HomeಮುಖಪುಟExplained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

Explained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

- Advertisement -
- Advertisement -

ಯುಎಸ್‌ನ ವಾಷಿಂಗ್ಟನ್‌ ರಾಜ್ಯದಲ್ಲಿ ಸಂಭವಿಸಿದ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಆದೋನಿಯ 23 ವರ್ಷದ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಸಾವು ಪ್ರಕರಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಅಪಘಾತದಲ್ಲಿ ಜಾಹ್ನವಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಕಾರಣನಾದ ಪೊಲೀಸ್ ಅಧಿಕಾರಿಯ ವಿರುದ್ದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜನವರಿ 23,2023ರಂದು ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದ ಜಾಹ್ನವಿ ಕಂಡುಲಾ ಮೇಲೆ ಕೆವಿನ್‌ ಡೇವ್‌ ಎಂಬ ಪೊಲೀಸ್ ಅಧಿಕಾರಿ ವಾಹನ ಹರಿಸಿ ಸಾವಿಗೆ ಕಾರಣನಾಗಿದ್ದ. ತುರ್ತು ಕರೆಯೊಂದರ ಹಿನ್ನೆಲೆಯಲ್ಲಿ ಸ್ಥಳವೊಂದಕ್ಕೆ ತೆರಳಲು 120 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಕೆವಿನ್ ಡೇವ್ ಜಾಹ್ನವಿ ಮೇಲೆ ವಾಹನ ಹರಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಡೇವ್ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್‌ನ ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಅವರ ಕಚೇರಿ ಹೇಳಿದೆ.

“ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಜನವರಿ 2023ರಲ್ಲಿ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಮೇಲೆ ವಾಹನ ಹರಿಸಿ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಲಭ್ಯವಿರುವ ಎಲ್ಲಾ
ಸಾಕ್ಷ್ಯಗಳನ್ನು ಪರಿಶೀಲಿಸುವುದು ಕಿಂಗ್ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಕಚೇರಿಯ ಜವಾಬ್ದಾರಿಯಾಗಿದೆ. ನಾವು ಹಿರಿಯ ಉಪ ಪ್ರಾಸಿಕ್ಯೂಟಿಂಗ್ ವಕೀಲರು ಮತ್ತು ಇತರ ಅಧಿಕಾರಿಗಳ ಮೂಲಕ ಪ್ರಕರಣದ ತನಿಖೆ ನಡೆಸಿದ್ದೇವೆ. ಈ ವೇಳೆ ವಾಷಿಂಗ್ಟನ್ ಸ್ಟೇಟ್ ಕಾನೂನಿನಡಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಮಗೆ ಸಾಕಷ್ಟು ಸಾಕ್ಷ್ಯಗಳು ದೊರೆತಿಲ್ಲ” ಎಂದು ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಲೀಸಾ ಮ್ಯಾನಿಯನ್ ತಿಳಿಸಿದ್ದಾರೆ.

ಘಟನೆಯ ಬಾಡಿಕ್ಯಾಮ್‌ ಫೂಟೇಜ್‌ನಲ್ಲಿ ಸಿಯಾಟಲ್‌ ಪೊಲೀಸ್‌ ಇಲಾಖೆಯ ಅಧಿಕಾರಿ ಡೇನಿಯಲ್‌ ಆಡೆರರ್‌ ಈ ಅಪಘಾತವನ್ನು ಗೌಣವಾಗಿ ಪರಿಗಣಿಸಿದ್ದರಲ್ಲದೆ, ಕೆವಿನ್‌ ಡೇವ್‌ ಅವರು ತಪ್ಪು ಮಾಡಿದ್ದಾರೆಂಬ ವಾದವನ್ನು ಅಲ್ಲಗಳೆದಿದ್ದರು ಹಾಗೂ ಕ್ರಿಮಿನಲ್‌ ತನಿಖೆ ಅಗತ್ಯವಿಲ್ಲ ಎಂದಿದ್ದರು. ವಿದ್ಯಾರ್ಥಿನಿ ಸಾವನ್ನಪ್ಪಿರುವುದನ್ನು ಬೊಟ್ಟು ಮಾಡುತ್ತಾ ಡೇನಿಯರ್‌ ನಗುತ್ತಿರುವ ಬಾಡಿಕ್ಯಾಮ್‌ ವಿಡಿಯೋ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು.

ಪೋಲೀಸ್ ಅಧಿಕಾರಿಯ ವಿರುದ್ಧದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಯುಎಸ್ ನ್ಯಾಯಾಲಯದ ನಿರ್ಧಾರವನ್ನು ಬಿಆರ್‌ಎಸ್ ಪಕ್ಷದ ನಾಯಕ ಹಾಗೂ ತೆಲಂಗಾಣದ ಮಾಜಿ ಸಚಿವ ಕೆ.ಟಿ ರಾಮರಾವ್(ಕೆಟಿಆರ್) ಅವರು ‘ಅವಮಾನಕರ’ ಎಂದಿದ್ದಾರೆ. ಯುಎಸ್ ನ್ಯಾಯಾಲಯದ ತೀರ್ಪು ‘ಸ್ವೀಕಾರ್ಹವಲ್ಲ’ ಎಂದಿರುವ ಅವರು, ಪ್ರಕರಣದ ಸ್ವತಂತ್ರ ತನಿಖೆಗೆ ಯುಎಸ್ ಅನ್ನು ಒತ್ತಾಯಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರಕರಣದ ಕುರಿತು ಯುಎಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಭಾರತದ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರಿಗೆ ಒತ್ತಾಯಿಸಿರುವ ಕೆಟಿಆರ್, “ಉನ್ನತ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ ಯುವತಿಯ ಜೀವವನ್ನು ಬಲಿ ಪಡೆದಿರುವುದು ದುರಂತವಾದರೆ, ಆಕೆಗೆ ನ್ಯಾಯ ಸಿಗದಿರುವುದು ಅದಕ್ಕಿಂತ ದೊಡ್ಡ ದುರಂತ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...