Homeಕರ್ನಾಟಕಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು... ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ.....

ಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು… ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ…..

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು.

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಎಕ್ಸಿಟ್ ಪೋಲ್ಸ್ ಮತ್ತೆ ಮೋದಿಯೇ ಪ್ರಧಾನಿ ಎಂಬರ್ಥದಲ್ಲಿ ಬಂದಿವೆ. ಆದರೆ, ಇವು ಹಲವು ‘ಸರ್‍ಪ್ರೈಸ್’ ಅಂಶಗಳನ್ನೂ ನಮ್ಮ ಮುಂದಿಟ್ಟಿವೆ. 2014ರಲ್ಲಿ ಮೋದಿ ಹವಾ ಇದ್ದಾಗ ಈ ಎಲ್ಲ ಪೋಲ್ಸ್ ಹೆಚ್ಚೂ-ಕಡಿಮೆ ಸತ್ಯವನ್ನೇ ನುಡಿದಿದ್ದವು. ಆದರೆ 2004, 2009 ರಲ್ಲಿ ಇವು ನೀಡಿದ ಫಲಿತಾಂಶ ಉಲ್ಟಾಪಪ್ಟಾ ಆಗಿತ್ತು. ಈ ಸಲವೂ ಹಾಗೇಕೆ ಆಗಬಾರದು ಎಂಬ ಪ್ರಶ್ನೆ ಇಟ್ಟುಕೊಂಡೇ, ಈ ಸಲದ ಪೋಲ್ಸ್‍ಗಳ ಕುರಿತು ಒಂದು ಬರಹ ಇಲ್ಲಿದೆ…

ಬಿಜೆಪಿ ಪರವಾದ ಒಂದು ಸಣ್ಣ ಸುದ್ದಿ ಬಂದರೂ ಪಟಾಕಿ ಹೊಡೆಯುವ ‘ಮೋದಿ ಭಕ್ತರೇ’ ಎಕ್ಸಿಟ್ ಪೋಲ್ ಬಂದ ಮೇಲೂ ಅಂತಹ ಉತ್ಸಾಹ ತೋರಿಲ್ಲ! ಯಡಿಯೂರಪ್ಪ ಬಿಟ್ಟರೆ ಉಳಿದವರಿಗೆ ಈ ಎಕ್ಸಿಟ್ ಪೋಲ್ ಉತ್ಸಾಹವನ್ನೇನೂ ಕೊಟ್ಟಂತಿಲ್ಲವಲ್ಲ? ಆದರೆ, ಬಿಜೆಪಿಯೇ ಅಧಿಕಾರದಲ್ಲಿ ಇರಲಿ ಎಂದು ಬಯಸುವ ಶೇರು ಮಾರುಕಟ್ಟೆಯಲ್ಲಿ ಈ ಸಂಭ್ರಮ ಕಂಡಿದೆ.

ವಿಷಯ ಏನೆಂದರೆ, ಈ ಎಕ್ಸಿಟ್ ಪೋಲ್‍ಗಳ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೆ, ‘ಬುದ್ಧಿವಂತರು’ ನಡೆಸುವ ಸ್ಟಾಕ್ ಮಾರ್ಕೆಟ್ ಹುಚ್ಚೆದ್ದು ಕುಣಿದಿದೆ. ಅದಕ್ಕೂ ಗೊತ್ತು ಈ ಎಕ್ಸಿಟ್ ಪೋಲ್ ನಮಗಾಗಿಯೇ ಮಾಡಿದ್ದು ಎಂದು… ಮೂರು-ನಾಲ್ಕು ದಿನಗಳ ವಹಿವಾಟು ಎಂದರೆ ಅದು 20 ಲಕ್ಷ ಕೋಟಿಗಳ ದಂಧೆ!ಇದನ್ನೆಲ್ಲ ಬಿಡೋಣ… ಈಗ ನೇರವಾಗಿ ಎಕ್ಸಿಟ್ ಪೋಲ್ ಹೇಳಿದ್ದು ಸತ್ಯಕ್ಕಿಂತ ಹೇಗೆ ದೂರ ಎಂದು ನೋಡೋಣ….

