Homeಮುಖಪುಟಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

- Advertisement -
- Advertisement -

ವಿಶೇಷ ಸ್ಥಾನಮಾನ ರದ್ಧತಿಯ ಬಳಿಕ ತನ್ನ ಮೊದಲ ವಿಧಾನಸಭೆ ಚುನಾವಣೆಯನ್ನು ನೋಡುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಮುಂದಿನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಆದರೆ, ಗೆಲುವಿನ ಪ್ರಮಾಣವು ಸಣ್ಣ ಪಕ್ಷಗಳನ್ನು ಮೀರಿಸಿದೆ.

ಈ ವರ್ಷದ ಚುನಾವಣೆಯಲ್ಲಿ ಜಮಾತ್-ಎ-ಇಸ್ಲಾಮಿ ಚುನಾವಣಾ ಪ್ರಕ್ರಿಯೆಯಲ್ಲಿ ದಶಕಗಳ ನಂತರ ಮರುಪ್ರವೇಶವನ್ನು ಕಂಡಿತು. ಈ ಚುನಾವಣೆಯಲ್ಲಿ ಅದರ ಅಭ್ಯರ್ಥಿಗಳು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದರ ಮೇಲೆ ಎಲ್ಲರ ಕಣ್ಣುಗಳಿದ್ದವು. ಲೋಕಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷವು ಜಮಾತ್‌ನೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಕುತೂಹಲ ಮತ್ತಷ್ಟು ಹೆಚ್ಚಾಯಿತು.

ನಾಮಪತ್ರ ಸಲ್ಲಿಕೆ ವೇಳೆ ಜಮಾತ್ ಬೆಂಬಲಿತ 10 ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಆದರೆ, ಕೆಲವರು ಕಣದಿಂದ ಹಿಂದೆ ಸರಿದಿದ್ದರು. ಎಲ್ಲ ಜಮಾತ್ ಬೆಂಬಲಿತ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದು ಫಲಿತಾಂಶ ತೋರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಗೆಲುವಿನ ಹೊರತಾಗಿಯೂ, ಇಂಜಿನಿಯರ್ ರಶೀದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ. ಅವರ ಪಕ್ಷದ ಬೆಂಬಲಿತ ಅಭ್ಯರ್ಥಿ, ಅವರ ಸಹೋದರ ಖುರ್ಷೀದ್ ಅಹ್ಮದ್ ಶೇಖ್ ಮುನ್ನಡೆ ಸಾಧಿಸಿದ್ದರು.

ಕಳಪೆ ಪ್ರದರ್ಶನ ಕೊಟ್ಟ ಗುಲಾಂ ನಬಿ ಆಜಾದ್ ಪಕ್ಷದ

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ 2022 ರಲ್ಲಿ ಸ್ಥಾಪನೆಯಾದ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಆಜಾದ್ ಪಕ್ಷವು ಸಹ ಕಳಪೆ ಪ್ರದರ್ಶನ ನೀಡಿದೆ. ಸ್ಪರ್ಧಿಸಿದ ಎಲ್ಲ ಸ್ಥಾನಗಳಲ್ಲಿ ಹಿಂದುಳಿದಿದೆ. ತನ್ನ ಚುನಾವಣಾ ಚೊಚ್ಚಲವಾದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದ ಎಲ್ಲ ಮೂರು ಕ್ಷೇತ್ರಗಳನ್ನು ಕಳೆದುಕೊಂಡ ನಂತರ ಪಕ್ಷವು ಈಗಾಗಲೇ ಅಸ್ತವ್ಯಸ್ತವಾಗಿದೆ. ಲೋಕಸಭೆ ಸೋಲಿನ ಬಳಿಕ ಅದರ ಅನೇಕ ನಾಯಕರು ಪಕ್ಷ ತ್ಯಜಿಸಿದ್ದರು.

ಈ ಎಲ್ಲ ವೈಫಲ್ಯಗಳಲ್ಲಿನ ಸಾಮಾನ್ಯ ವಿಷಯವೆಂದರೆ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿಯು ಈ ರಾಜಕೀಯ ಪಕ್ಷಗಳನ್ನು ಬೆಂಬಲಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಏಕೆಂದರೆ, ಇಂಜಿನಿಯರ್ ರಶೀದ್ ಅವರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಾಗ ಈ ಗಾಳಿಸುದ್ದಿಯ ಗ್ರಹಿಕೆಯನ್ನು ಮತ್ತಷ್ಟು ಬಲಪಡಿಸಿತು.

ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಮೆಹಬೂಬಾ ಮುಫ್ತಿ ಅವರ ಪಿಡಿಪಿಗೆ ಬಿಜೆಪಿಯ ಆಪ್ತತೆಯ ಕುರಿತ ಊಹಾಪೋಹಗಳು ಕೂಡ ಘಾಸಿಗೊಳಿಸಿವೆ. ಮುಫ್ತಿ ಅವರ ಪುತ್ರಿ ಇಲ್ತಿಜಾ ಕೂಡ ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.

2018 ರಲ್ಲಿ ಮೈತ್ರಿ ಕುಸಿಯುವವರೆಗೂ ಮೆಹಬೂಬಾ ಮುಫ್ತಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರವನ್ನು ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಒಂದು ವರ್ಷದ ನಂತರ ತೆಗೆದುಹಾಕಲಾಯಿತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರಾಂತ್ಯಗಳನ್ನಾಗಿ ರಾಜ್ಯವನ್ನು ಎರಡು ಒಕ್ಕೂಟಗಳಾಗಿ ವಿಂಗಡಿಸಲಾಯಿತು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...