Homeಮುಖಪುಟಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

- Advertisement -
- Advertisement -

ವಿಶೇಷ ಸ್ಥಾನಮಾನ ರದ್ಧತಿಯ ಬಳಿಕ ತನ್ನ ಮೊದಲ ವಿಧಾನಸಭೆ ಚುನಾವಣೆಯನ್ನು ನೋಡುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಮುಂದಿನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಆದರೆ, ಗೆಲುವಿನ ಪ್ರಮಾಣವು ಸಣ್ಣ ಪಕ್ಷಗಳನ್ನು ಮೀರಿಸಿದೆ.

ಈ ವರ್ಷದ ಚುನಾವಣೆಯಲ್ಲಿ ಜಮಾತ್-ಎ-ಇಸ್ಲಾಮಿ ಚುನಾವಣಾ ಪ್ರಕ್ರಿಯೆಯಲ್ಲಿ ದಶಕಗಳ ನಂತರ ಮರುಪ್ರವೇಶವನ್ನು ಕಂಡಿತು. ಈ ಚುನಾವಣೆಯಲ್ಲಿ ಅದರ ಅಭ್ಯರ್ಥಿಗಳು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದರ ಮೇಲೆ ಎಲ್ಲರ ಕಣ್ಣುಗಳಿದ್ದವು. ಲೋಕಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷವು ಜಮಾತ್‌ನೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಕುತೂಹಲ ಮತ್ತಷ್ಟು ಹೆಚ್ಚಾಯಿತು.

ನಾಮಪತ್ರ ಸಲ್ಲಿಕೆ ವೇಳೆ ಜಮಾತ್ ಬೆಂಬಲಿತ 10 ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಆದರೆ, ಕೆಲವರು ಕಣದಿಂದ ಹಿಂದೆ ಸರಿದಿದ್ದರು. ಎಲ್ಲ ಜಮಾತ್ ಬೆಂಬಲಿತ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದು ಫಲಿತಾಂಶ ತೋರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಗೆಲುವಿನ ಹೊರತಾಗಿಯೂ, ಇಂಜಿನಿಯರ್ ರಶೀದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ. ಅವರ ಪಕ್ಷದ ಬೆಂಬಲಿತ ಅಭ್ಯರ್ಥಿ, ಅವರ ಸಹೋದರ ಖುರ್ಷೀದ್ ಅಹ್ಮದ್ ಶೇಖ್ ಮುನ್ನಡೆ ಸಾಧಿಸಿದ್ದರು.

ಕಳಪೆ ಪ್ರದರ್ಶನ ಕೊಟ್ಟ ಗುಲಾಂ ನಬಿ ಆಜಾದ್ ಪಕ್ಷದ

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ 2022 ರಲ್ಲಿ ಸ್ಥಾಪನೆಯಾದ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಆಜಾದ್ ಪಕ್ಷವು ಸಹ ಕಳಪೆ ಪ್ರದರ್ಶನ ನೀಡಿದೆ. ಸ್ಪರ್ಧಿಸಿದ ಎಲ್ಲ ಸ್ಥಾನಗಳಲ್ಲಿ ಹಿಂದುಳಿದಿದೆ. ತನ್ನ ಚುನಾವಣಾ ಚೊಚ್ಚಲವಾದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದ ಎಲ್ಲ ಮೂರು ಕ್ಷೇತ್ರಗಳನ್ನು ಕಳೆದುಕೊಂಡ ನಂತರ ಪಕ್ಷವು ಈಗಾಗಲೇ ಅಸ್ತವ್ಯಸ್ತವಾಗಿದೆ. ಲೋಕಸಭೆ ಸೋಲಿನ ಬಳಿಕ ಅದರ ಅನೇಕ ನಾಯಕರು ಪಕ್ಷ ತ್ಯಜಿಸಿದ್ದರು.

ಈ ಎಲ್ಲ ವೈಫಲ್ಯಗಳಲ್ಲಿನ ಸಾಮಾನ್ಯ ವಿಷಯವೆಂದರೆ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿಯು ಈ ರಾಜಕೀಯ ಪಕ್ಷಗಳನ್ನು ಬೆಂಬಲಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಏಕೆಂದರೆ, ಇಂಜಿನಿಯರ್ ರಶೀದ್ ಅವರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಾಗ ಈ ಗಾಳಿಸುದ್ದಿಯ ಗ್ರಹಿಕೆಯನ್ನು ಮತ್ತಷ್ಟು ಬಲಪಡಿಸಿತು.

ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಮೆಹಬೂಬಾ ಮುಫ್ತಿ ಅವರ ಪಿಡಿಪಿಗೆ ಬಿಜೆಪಿಯ ಆಪ್ತತೆಯ ಕುರಿತ ಊಹಾಪೋಹಗಳು ಕೂಡ ಘಾಸಿಗೊಳಿಸಿವೆ. ಮುಫ್ತಿ ಅವರ ಪುತ್ರಿ ಇಲ್ತಿಜಾ ಕೂಡ ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.

2018 ರಲ್ಲಿ ಮೈತ್ರಿ ಕುಸಿಯುವವರೆಗೂ ಮೆಹಬೂಬಾ ಮುಫ್ತಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರವನ್ನು ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಒಂದು ವರ್ಷದ ನಂತರ ತೆಗೆದುಹಾಕಲಾಯಿತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರಾಂತ್ಯಗಳನ್ನಾಗಿ ರಾಜ್ಯವನ್ನು ಎರಡು ಒಕ್ಕೂಟಗಳಾಗಿ ವಿಂಗಡಿಸಲಾಯಿತು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...