋಹನಸಿಂಗ್‍ರನ್ನು ಜರಿದು, ಅವಮಾನ ಮಾಡಿದ ಮೇಲೂ, ಈ ಸಲ ಎನ್‍ಡಿಎ ಎಂದು ಹೇಳಿದ್ದ ಸಮೀಕ್ಷೆಗಳು ಬಕ್ಕಬರಲು ಮಲಗಿದ್ದವು!
ಈ ದೇಶದಲ್ಲಿ ಈಗ ಸಮೀಕ್ಷೆಯೂ ಒಂದು ದಂಧೆಯಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...