HomeಮುಖಪುಟExplained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

Explained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

- Advertisement -
- Advertisement -

ಯುಎಸ್‌ನ ವಾಷಿಂಗ್ಟನ್‌ ರಾಜ್ಯದಲ್ಲಿ ಸಂಭವಿಸಿದ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಆದೋನಿಯ 23 ವರ್ಷದ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಸಾವು ಪ್ರಕರಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಅಪಘಾತದಲ್ಲಿ ಜಾಹ್ನವಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಕಾರಣನಾದ ಪೊಲೀಸ್ ಅಧಿಕಾರಿಯ ವಿರುದ್ದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜನವರಿ 23,2023ರಂದು ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದ ಜಾಹ್ನವಿ ಕಂಡುಲಾ ಮೇಲೆ ಕೆವಿನ್‌ ಡೇವ್‌ ಎಂಬ ಪೊಲೀಸ್ ಅಧಿಕಾರಿ ವಾಹನ ಹರಿಸಿ ಸಾವಿಗೆ ಕಾರಣನಾಗಿದ್ದ. ತುರ್ತು ಕರೆಯೊಂದರ ಹಿನ್ನೆಲೆಯಲ್ಲಿ ಸ್ಥಳವೊಂದಕ್ಕೆ ತೆರಳಲು 120 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಕೆವಿನ್ ಡೇವ್ ಜಾಹ್ನವಿ ಮೇಲೆ ವಾಹನ ಹರಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಡೇವ್ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್‌ನ ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಅವರ ಕಚೇರಿ ಹೇಳಿದೆ.

“ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಜನವರಿ 2023ರಲ್ಲಿ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಮೇಲೆ ವಾಹನ ಹರಿಸಿ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಲಭ್ಯವಿರುವ ಎಲ್ಲಾ
ಸಾಕ್ಷ್ಯಗಳನ್ನು ಪರಿಶೀಲಿಸುವುದು ಕಿಂಗ್ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಕಚೇರಿಯ ಜವಾಬ್ದಾರಿಯಾಗಿದೆ. ನಾವು ಹಿರಿಯ ಉಪ ಪ್ರಾಸಿಕ್ಯೂಟಿಂಗ್ ವಕೀಲರು ಮತ್ತು ಇತರ ಅಧಿಕಾರಿಗಳ ಮೂಲಕ ಪ್ರಕರಣದ ತನಿಖೆ ನಡೆಸಿದ್ದೇವೆ. ಈ ವೇಳೆ ವಾಷಿಂಗ್ಟನ್ ಸ್ಟೇಟ್ ಕಾನೂನಿನಡಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಮಗೆ ಸಾಕಷ್ಟು ಸಾಕ್ಷ್ಯಗಳು ದೊರೆತಿಲ್ಲ” ಎಂದು ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಲೀಸಾ ಮ್ಯಾನಿಯನ್ ತಿಳಿಸಿದ್ದಾರೆ.

ಘಟನೆಯ ಬಾಡಿಕ್ಯಾಮ್‌ ಫೂಟೇಜ್‌ನಲ್ಲಿ ಸಿಯಾಟಲ್‌ ಪೊಲೀಸ್‌ ಇಲಾಖೆಯ ಅಧಿಕಾರಿ ಡೇನಿಯಲ್‌ ಆಡೆರರ್‌ ಈ ಅಪಘಾತವನ್ನು ಗೌಣವಾಗಿ ಪರಿಗಣಿಸಿದ್ದರಲ್ಲದೆ, ಕೆವಿನ್‌ ಡೇವ್‌ ಅವರು ತಪ್ಪು ಮಾಡಿದ್ದಾರೆಂಬ ವಾದವನ್ನು ಅಲ್ಲಗಳೆದಿದ್ದರು ಹಾಗೂ ಕ್ರಿಮಿನಲ್‌ ತನಿಖೆ ಅಗತ್ಯವಿಲ್ಲ ಎಂದಿದ್ದರು. ವಿದ್ಯಾರ್ಥಿನಿ ಸಾವನ್ನಪ್ಪಿರುವುದನ್ನು ಬೊಟ್ಟು ಮಾಡುತ್ತಾ ಡೇನಿಯರ್‌ ನಗುತ್ತಿರುವ ಬಾಡಿಕ್ಯಾಮ್‌ ವಿಡಿಯೋ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು.

ಪೋಲೀಸ್ ಅಧಿಕಾರಿಯ ವಿರುದ್ಧದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಯುಎಸ್ ನ್ಯಾಯಾಲಯದ ನಿರ್ಧಾರವನ್ನು ಬಿಆರ್‌ಎಸ್ ಪಕ್ಷದ ನಾಯಕ ಹಾಗೂ ತೆಲಂಗಾಣದ ಮಾಜಿ ಸಚಿವ ಕೆ.ಟಿ ರಾಮರಾವ್(ಕೆಟಿಆರ್) ಅವರು ‘ಅವಮಾನಕರ’ ಎಂದಿದ್ದಾರೆ. ಯುಎಸ್ ನ್ಯಾಯಾಲಯದ ತೀರ್ಪು ‘ಸ್ವೀಕಾರ್ಹವಲ್ಲ’ ಎಂದಿರುವ ಅವರು, ಪ್ರಕರಣದ ಸ್ವತಂತ್ರ ತನಿಖೆಗೆ ಯುಎಸ್ ಅನ್ನು ಒತ್ತಾಯಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರಕರಣದ ಕುರಿತು ಯುಎಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಭಾರತದ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರಿಗೆ ಒತ್ತಾಯಿಸಿರುವ ಕೆಟಿಆರ್, “ಉನ್ನತ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ ಯುವತಿಯ ಜೀವವನ್ನು ಬಲಿ ಪಡೆದಿರುವುದು ದುರಂತವಾದರೆ, ಆಕೆಗೆ ನ್ಯಾಯ ಸಿಗದಿರುವುದು ಅದಕ್ಕಿಂತ ದೊಡ್ಡ ದುರಂತ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...