Homeಮುಖಪುಟಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಭಿನ್ನಮತೀಯ ಪತ್ರವನ್ನು ಬೆಂಬಲಿಸಿದ್ದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಗುರುತರವಾದ ಬೆಳವಣಿಗೆಗಳಾಗಬೇಕೆಂದು ಒತ್ತಾಯಿಸಿ ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ನಸೀಬ್ ಪಠಾಣ್ ಆಗ್ರಹಿಸಿದ್ದಾರೆ.

ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಪಠಾಣ್, “ನೀವು (ಗುಲಾಂ ನಬಿ) ಮೊದಲ ಬಾರಿ ಚುನಾವಣೆಯಲ್ಲಿ ಸ್ವರ್ಧಿಸಿದಾಗ ನಿಮಗೆ ಕನಿಷ್ಠ 320 ಮತಗಳಷ್ಟೆ ದೊರಕಿದ್ದವೆಂದು ನಿಮಗೆ ಗೊತ್ತು. ನಂತರ ನೀವು ಎಲ್ಲಾ ಕಡೆಗೂ ನಾಮಕರಣಗೊಂಡು ಹೋಗಿದ್ದಿರಿ. ಪಕ್ಷದ ಬಗ್ಗೆ ಈ ರೀತಿ ಮಾತನಾಡುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಬಯಸಿದ್ದರು.

“ಈ ಪತ್ರದಿಂದ ನಮಗೆ ನೋವಾಗಿದೆ, ಇದು ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯಲ್ಲಿ ಹೇಳಿದ ನಂತರವೂ, ಗುಲಾಂ ನಬಿ ಅವರು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ನಸೀಬ್ ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಾರ್ದಿಕ್ ಪಟೇಲ್

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ, ಶಶಿ ತರೂರ್ ಸೇರಿದಂತೆ ಹಲವರು ಈ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದರು.

ಈ ಪತ್ರದ ಕುರಿತು ಪರ-ವಿರೋಧದ ಚರ್ಚೆಗಳು ದೇಶದಾದ್ಯಂತ ಪ್ರಾರಂಭವಾಗಿದ್ದು, ಪಕ್ಷದೊಳಗಡೆಯೇ ಹಲವರಲ್ಲಿ ಭಿನ್ನಮತವೂ ಏರ್ಪಟ್ಟಿದೆ. ಕೆಲವರು ಪತ್ರ ಬರೆದವರ ಪರವಿದ್ದರೆ, ಮತ್ತೆ ಕೆಲವರು ಪತ್ರ ಬರೆದಿರುವವರನ್ನು ವಿರೋಧಿಸುತ್ತಿದ್ದಾರೆ.

ಭಿನ್ನಮತೀಯ ಪತ್ರ ಬರೆದ ನಾಯಕರು ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮನಮೋಹನ್ ಸಿಂಗ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆಗಳ ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಡಿಲೀಟ್ ಮಾಡಿದ್ದರು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...