Homeಮುಖಪುಟಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10...

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ 10 ವರ್ಷ ಶಿಕ್ಷೆಗೆ ಒಳಗಾಗಿದ್ದಾನೆ.

ಅವನ ಸಹೋದರ ಮತ್ತು ಸಹ-ಆರೋಪಿ ಅತುಲ್ ಸೆಂಗಾರ್ ಅವರಿಗೆ ಇದೇ ರೀತಿಯ ಶಿಕ್ಷೆ ನೀಡಲಾಗಿದೆ. ಉನ್ನಾವ್ ಅತ್ಯಾಚಾರದ ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

“ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಳು. ಅವಳು ತನ್ನ ಮನೆಗೆ ಮರಳಲು ಸಾಧ್ಯವಿಲ್ಲ. ಕುಟುಂಬದಲ್ಲಿ ನಾಲ್ಕು ಮಕ್ಕಳು ಇದ್ದಾರೆ … ಅವರಲ್ಲಿ ಮೂವರು ಹುಡುಗಿಯರು … ನಾಲ್ವರೂ ಅಪ್ರಾಪ್ತ ವಯಸ್ಕರು” ಎಂದು ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ದೆಹಲಿಯಲ್ಲಿ ತೀರ್ಪು ನೀಡುತ್ತಾ ಹೇಳಿದ್ದಾರೆ.

‘ಕಾನೂನಿನ ನಿಯಮವನ್ನು ಮುರಿಯಲಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಸೆಂಗಾರ್ ಸಾರ್ವಜನಿಕ ಕಾರ್ಯಕರ್ತರಾಗಿದ್ದರು ಮತ್ತು ಕಾನೂನಿನ ನಿಯಮವನ್ನು ಉಳಿಸಿಕೊಳ್ಳಬೇಕಾಗಿತ್ತು. ಅಪರಾಧ ಎಸಗಿದ ರೀತಿಗೆ ಅವರನ್ನು ಕ್ಷಮಿಸಲು ಬರುವುದಿಲ್ಲ”ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ. ಪೊಲೀಸರು ಜಾಮೀನಿನ ಮೇಲೆ ಹೊರಗಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಕುಲದೀಪ್ ಸೆಂಗಾರ್ ಮತ್ತು ಇತರರ ವಿರುದ್ಧ ನ್ಯಾಯಾಲಯವು ಆರೋಪಗಳನ್ನು ಹೊರಿಸಿತ್ತು. ಆತನ ಬಳಿ ಪೊಲೀಸರೇ ದೇಶ ನಿರ್ಮಿತ ಪಿಸ್ತೂಲ್ ಇಟ್ಟಿದ್ದಾರೆ, ಅಲ್ಲದೇ ಆತನನ್ನು ಪೊಲೀಸ್ ಠಾಣೆಯಲ್ಲಿ ಥಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ “ತಂದೆಯನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯಲು ಇದು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ಅವರು ಹೇಳಿದರು, ಅವರ ದೇಹವು ಅನೇಕ ತೀವ್ರವಾದ ಗಾಯಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಆ ಸಮಯದಲ್ಲಿ ಕುಲದೀಪ್ ಸೆಂಗಾರ್ ದೆಹಲಿಯಲ್ಲಿದ್ದರೂ, ಅವರು ಉನ್ನಾವ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು ಎಂದು ನ್ಯಾಯಾಧೀಶರು ಹೇಳಿದ್ದಾರೆ. ತಂದೆಯನ್ನು ರಸ್ತೆ ಬದಿಯಿಂದ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದು ಥಳಿಸಲಾಯಿತು.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾಗಿದ್ದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...