Homeಮುಖಪುಟಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10...

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ 10 ವರ್ಷ ಶಿಕ್ಷೆಗೆ ಒಳಗಾಗಿದ್ದಾನೆ.

ಅವನ ಸಹೋದರ ಮತ್ತು ಸಹ-ಆರೋಪಿ ಅತುಲ್ ಸೆಂಗಾರ್ ಅವರಿಗೆ ಇದೇ ರೀತಿಯ ಶಿಕ್ಷೆ ನೀಡಲಾಗಿದೆ. ಉನ್ನಾವ್ ಅತ್ಯಾಚಾರದ ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

“ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಳು. ಅವಳು ತನ್ನ ಮನೆಗೆ ಮರಳಲು ಸಾಧ್ಯವಿಲ್ಲ. ಕುಟುಂಬದಲ್ಲಿ ನಾಲ್ಕು ಮಕ್ಕಳು ಇದ್ದಾರೆ … ಅವರಲ್ಲಿ ಮೂವರು ಹುಡುಗಿಯರು … ನಾಲ್ವರೂ ಅಪ್ರಾಪ್ತ ವಯಸ್ಕರು” ಎಂದು ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ದೆಹಲಿಯಲ್ಲಿ ತೀರ್ಪು ನೀಡುತ್ತಾ ಹೇಳಿದ್ದಾರೆ.

‘ಕಾನೂನಿನ ನಿಯಮವನ್ನು ಮುರಿಯಲಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಸೆಂಗಾರ್ ಸಾರ್ವಜನಿಕ ಕಾರ್ಯಕರ್ತರಾಗಿದ್ದರು ಮತ್ತು ಕಾನೂನಿನ ನಿಯಮವನ್ನು ಉಳಿಸಿಕೊಳ್ಳಬೇಕಾಗಿತ್ತು. ಅಪರಾಧ ಎಸಗಿದ ರೀತಿಗೆ ಅವರನ್ನು ಕ್ಷಮಿಸಲು ಬರುವುದಿಲ್ಲ”ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ. ಪೊಲೀಸರು ಜಾಮೀನಿನ ಮೇಲೆ ಹೊರಗಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಕುಲದೀಪ್ ಸೆಂಗಾರ್ ಮತ್ತು ಇತರರ ವಿರುದ್ಧ ನ್ಯಾಯಾಲಯವು ಆರೋಪಗಳನ್ನು ಹೊರಿಸಿತ್ತು. ಆತನ ಬಳಿ ಪೊಲೀಸರೇ ದೇಶ ನಿರ್ಮಿತ ಪಿಸ್ತೂಲ್ ಇಟ್ಟಿದ್ದಾರೆ, ಅಲ್ಲದೇ ಆತನನ್ನು ಪೊಲೀಸ್ ಠಾಣೆಯಲ್ಲಿ ಥಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ “ತಂದೆಯನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯಲು ಇದು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ಅವರು ಹೇಳಿದರು, ಅವರ ದೇಹವು ಅನೇಕ ತೀವ್ರವಾದ ಗಾಯಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಆ ಸಮಯದಲ್ಲಿ ಕುಲದೀಪ್ ಸೆಂಗಾರ್ ದೆಹಲಿಯಲ್ಲಿದ್ದರೂ, ಅವರು ಉನ್ನಾವ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು ಎಂದು ನ್ಯಾಯಾಧೀಶರು ಹೇಳಿದ್ದಾರೆ. ತಂದೆಯನ್ನು ರಸ್ತೆ ಬದಿಯಿಂದ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದು ಥಳಿಸಲಾಯಿತು.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾಗಿದ್ದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....