Homeಮುಖಪುಟಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10...

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ 10 ವರ್ಷ ಶಿಕ್ಷೆಗೆ ಒಳಗಾಗಿದ್ದಾನೆ.

ಅವನ ಸಹೋದರ ಮತ್ತು ಸಹ-ಆರೋಪಿ ಅತುಲ್ ಸೆಂಗಾರ್ ಅವರಿಗೆ ಇದೇ ರೀತಿಯ ಶಿಕ್ಷೆ ನೀಡಲಾಗಿದೆ. ಉನ್ನಾವ್ ಅತ್ಯಾಚಾರದ ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

“ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಳು. ಅವಳು ತನ್ನ ಮನೆಗೆ ಮರಳಲು ಸಾಧ್ಯವಿಲ್ಲ. ಕುಟುಂಬದಲ್ಲಿ ನಾಲ್ಕು ಮಕ್ಕಳು ಇದ್ದಾರೆ … ಅವರಲ್ಲಿ ಮೂವರು ಹುಡುಗಿಯರು … ನಾಲ್ವರೂ ಅಪ್ರಾಪ್ತ ವಯಸ್ಕರು” ಎಂದು ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ದೆಹಲಿಯಲ್ಲಿ ತೀರ್ಪು ನೀಡುತ್ತಾ ಹೇಳಿದ್ದಾರೆ.

‘ಕಾನೂನಿನ ನಿಯಮವನ್ನು ಮುರಿಯಲಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಸೆಂಗಾರ್ ಸಾರ್ವಜನಿಕ ಕಾರ್ಯಕರ್ತರಾಗಿದ್ದರು ಮತ್ತು ಕಾನೂನಿನ ನಿಯಮವನ್ನು ಉಳಿಸಿಕೊಳ್ಳಬೇಕಾಗಿತ್ತು. ಅಪರಾಧ ಎಸಗಿದ ರೀತಿಗೆ ಅವರನ್ನು ಕ್ಷಮಿಸಲು ಬರುವುದಿಲ್ಲ”ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ. ಪೊಲೀಸರು ಜಾಮೀನಿನ ಮೇಲೆ ಹೊರಗಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಕುಲದೀಪ್ ಸೆಂಗಾರ್ ಮತ್ತು ಇತರರ ವಿರುದ್ಧ ನ್ಯಾಯಾಲಯವು ಆರೋಪಗಳನ್ನು ಹೊರಿಸಿತ್ತು. ಆತನ ಬಳಿ ಪೊಲೀಸರೇ ದೇಶ ನಿರ್ಮಿತ ಪಿಸ್ತೂಲ್ ಇಟ್ಟಿದ್ದಾರೆ, ಅಲ್ಲದೇ ಆತನನ್ನು ಪೊಲೀಸ್ ಠಾಣೆಯಲ್ಲಿ ಥಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ “ತಂದೆಯನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯಲು ಇದು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ಅವರು ಹೇಳಿದರು, ಅವರ ದೇಹವು ಅನೇಕ ತೀವ್ರವಾದ ಗಾಯಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಆ ಸಮಯದಲ್ಲಿ ಕುಲದೀಪ್ ಸೆಂಗಾರ್ ದೆಹಲಿಯಲ್ಲಿದ್ದರೂ, ಅವರು ಉನ್ನಾವ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು ಎಂದು ನ್ಯಾಯಾಧೀಶರು ಹೇಳಿದ್ದಾರೆ. ತಂದೆಯನ್ನು ರಸ್ತೆ ಬದಿಯಿಂದ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದು ಥಳಿಸಲಾಯಿತು.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾಗಿದ್ದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...