ರಾಜ್ಯ ಬಿಜೆಪಿ 18-24: ಎಲ್ಲಿಂದ ಹೆಚ್ಚುವರಿ ಗಳಿಕೆ?

ಕರ್ನಾಟಕದಲ್ಲಿ 28ರಲ್ಲಿ ಬಿಜೆಪಿ 18-24ರವರೆಗೂ ಸೀಟು ಗೆಲ್ಲುವುದಂತೆ! ಇದು ಬಿಜೆಪಿಯ ಕಾರ್ಯಕರ್ತರಿಗೇ ‘ಭಯ’ ಹುಟ್ಟಿಸುವ ನ್ಯೂಸ್! ಎಲ್ಲಿಂದ ಅವರು ಗೆಲ್ಲುತ್ತಾರೆ? ಕಳೆದ ಸಲ 17 ಗೆದ್ದಿದ್ದರು. ಈಗ ಅದಕ್ಕಿಂತ ಹೆಚ್ಚುವರಿಯಾಗಿ ಗೆಲ್ಲಬಹುದಾದ 3-5 ಕ್ಷೇತ್ರ ಇವೆಯಾ? ಇದುವರೆಗಿನ ಅಂದಾಜಿನಂತೆ ಕೆಲವು ಬಿಜೆಪಿ ಎಂಪಿಗಳು ಸೋಲಬಹುದು. ಈ ಸೋತ ಕ್ಷೇತ್ರಗಳನ್ನು ಕವರ್ ಮಾಡಿಕೊಂಡು 20-23 ತಲುಪಲು ಬಿಜೆಪಿ ಹೊಸ ಕ್ಷೇತ್ರಗಳನ್ನು ಗೆಲ್ಲಬೇಕಲ್ಲ? ಇನ್ನೊಂದು ವಿಷಯ, ಸಮೀಕ್ಷೆ ಮಾಡಿದ ಸಂಸ್ಥೆ ಮತ್ತು ಅದರ ಸಹಭಾಗಿಯಾಗಿ ಅದನ್ನು ಪ್ರಕಟಿಸಿದ ಚಾನೆಲ್‍ಗಳ ಪ್ರಕಾರ, 2014ರ ಲೆಕ್ಕದಲ್ಲಿ ಇಲ್ಲಿ 17 ಬಿಜೆಪಿ ಸಂಸದರು ಇದ್ದಾರೆ! ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಸೋತ ಮೇಲೆ ಬಿಜೆಪಿ ಸಂಸದರ ಸಂಖ್ಯೆ 16… ಈ ಪ್ರಾಥಮಿಕ ಅಂಕಿಸಂಖ್ಯೆಯ ತಿಳುವಳಿಕೆ ಇಲ್ಲದವರು ಅದೆಂತಹಾ ಸಮೀಕ್ಷೆ ಮಾಡಿದರು… ಅದನ್ನು ಫ್ಯಾಕ್ತುವಲ್ ಎರರ್ ಅಂದುಕೊಳ್ಳಲೂ ಆಗಲ್ಲ. ಏಕೆಂದರೆ, ಇಲ್ಲಿ ಮೈತ್ರಿಯ ಪರಿಣಾಮವಾಗಿಯೇ ಬಳ್ಳಾರಿಯಲ್ಲಿ ದೊಡ್ಡ ಲೀಡ್ ಬಂದಿದ್ದು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಮತ್ತು ನಿತ್ಯ ಸಿಎಂ ಆಕಾಂಕ್ಷಿ ಯಡಿಯೂರಪ್ಪನವರ ಸ್ವಂತ ಕ್ಷೇತ್ರದಲ್ಲಿ ಅವರ ಮಗ ಜೆಡಿಎಸ್ ವಿರುದ್ಧ ಕೇವಲ 50 ಸಾವಿರ ಓಟುಗಳಿಂದ ಗೆದ್ದರಲ್ಲವೇ? ಅದು ಮೈತ್ರಿಯ ಎಫೆಕ್ಟ್ ಅಲ್ಲವೇ?

