Homeಮುಖಪುಟಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಭಿನ್ನಮತೀಯ ಪತ್ರವನ್ನು ಬೆಂಬಲಿಸಿದ್ದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಗುರುತರವಾದ ಬೆಳವಣಿಗೆಗಳಾಗಬೇಕೆಂದು ಒತ್ತಾಯಿಸಿ ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ನಸೀಬ್ ಪಠಾಣ್ ಆಗ್ರಹಿಸಿದ್ದಾರೆ.

ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಪಠಾಣ್, “ನೀವು (ಗುಲಾಂ ನಬಿ) ಮೊದಲ ಬಾರಿ ಚುನಾವಣೆಯಲ್ಲಿ ಸ್ವರ್ಧಿಸಿದಾಗ ನಿಮಗೆ ಕನಿಷ್ಠ 320 ಮತಗಳಷ್ಟೆ ದೊರಕಿದ್ದವೆಂದು ನಿಮಗೆ ಗೊತ್ತು. ನಂತರ ನೀವು ಎಲ್ಲಾ ಕಡೆಗೂ ನಾಮಕರಣಗೊಂಡು ಹೋಗಿದ್ದಿರಿ. ಪಕ್ಷದ ಬಗ್ಗೆ ಈ ರೀತಿ ಮಾತನಾಡುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಬಯಸಿದ್ದರು.

“ಈ ಪತ್ರದಿಂದ ನಮಗೆ ನೋವಾಗಿದೆ, ಇದು ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯಲ್ಲಿ ಹೇಳಿದ ನಂತರವೂ, ಗುಲಾಂ ನಬಿ ಅವರು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ನಸೀಬ್ ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಾರ್ದಿಕ್ ಪಟೇಲ್

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ, ಶಶಿ ತರೂರ್ ಸೇರಿದಂತೆ ಹಲವರು ಈ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದರು.

ಈ ಪತ್ರದ ಕುರಿತು ಪರ-ವಿರೋಧದ ಚರ್ಚೆಗಳು ದೇಶದಾದ್ಯಂತ ಪ್ರಾರಂಭವಾಗಿದ್ದು, ಪಕ್ಷದೊಳಗಡೆಯೇ ಹಲವರಲ್ಲಿ ಭಿನ್ನಮತವೂ ಏರ್ಪಟ್ಟಿದೆ. ಕೆಲವರು ಪತ್ರ ಬರೆದವರ ಪರವಿದ್ದರೆ, ಮತ್ತೆ ಕೆಲವರು ಪತ್ರ ಬರೆದಿರುವವರನ್ನು ವಿರೋಧಿಸುತ್ತಿದ್ದಾರೆ.

ಭಿನ್ನಮತೀಯ ಪತ್ರ ಬರೆದ ನಾಯಕರು ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮನಮೋಹನ್ ಸಿಂಗ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆಗಳ ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಡಿಲೀಟ್ ಮಾಡಿದ್ದರು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...