Homeಮುಖಪುಟತಜ್ಞರನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

- Advertisement -
- Advertisement -

ಎಬಿವಿಪಿ ನಡೆಸಿದ ಪ್ರತಿಭಟನೆಗಳ ಕಾರಣಕ್ಕೆ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ(IISER) ಗುರುವಾರ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಲು ಆಹ್ವಾನಿಸಲಾದ ಹಲವಾರು ತಜ್ಞರನ್ನು ಕೈಬಿಟ್ಟಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾರ್ಯಕ್ರಮದಲ್ಲಿ ಮಾತನಾಡಲು ಬರುವ ತಜ್ಞರು “ತುಕ್ಡೆ ತುಕ್ಡೆ ಗ್ಯಾಂಗ್‌ ಸದಸ್ಯರು” ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ಮಾಡಿತ್ತು. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಎಬಿವಿಪಿಯು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳ ನಾಯಕರು ತಮ್ಮ ವಿರೋಧಿಗಳು ಮತ್ತು ಭಿನ್ನಮತೀಯರನ್ನು “ತುಕ್ಡೆ ತುಕ್ಡೆ” ಗ್ಯಾಂಗ್ ಅಥವಾ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ಗುಂಪಿನ ಸದಸ್ಯರು ಎಂದು ಆಗಾಗ್ಗೆ ಆರೋಪಿಸುತ್ತಾರೆ.

ಪತ್ರಿಕಾ ಹೇಳಿಕೆಯಲ್ಲಿ, ಅಂಬೇಡ್ಕರ್ ಅವರ ವಾರ್ಷಿಕೋತ್ಸವವನ್ನು ಆಚರಿಸಲು ಸರಣಿ ಮಾತುಕತೆಗಳನ್ನು ಆಯೋಜಿಸಲಾಗಿದೆ ಎಂದು IISER ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ವಿದ್ಯಾರ್ಥಿ ನೇತೃತ್ವದ ಮುಕ್ತಿಪರ್ವ ಕಾರ್ಯಕ್ರಮದ ಭಾಗವಾಗಿ, ಸಾಮಾಜಿಕ ಸಮಾನತೆ, ಜಾತಿ ಮತ್ತು ಲಿಂಗ ಚಲನಶೀಲತೆ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಶಿಕ್ಷಣ ತಜ್ಞರಿಂದ ಸಂಸ್ಥೆಯಲ್ಲಿ ಸಂವಾದಗಳನ್ನು ಯೋಜಿಸಲಾಗಿತ್ತು” ಎಂದು ಸಂಸ್ಥೆ ಹೇಳಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ದೀಪಾಲಿ ಸಾಳ್ವೆ, ನಜೀಮಾ ಪರ್ವೀನ್ ಮತ್ತು ಸ್ಮಿತಾ ಎಂ ಪಾಟೀಲ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರನ್ನು ಜಾತಿ, ಅರ್ಥಶಾಸ್ತ್ರ ಮತ್ತು ಲಿಂಗ ಚಲನಶೀಲತೆಯ ಬಗ್ಗೆ ಮಾತನಾಡಲು ಆಹ್ವಾನಿಸಲಾಗಿತ್ತು ಎಂದು ಅದು ಹೇಳಿದೆ. “ಆದಾಗ್ಯೂ, ವಿವಾದವನ್ನು ತಪ್ಪಿಸಲು, ಈ ಸಮಯದಲ್ಲಿ ಯೋಜಿತ ಭಾಷಣಕಾರರನ್ನು ಕೈಬಿಡಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಸಂಸ್ಥೆ ಹೇಳಿದೆ.

ಸಂಸ್ಥೆಯು ನಿರ್ಧಾರ ತೆಗೆದುಕೊಳ್ಳುವ ಒಂದು ದಿನದ ಮೊದಲು, ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾಷಣಕಾರರ ವಿರುದ್ಧ ತಮ್ಮ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಸಂಸ್ಥೆಯ ನಿರ್ದೇಶಕ ಸುನಿಲ್ ಭಾಗವತ್ ಅವರನ್ನು ಭೇಟಿಯಾಗಿದ್ದ ಎಬಿವಿಪಿ ಸದಸ್ಯರು, ಮಾತನಾಡಲು ಆಹ್ವಾನಿಸಲಾದ “ಕಟ್ಟರ್‌ ಮಾವೋವಾದಿಗಳ” ಉಪಸ್ಥಿತಿಯನ್ನು ಆಕ್ಷೇಪಿಸುವುದಾಗಿ ಹೇಳಿದ್ದರು.

“ಅವರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡುವ ಸಾಧ್ಯತೆಯಿದೆ. ಜೊತೆಗೆ ಅವರು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಾರೆ. ಅಲ್ಲದೆ, ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಎಡಪಂಥೀಯರ ಸಿದ್ಧಾಂತವನ್ನು ವಿರೋಧಿಸಿದ್ದರು ಎಂದು ಅದು ಹೇಳಿಕೊಂಡಿದೆ.

“ಐಐಎಸ್‌ಇಆರ್ ಅವರ ಜಯಂತಿಯ ಸಂದರ್ಭದಲ್ಲಿ ‘ತುಕ್ಡೆ ತುಕ್ಡೆ ಗ್ಯಾಂಗ್’ ಜೊತೆಗೆ ಗುರುತಿಸಿಕೊಂಡ ಸದಸ್ಯರ ಉಪಸ್ಥಿತಿಗೆ ಅವಕಾಶ ನೀಡಿದ್ದು ಏಕೆ?. ಕಳೆದ ವರ್ಷ ಮುಕ್ತಿಪರ್ವದ ಸಂದರ್ಭದಲ್ಲಿ, ಭಾಷಣಕಾರರು ಜನರ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದರು.” ಎಂದು ಎಬಿವಿಪಿ ಕೇಳಿದೆ. ಕಾರ್ಯಕ್ರಮದ ಬಗ್ಗೆ ಪುಣೆ ಪೊಲೀಸರಿಗೆ ಕೂಡಾ ಎಬಿವಿಪಿ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...