Homeಮುಖಪುಟಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10...

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ 10 ವರ್ಷ ಶಿಕ್ಷೆಗೆ ಒಳಗಾಗಿದ್ದಾನೆ.

ಅವನ ಸಹೋದರ ಮತ್ತು ಸಹ-ಆರೋಪಿ ಅತುಲ್ ಸೆಂಗಾರ್ ಅವರಿಗೆ ಇದೇ ರೀತಿಯ ಶಿಕ್ಷೆ ನೀಡಲಾಗಿದೆ. ಉನ್ನಾವ್ ಅತ್ಯಾಚಾರದ ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

“ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಳು. ಅವಳು ತನ್ನ ಮನೆಗೆ ಮರಳಲು ಸಾಧ್ಯವಿಲ್ಲ. ಕುಟುಂಬದಲ್ಲಿ ನಾಲ್ಕು ಮಕ್ಕಳು ಇದ್ದಾರೆ … ಅವರಲ್ಲಿ ಮೂವರು ಹುಡುಗಿಯರು … ನಾಲ್ವರೂ ಅಪ್ರಾಪ್ತ ವಯಸ್ಕರು” ಎಂದು ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ದೆಹಲಿಯಲ್ಲಿ ತೀರ್ಪು ನೀಡುತ್ತಾ ಹೇಳಿದ್ದಾರೆ.

‘ಕಾನೂನಿನ ನಿಯಮವನ್ನು ಮುರಿಯಲಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಸೆಂಗಾರ್ ಸಾರ್ವಜನಿಕ ಕಾರ್ಯಕರ್ತರಾಗಿದ್ದರು ಮತ್ತು ಕಾನೂನಿನ ನಿಯಮವನ್ನು ಉಳಿಸಿಕೊಳ್ಳಬೇಕಾಗಿತ್ತು. ಅಪರಾಧ ಎಸಗಿದ ರೀತಿಗೆ ಅವರನ್ನು ಕ್ಷಮಿಸಲು ಬರುವುದಿಲ್ಲ”ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ತಂದೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಇಬ್ಬರು ಪೊಲೀಸರಿಗೆ ನ್ಯಾಯಾಲಯ ಇದೇ ಶಿಕ್ಷೆಯನ್ನು ನೀಡಿದೆ. ಪೊಲೀಸರು ಜಾಮೀನಿನ ಮೇಲೆ ಹೊರಗಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಕುಲದೀಪ್ ಸೆಂಗಾರ್ ಮತ್ತು ಇತರರ ವಿರುದ್ಧ ನ್ಯಾಯಾಲಯವು ಆರೋಪಗಳನ್ನು ಹೊರಿಸಿತ್ತು. ಆತನ ಬಳಿ ಪೊಲೀಸರೇ ದೇಶ ನಿರ್ಮಿತ ಪಿಸ್ತೂಲ್ ಇಟ್ಟಿದ್ದಾರೆ, ಅಲ್ಲದೇ ಆತನನ್ನು ಪೊಲೀಸ್ ಠಾಣೆಯಲ್ಲಿ ಥಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ “ತಂದೆಯನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯಲು ಇದು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ಅವರು ಹೇಳಿದರು, ಅವರ ದೇಹವು ಅನೇಕ ತೀವ್ರವಾದ ಗಾಯಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಆ ಸಮಯದಲ್ಲಿ ಕುಲದೀಪ್ ಸೆಂಗಾರ್ ದೆಹಲಿಯಲ್ಲಿದ್ದರೂ, ಅವರು ಉನ್ನಾವ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದರು ಎಂದು ನ್ಯಾಯಾಧೀಶರು ಹೇಳಿದ್ದಾರೆ. ತಂದೆಯನ್ನು ರಸ್ತೆ ಬದಿಯಿಂದ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದು ಥಳಿಸಲಾಯಿತು.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾಗಿದ್ದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...