ಎಕ್ಸಿಟ್ ಪೋಲ್ಸ್ ಪ್ರಕಾರ, ಸದ್ಯ ಇಲ್ಲಿ ಮೈತ್ರಿಯ ಪ್ರಭಾವ ಇಲ್ಲ, ಓಕೆ ಎನ್ನೋಣ… ಬಿಜೆಪಿಗೆ ಹೆಚ್ಚುವರಿ ಸೀಟು ಗೆಲ್ಲಲು ಕಾರಣವಾದ ಅಂಶವೂ ನಮಗೆ ಕಾಣುತ್ತಿಲ್ಲವಲ್ಲ?

ಆಶ್ಚರ್ಯಗಳು, ಪ್ರಶ್ನೆಗಳು, ಸಂಶಯಗಳು
ಹೀಗಾಗಿ, ಈಗ ಪ್ರಕಟವಾಗಿರುವ ಎಕ್ಸಿಟ್ ಪೋಲ್ಸ್‍ಗಳ ಮೆಥಡಾಲಜಿಯ ಬಗ್ಗೆಯೇ ಒಂದು ಸಂಶಯ ಶುರುವಾಗಿದೆ… ಹಾಗಂತ, ಇದೇನೂ ಮೊದಲಲ್ಲ, ಹಲವಾರು ರಾಜ್ಯ ವಿಧಾನಸಭೆಗಳ ಚುನಾವಣೆಗಳ ಸಂದರ್ಭದಲ್ಲೂ ಈ ಸಮೀಕ್ಷೆಗಳು ನೆಗೆದು ಬಿದ್ದಿವೆ. ಹಾಗಿದ್ದರೂ, ಇವು ಮತ್ತೆ ಮತ್ತೆ ‘ತಾವು ಅಕ್ಯುರೇಟ್’ ಎಂದು ನಮ್ಮ ಮುಂದೆ ಬರುತ್ತಿವೆ. ಅಷ್ಟಕ್ಕೂ, ಯಾರಿದು ಸಿ-ವೋಟರ್? ಯಾವುದಿದು ನೆಲ್ಸನ್? ಟುಡೆಸ್ ಚಾಣಕ್ಯದ ಹಿನ್ನೆಲೆಯೇನು? ಈ ಕುರಿತಾಗಿ ಯಾವುದೂ ಪಾರದರ್ಶಕವಾಗೇ ಇಲ್ಲ. ಈ ಎಲ್ಲ ಬಿಸಿನೆಸ್ ಕಂಪನಿಗಳು (ದಂಧೆಕೋರರು) ನಮ್ಮ ಮುಂದೆ ಹಾಜರಾಗುವುದು ಚಾನೆಲ್‍ಗಳ ಮೂಲಕ! ಈ ಚಾನೆಲ್‍ಗಳೇ ಈಗ ಎಕ್ಸಿಟ್ ಪೋಲ್ಸ್ ದಂಧೆಯ ಸಾರ್ವಜನಿಕ ಮುಖಗಳು….

ದಲ್ಲಾಳಿಗಳು ಅನ್ನಬಾರದೇಕೆ? ನಿನ್ನೆ ಎಕ್ಸಿಟ್ ಪೋಲ್ ಪ್ರಕಟವಾದ ನಂತರ ಸ್ಟಾಕ್ ಮಾರ್ಕೆಟಿನಲ್ಲಿ ಸಂಭ್ರಮ! ಅದಾನಿ ಕಂಪನಿಗಳ ಶೇರು ವಹಿವಾಟಿನಲ್ಲಿ ಶೇ.13ರಷ್ಟು ಹೆಚ್ಚಳ!

