Homeಮುಖಪುಟತಜ್ಞರನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

- Advertisement -
- Advertisement -

ಎಬಿವಿಪಿ ನಡೆಸಿದ ಪ್ರತಿಭಟನೆಗಳ ಕಾರಣಕ್ಕೆ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ(IISER) ಗುರುವಾರ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಲು ಆಹ್ವಾನಿಸಲಾದ ಹಲವಾರು ತಜ್ಞರನ್ನು ಕೈಬಿಟ್ಟಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾರ್ಯಕ್ರಮದಲ್ಲಿ ಮಾತನಾಡಲು ಬರುವ ತಜ್ಞರು “ತುಕ್ಡೆ ತುಕ್ಡೆ ಗ್ಯಾಂಗ್‌ ಸದಸ್ಯರು” ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ಮಾಡಿತ್ತು. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಎಬಿವಿಪಿಯು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳ ನಾಯಕರು ತಮ್ಮ ವಿರೋಧಿಗಳು ಮತ್ತು ಭಿನ್ನಮತೀಯರನ್ನು “ತುಕ್ಡೆ ತುಕ್ಡೆ” ಗ್ಯಾಂಗ್ ಅಥವಾ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ಗುಂಪಿನ ಸದಸ್ಯರು ಎಂದು ಆಗಾಗ್ಗೆ ಆರೋಪಿಸುತ್ತಾರೆ.

ಪತ್ರಿಕಾ ಹೇಳಿಕೆಯಲ್ಲಿ, ಅಂಬೇಡ್ಕರ್ ಅವರ ವಾರ್ಷಿಕೋತ್ಸವವನ್ನು ಆಚರಿಸಲು ಸರಣಿ ಮಾತುಕತೆಗಳನ್ನು ಆಯೋಜಿಸಲಾಗಿದೆ ಎಂದು IISER ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ವಿದ್ಯಾರ್ಥಿ ನೇತೃತ್ವದ ಮುಕ್ತಿಪರ್ವ ಕಾರ್ಯಕ್ರಮದ ಭಾಗವಾಗಿ, ಸಾಮಾಜಿಕ ಸಮಾನತೆ, ಜಾತಿ ಮತ್ತು ಲಿಂಗ ಚಲನಶೀಲತೆ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಶಿಕ್ಷಣ ತಜ್ಞರಿಂದ ಸಂಸ್ಥೆಯಲ್ಲಿ ಸಂವಾದಗಳನ್ನು ಯೋಜಿಸಲಾಗಿತ್ತು” ಎಂದು ಸಂಸ್ಥೆ ಹೇಳಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ದೀಪಾಲಿ ಸಾಳ್ವೆ, ನಜೀಮಾ ಪರ್ವೀನ್ ಮತ್ತು ಸ್ಮಿತಾ ಎಂ ಪಾಟೀಲ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರನ್ನು ಜಾತಿ, ಅರ್ಥಶಾಸ್ತ್ರ ಮತ್ತು ಲಿಂಗ ಚಲನಶೀಲತೆಯ ಬಗ್ಗೆ ಮಾತನಾಡಲು ಆಹ್ವಾನಿಸಲಾಗಿತ್ತು ಎಂದು ಅದು ಹೇಳಿದೆ. “ಆದಾಗ್ಯೂ, ವಿವಾದವನ್ನು ತಪ್ಪಿಸಲು, ಈ ಸಮಯದಲ್ಲಿ ಯೋಜಿತ ಭಾಷಣಕಾರರನ್ನು ಕೈಬಿಡಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಸಂಸ್ಥೆ ಹೇಳಿದೆ.

ಸಂಸ್ಥೆಯು ನಿರ್ಧಾರ ತೆಗೆದುಕೊಳ್ಳುವ ಒಂದು ದಿನದ ಮೊದಲು, ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾಷಣಕಾರರ ವಿರುದ್ಧ ತಮ್ಮ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಸಂಸ್ಥೆಯ ನಿರ್ದೇಶಕ ಸುನಿಲ್ ಭಾಗವತ್ ಅವರನ್ನು ಭೇಟಿಯಾಗಿದ್ದ ಎಬಿವಿಪಿ ಸದಸ್ಯರು, ಮಾತನಾಡಲು ಆಹ್ವಾನಿಸಲಾದ “ಕಟ್ಟರ್‌ ಮಾವೋವಾದಿಗಳ” ಉಪಸ್ಥಿತಿಯನ್ನು ಆಕ್ಷೇಪಿಸುವುದಾಗಿ ಹೇಳಿದ್ದರು.

“ಅವರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡುವ ಸಾಧ್ಯತೆಯಿದೆ. ಜೊತೆಗೆ ಅವರು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಾರೆ. ಅಲ್ಲದೆ, ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಎಡಪಂಥೀಯರ ಸಿದ್ಧಾಂತವನ್ನು ವಿರೋಧಿಸಿದ್ದರು ಎಂದು ಅದು ಹೇಳಿಕೊಂಡಿದೆ.

“ಐಐಎಸ್‌ಇಆರ್ ಅವರ ಜಯಂತಿಯ ಸಂದರ್ಭದಲ್ಲಿ ‘ತುಕ್ಡೆ ತುಕ್ಡೆ ಗ್ಯಾಂಗ್’ ಜೊತೆಗೆ ಗುರುತಿಸಿಕೊಂಡ ಸದಸ್ಯರ ಉಪಸ್ಥಿತಿಗೆ ಅವಕಾಶ ನೀಡಿದ್ದು ಏಕೆ?. ಕಳೆದ ವರ್ಷ ಮುಕ್ತಿಪರ್ವದ ಸಂದರ್ಭದಲ್ಲಿ, ಭಾಷಣಕಾರರು ಜನರ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದರು.” ಎಂದು ಎಬಿವಿಪಿ ಕೇಳಿದೆ. ಕಾರ್ಯಕ್ರಮದ ಬಗ್ಗೆ ಪುಣೆ ಪೊಲೀಸರಿಗೆ ಕೂಡಾ ಎಬಿವಿಪಿ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...