Homeಮುಖಪುಟಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10...

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ 10 ವರ್ಷ ಶಿಕ್ಷೆಗೆ ಒಳಗಾಗಿದ್ದಾನೆ.

ಅವನ ಸಹೋದರ ಮತ್ತು ಸಹ-ಆರೋಪಿ ಅತುಲ್ ಸೆಂಗಾರ್ ಅವರಿಗೆ ಇದೇ ರೀತಿಯ ಶಿಕ್ಷೆ ನೀಡಲಾಗಿದೆ. ಉನ್ನಾವ್ ಅತ್ಯಾಚಾರದ ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

“ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಳು. ಅವಳು ತನ್ನ ಮನೆಗೆ ಮರಳಲು ಸಾಧ್ಯವಿಲ್ಲ. ಕುಟುಂಬದಲ್ಲಿ ನಾಲ್ಕು ಮಕ್ಕಳು ಇದ್ದಾರೆ … ಅವರಲ್ಲಿ ಮೂವರು ಹುಡುಗಿಯರು … ನಾಲ್ವರೂ ಅಪ್ರಾಪ್ತ ವಯಸ್ಕರು” ಎಂದು ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ದೆಹಲಿಯಲ್ಲಿ ತೀರ್ಪು ನೀಡುತ್ತಾ ಹೇಳಿದ್ದಾರೆ.

‘ಕಾನೂನಿನ ನಿಯಮವನ್ನು ಮುರಿಯಲಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಸೆಂಗಾರ್ ಸಾರ್ವಜನಿಕ ಕಾರ್ಯಕರ್ತರಾಗಿದ್ದರು ಮತ್ತು ಕಾನೂನಿನ ನಿಯಮವನ್ನು ಉಳಿಸಿಕೊಳ್ಳಬೇಕಾಗಿತ್ತು. ಅಪರಾಧ ಎಸಗಿದ ರೀತಿಗೆ ಅವರನ್ನು ಕ್ಷಮಿಸಲು ಬರುವುದಿಲ್ಲ”ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ. ಪೊಲೀಸರು ಜಾಮೀನಿನ ಮೇಲೆ ಹೊರಗಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಕುಲದೀಪ್ ಸೆಂಗಾರ್ ಮತ್ತು ಇತರರ ವಿರುದ್ಧ ನ್ಯಾಯಾಲಯವು ಆರೋಪಗಳನ್ನು ಹೊರಿಸಿತ್ತು. ಆತನ ಬಳಿ ಪೊಲೀಸರೇ ದೇಶ ನಿರ್ಮಿತ ಪಿಸ್ತೂಲ್ ಇಟ್ಟಿದ್ದಾರೆ, ಅಲ್ಲದೇ ಆತನನ್ನು ಪೊಲೀಸ್ ಠಾಣೆಯಲ್ಲಿ ಥಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ “ತಂದೆಯನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯಲು ಇದು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ಅವರು ಹೇಳಿದರು, ಅವರ ದೇಹವು ಅನೇಕ ತೀವ್ರವಾದ ಗಾಯಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಆ ಸಮಯದಲ್ಲಿ ಕುಲದೀಪ್ ಸೆಂಗಾರ್ ದೆಹಲಿಯಲ್ಲಿದ್ದರೂ, ಅವರು ಉನ್ನಾವ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು ಎಂದು ನ್ಯಾಯಾಧೀಶರು ಹೇಳಿದ್ದಾರೆ. ತಂದೆಯನ್ನು ರಸ್ತೆ ಬದಿಯಿಂದ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದು ಥಳಿಸಲಾಯಿತು.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾಗಿದ್ದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...