ಎನ್‍ಡಿಎಗೆ ಅತಿ ಹೆಚ್ಚು ಸೀಟು 345 ಇದ್ದರೆ, ಉಳಿದ ಬಹುತೇಕ ಸಂಸ್ಥೆಗಳು 300ಕ್ಕೂ ಹೆಚ್ಚು ನೀಡಿವೆ. ಎನ್‍ಡಿಎಗೆ 240-260 ರ ಸಂಖ್ಯೆಯನ್ನು ಎರಡೇ ಎರಡು ಕಂಪನಿ ನೀಡಿವೆ… ಸರಾಸರಿ 300 ದಾಟದೇ ಇರುತ್ತಾ?
ಇವುಗಳಲ್ಲಿ ನಿರ್ದಿಷ್ಟ ಪಕ್ಷದ ಪರವಾಗಿ ಸಮೀಕ್ಷೆಯನ್ನು ರೂಪಿಸಿಕೊಡುವುದಕ್ಕಾಗಿ ಸಿಕ್ಕಿ ಹಾಕಿಕೊಂಡಿದ್ದ ಸಿ-ವೋಟರ್ ಇದೆ.

ಪುಣ್ಯಕ್ಕೆ ‘ಪ್ರಜಾವಾಣಿ’ಯಾದರೂ, ಸಮೀಕ್ಷೆಗಳು ನಿಜವಾದ ನಿದರ್ಶನಗಳು ಕಡಿಮೆ’ ಎಂದು ಮುಖಪುಟದ ಟೈಟಲ್ಲಿನಲ್ಲಿ ಹಾಕಿದೆ…

Statistics ಎಂಬ ಆಟ!
Probability ಅನ್ನೋ ಜೂಜು!

ಈಗ ಮತ್ತೆ ನಿನ್ನೆಯ ಎಕ್ಸಿಟ್ ಪೋಲ್‍ಗೆ ಬರೋಣ. ಅವು ಹತ್ತಿರಕ್ಕೆ ಸಮೀಪ ಇರಬಹುದು, ಸರಿ ಒಪ್ಪೋಣ. ಆದರೆ ಅದನ್ನೆಲ್ಲ ವೈಜ್ಞಾನಿಕ, ಗಣಿತಶಾಸ್ತ್ರೀಯ ಮಾನದಂಡ, ಅಲ್ಗೋರಿಥಮ್‍ಗಳ ನೆರವಿನಿಂದ ಮಾಡಲಾಗಿದೆ ಎಂದು ಬೊಬ್ಬೆ ಹೊಡೆಯಲಾಗುತ್ತಿದೆ. ಈ ಎಕ್ಸಿಟ್ ಪೋಲ್‍ಗಳಿಗೆ ಮಹಾ ಯಶಸ್ಸು ಅಂತಾ ಸಿಕ್ಕಿದ್ದರೆ, ಅದು 2014ರ ಚುನಾವಣೆಯಲ್ಲಿ… ನಿಖರ ಸಂಖ್ಯೆ ಹೇಳಲಾಗದಿದ್ದರೂ, ಈ ಸಲ ಮೋದಿ ಸರ್ಕಾರವೇ ಅಂತಾ ಜನರೇ ಹೇಳುತ್ತಿದ್ದರು. (ಹಾಗೆ ಅವರನ್ನು ಮಾಧ್ಯಮಗಳು, ಸುಶಿಕ್ಷಿತರು ನಂಬಿಸಿದ್ದರು!)… ಜನರು ಹೇಳಿದ್ದನ್ನೇ ಈ ಪೋಲ್‍ಗಳು ಹೇಳಿದ್ದವು.

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು. 2009ರಲ್ಲಿ ಮನಮೋಹನಸಿಂಗ್‍ರನ್ನು ಜರಿದು, ಅವಮಾನ ಮಾಡಿದ ಮೇಲೂ, ಈ ಸಲ ಎನ್‍ಡಿಎ ಎಂದು ಹೇಳಿದ್ದ ಸಮೀಕ್ಷೆಗಳು ಬಕ್ಕಬರಲು ಮಲಗಿದ್ದವು!
ಈ ದೇಶದಲ್ಲಿ ಈಗ ಸಮೀಕ್ಷೆಯೂ ಒಂದು ದಂಧೆಯಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...