Homeಮುಖಪುಟಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಗುಲಾಂ ನಬಿ ಆಜಾದ್‌ರನ್ನು ಪಕ್ಷದಿಂದ ಉಚ್ಚಾಟಿಸಿ: ಕಾಂಗ್ರೆಸ್ ನಾಯಕ ನಸೀಬ್ ಪಠಾಣ್

ಭಿನ್ನಮತೀಯ ಪತ್ರವನ್ನು ಬೆಂಬಲಿಸಿದ್ದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಗುರುತರವಾದ ಬೆಳವಣಿಗೆಗಳಾಗಬೇಕೆಂದು ಒತ್ತಾಯಿಸಿ ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ನಸೀಬ್ ಪಠಾಣ್ ಆಗ್ರಹಿಸಿದ್ದಾರೆ.

ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಪಠಾಣ್, “ನೀವು (ಗುಲಾಂ ನಬಿ) ಮೊದಲ ಬಾರಿ ಚುನಾವಣೆಯಲ್ಲಿ ಸ್ವರ್ಧಿಸಿದಾಗ ನಿಮಗೆ ಕನಿಷ್ಠ 320 ಮತಗಳಷ್ಟೆ ದೊರಕಿದ್ದವೆಂದು ನಿಮಗೆ ಗೊತ್ತು. ನಂತರ ನೀವು ಎಲ್ಲಾ ಕಡೆಗೂ ನಾಮಕರಣಗೊಂಡು ಹೋಗಿದ್ದಿರಿ. ಪಕ್ಷದ ಬಗ್ಗೆ ಈ ರೀತಿ ಮಾತನಾಡುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಬಯಸಿದ್ದರು.

“ಈ ಪತ್ರದಿಂದ ನಮಗೆ ನೋವಾಗಿದೆ, ಇದು ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯಲ್ಲಿ ಹೇಳಿದ ನಂತರವೂ, ಗುಲಾಂ ನಬಿ ಅವರು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ನಸೀಬ್ ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಾರ್ದಿಕ್ ಪಟೇಲ್

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ, ಶಶಿ ತರೂರ್ ಸೇರಿದಂತೆ ಹಲವರು ಈ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದರು.

ಈ ಪತ್ರದ ಕುರಿತು ಪರ-ವಿರೋಧದ ಚರ್ಚೆಗಳು ದೇಶದಾದ್ಯಂತ ಪ್ರಾರಂಭವಾಗಿದ್ದು, ಪಕ್ಷದೊಳಗಡೆಯೇ ಹಲವರಲ್ಲಿ ಭಿನ್ನಮತವೂ ಏರ್ಪಟ್ಟಿದೆ. ಕೆಲವರು ಪತ್ರ ಬರೆದವರ ಪರವಿದ್ದರೆ, ಮತ್ತೆ ಕೆಲವರು ಪತ್ರ ಬರೆದಿರುವವರನ್ನು ವಿರೋಧಿಸುತ್ತಿದ್ದಾರೆ.

ಭಿನ್ನಮತೀಯ ಪತ್ರ ಬರೆದ ನಾಯಕರು ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮನಮೋಹನ್ ಸಿಂಗ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಜಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದರು.

ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆಗಳ ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಡಿಲೀಟ್ ಮಾಡಿದ್ದರು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...